'ಬ್ರ್ಯಾಂಡ್ ಬೆಂಗಳೂರು' ಉಪಕ್ರಮದಲ್ಲಿ 'ಅಗ್ನಿ ಸುರಕ್ಷತಾ ಕ್ರಮ' ಸೇರಿಸಲು ಶಿಫಾರಸು
ಬೆಂಗಳೂರು, ಅಕ್ಟೋಬರ್ 19: ಬೆಂಗಳೂರಿನ ಎಸ್ಜಿ ಪಾಳ್ಯದ ಮಡ್ಪೈಪ್ ಕೆಫೆಯಲ್ಲಿ ಬುಧವಾರವಷ್ಟೇ ಭಾರೀ ಅಗ್ನಿ ದುರಂತ ಸಂಭವಿಸಿತ್ತು. ಇದಕ್ಕೂ ಮೊದಲು ನಗರದ ವಿವಿಧೆಡೆ ಅಗ್ನಿ ಅವಘಡಗಳು ನಡೆದಿವೆ. ಈ ಸಂಬಂಧ ಸರ್ಕಾರೇತರ ಸಂಸ್ಥೆಯಾಗಿರುವ 'ಬಿಯಾಂಡ್ ಕಾರ್ಲ್ಟನ್ (ಬಿಸಿ)' ಅಗ್ನಿ ಸುರಕ್ಷತಾ ಕ್ರಮಗಳನ್ನು ಬ್ರ್ಯಾಂಡ್ ಬೆಂಗಳೂರು ಉಪಕ್ರಮದಲ್ಲಿ ಅಳವಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಶಿಫಾರಸು ಮಾಡಿತ್ತು.
ಕಾರ್ಲ್ಟನ್ ಟವರ್ಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಟ್ಟು 09 ಮಂದಿ ಸಾವನ್ನಪ್ಪಿದ ನಂತರ ಬಿಸಿ ಮ್ಯಾನೇಜಿಂಗ್ ಟ್ರಸ್ಟಿ ಉದಯ್ ವಿಜಯನ್ ಅವರು ಎಲ್ಲಾ ಎತ್ತರದ ಕಟ್ಟಡಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಹೇಳಿದರು. ಅಗ್ನಿ ಅವಘಡದ ನಂತರ 2011 ರಲ್ಲಿ ಈ ಕಾನೂನು ಜಾರಿಗೆ ಬಂತು.

ಅದಷ್ಟೇ ಅಲ್ಲದೇ ಎತ್ತರದ ಕಟ್ಟಡಗಳು ಅಗ್ನಿ ಸುರಕ್ಷತೆಯ ಎಲ್ಲ ಅಂಶಗಳನ್ನು ಹೊಂದಿರಬೇಕು. ಅಂದರೆ ಅಗ್ನಿ ಅವಘಡ ಸಂಭವಿಸಿದ ವೇಳೆ ಅಗ್ನಿಶಾಮಕ ಟೆಂಡರ್ಗಳು ತುರ್ತು ಸಂದರ್ಭಗಳಲ್ಲಿ ಚಲಿಸಲು ಅನುವಾಗುವಂತೆ ವ್ಯವಸ್ಥೆ ಹೊಂದಿರಬೇಕು ಎಂದು ಹೇಳಲಾಗಿದೆ.
ದೊಡ್ಡ ಕಟ್ಟಡಗಳಲ್ಲಿ ಆಗಾಗ ಪರಿಶೀಲನೆ ಅಗತ್ಯ
ಇನ್ನೂ ಪಬ್ನಲ್ಲಿ ನಡೆದ ಬೆಂಕಿ ಅವಘಡಕ್ಕೆ ಏನು ಕಾರಣವೆಂದು ತನಿಖೆ ಬಳಿಕ ಗೊತ್ತಾಗಲಿದೆ. ಇಂತಹ ಬೃಹತ್ ಅಗ್ನಿ ದುರಂತ ನಡೆಯದಂತೆ ಸಂಬಂಧಿತ ಏಜೆನ್ಸಿಗಳು ಆಗಾಗ ತಪಾಸಣೆ ಕೈಗೊಳ್ಳಬೇಕು. ಸುರಕ್ಷತೆಯನ್ನು ಆಗಾಗ ಖಚಿತಪಡಿಸಿಕೊಳ್ಳಬೇಕು. ಇಂತಹ ಕ್ರಮಗಳನ್ನು ಬ್ರ್ಯಾಂಡ್ ಬೆಂಗಳೂರಿಗೆ ಸೇರಿಸಿಕೊಳ್ಳಬೇಕು ಎಂದು ನಾವು ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದು ವಿಜಯನ್ ತಿಳಿಸಿದ್ದಾರೆ.
ಹೋಟೆಲ್, ರೆಸ್ಟೋರೆಂಟ್ ಮತ್ತಿತರ ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಈ ರೀತಿ ಅತ್ಯಧಿಕ ಪ್ರಮಾಣದಲ್ಲಿ ಅನಿಲ ಮತ್ತು ಇತರ ರಾಸಾಯನಿಕಗಳಂತಹ ವಸ್ತುಗಳನ್ನು ಸಂಗ್ರಹಿಸುವ ಕುರಿತು ಲೆಕ್ಕಪರಿಶೋಧನೆ ನಡೆಸುವ ಕುರಿತು ಅವರು ಪ್ರಶ್ನಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಪರಿಶೀಲನೆ ಆಗಬೇಕು. ಜೊತೆಗೆ ನಮ್ಮ ಬಿಸಿಯ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅವರು ಒತ್ತಾಯಿಸಿದರು.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ











Click it and Unblock the Notifications