ಬೆಂಗಳೂರಿನ ಫುಟ್ ಪಾತ್ ಮೇಲಿದ್ದ 620 ಟ್ರಾನ್ಸ್ ಫಾರ್ಮರ್ ತೆರವು
ಬೆಂಗಳೂರು, ಜು.4. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಪಾದಚಾರಿ ಮಾರ್ಗಗಳ ಮೇಲಿನ ವಿದ್ಯುತ್ ಪರಿವರ್ತಕಗಳನ್ನು ತೆರವು ಮಾಡುವ ಕಾರ್ಯವನ್ನು ಕೊನೆಗೂ ಬೆಸ್ಕಾಂ ಕೈಗೊಂಡಿದ್ದು, ಸದ್ಯ ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್ಫಾರ್ಮರ್ ಪೈಕಿ 620 ಸ್ಥಳಾಂತರ ಮಾಡಿದೆ.
ಅಲ್ಲದೆ, ಇನ್ನೆರಡು ತಿಂಗಳಲ್ಲಿ 862 ಟ್ರಾನ್ಸ್ರ್ಮರ್ಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೈಕೋರ್ಟ್ಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಬೆಸ್ಕಾಂ ತಿಳಿಸಿದೆ.
ನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್ ಫಾರ್ಮರ್ ತೆರವು ಕೋರಿ ನಿವೃತ್ತ ವಿಂಗ್ ಕಮಾಂಡರ್ ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ. ಜೆ.ಎಂ. ಖಾಜಿ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಆಗ ಬೆಸ್ಕಾಂ ಪರ ವಕೀಲರು, ಪಾದಾಚಾರಿ ಮಾರ್ಗಗಳಲ್ಲಿನ ವಿದ್ಯುತ್ ಪರಿವರ್ತಕಗಳನ್ನು ತೆರವುಗೊಳಿಸುವ ಕುರಿತು ಕೈಗೊಂಡಿರುವ ಕ್ರಮಗಳನ್ನು ಒಳಗೊಂಡ ಪ್ರಮಾಣಪತ್ರ ಸಲ್ಲಿಸಿದರು. ಆ ಪ್ರಮಾಣಪತ್ರದಲ್ಲಿನ್ಯಾಯಾಲಯ ನಿರ್ದೇಶನದಂತೆ ಪಾದಚಾರಿ ಮಾರ್ಗಗಳ ಮೇಲೆ ಅಳವಡಿಸಲಾಗಿರುವ 2,587 ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರ ಮಾಡಲು ಗುರುತಿಸಲಾಗಿದ್ದು, ಆ ಪೈಕಿ ಈಗಾಗಲೇ 620 ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸಲಾಗಿದೆ. 862 ವಿದ್ಯುತ್ ಪರಿವರ್ತಕಗಳನ್ನು ಸ್ಥಳಾಂತರಿಸಲು 2 ತಿಂಗಳ ಗುರಿ ಇಟ್ಟುಕೊಳ್ಳಲಾಗಿದೆ. ಉಳಿದವನ್ನು ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುವುದು, ಅದಕ್ಕಾಗಿ ಕಾಲಾವಕಾಶ ನೀಡುವಂತೆ ಕೋರಿ ಮೆಮೋ ಸಲ್ಲಿಸಿದರು.
ಬೆಸ್ಕಾಂ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಟ್ರಾನ್ಸ್ಫಾರ್ಮರ್ಗಳ ಸ್ಥಳಾಂತರದ ಕಾರ್ಯಪ್ರಗತಿ ವರದಿ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಿತು.
Recommended Video
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications