ಬೆಂಗಳೂರಿನ ಉಪಮೇಯರ್ ಪಟ್ಟಕ್ಕೆ ಭದ್ರೇಗೌಡ ಹೆಸರು ಬಹುತೇಕ ಅಂತಿಮ
Recommended Video

ಬೆಂಗಳೂರು, ಡಿಸೆಂಬರ್ 3: ಬಿಬಿಎಂಪಿ ಉಪಮೇಯರ್ ರಮೀಳಾ ಶಂಕರ್ ನಿಧನದಿಂದ ತೆರವಾಗಿದ್ದ ಬಿಬಿಎಂಪಿ ಉಪ ಮೇಯರ್ ಹುದ್ದೆಗೆ ಜೆಡಿಎಸ್ನ ಭದ್ರೇಗೌಡ ಹಾಗೂ ಇಮ್ರಾನ್ ಪಾಷಾ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ವರಿಷ್ಠರು ನಾಗಪುರ ವಾರ್ಡ್ನ ಭದ್ರೇಗೌಡ ಅವರಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಡಿಸೆಂಬರ್ 5 ರಂದು ಮಧ್ಯಾಹ್ನ 1 ಗಂಟೆಗೆ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನಡುವೆ ಮೇಯರ್ ಹಾಗೂ ಉಪಮೇಯರ್ ಪಟ್ಟ ಹಂಚಿಕೆಯಾಗಿರುವುದರಿಂದ ಉಪ ಮೇಯರ್ ಹುದ್ದೆ ಜೆಡಿಎಸ್ ಪಾಲಾಗಿದೆ.
ಹೀಗಾಗಿ ಕಳೆದ ಸೆಪ್ಟೆಂಬರ್ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜು ಹಾಗೂ ಉಪ ಮೇಯರ್ ಆಗಿ ರಮೀಳಾ ಉಮಾಶಂಕರ್ ಆಯ್ಕೆಯಾಗಿದ್ದರು. ಆದರೆ ಉಪ ಮೇಯರ್ ಆಗಿ ಆಯ್ಕೆಯಾದ ಆರೇ ದಿನಗಳಲ್ಲಿ ರಮೀಳಾ ನಿಧನ ಹೊಂದಿದ್ದರು. ಹೀಗಾಗಿ ಉಪಮೇಯರ್ ಸ್ಥಾನ ತೆರವಾಗಿದ್ದು, ಬುಧವಾರ ಹೊಸ ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಈಗಾಗಲೇ ಶನಿವಾರ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಪಕ್ಷದ ವರಿಷ್ಠರು ಸಭೆ ನಡೆಸಿದ್ದು, ಇಮ್ರಾನ್ ಪಾಷಾ ಹಾಗೂ ಭದ್ರೇಗೌಡ ಇಬ್ಬರು ಆಕಾಂಕ್ಷಿಗಳಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಭದ್ರೇಗೌಡ ಅವರನ್ನು ಉಪ ಮೇಯರ್ ಆಗಿ ನಿಯೋಜಿಸಲು ಒಲವು ತೋರಿದ್ದು ಮಂಗಳವಾರ ಸಂಜೆ ಅಂತಿಮವಾಗಿ ಹೆಸರನ್ನು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ನಡುವೆ ಉಪಮೇಯರ್ ಹುದ್ದೆಗೆ ಆಕಾಂಕ್ಷಿಯಾಗಿರುವ ಇಮ್ರಾನ್ ಪಾಷಾ ಬುಧವಾರ ಬೆಳಗ್ಗೆ ತಮ್ಮ ಬೆಂಬಲಿಗರ ಸಭೆ ಕರೆದಿದ್ದು ವರಿಷ್ಠರ ನಿರ್ಧಾರ ಕುರಿತಂತೆ ತಮ್ಮ ಬೆಂಬಲಿಗರಿಗೆ ಮಾಹಿತಿ ನೀಡಲಿದ್ದಾರೆ.
ಪಕ್ಷದ ವರಿಷ್ಠರು ಈಗಾಗಲೇ ಭದ್ರೇಗೌಡ ಅವರ ಪರ ಒಲವು ತೋರಿರುವುದರಿಂದ ಇಮ್ರಾನ್ ಪಾಷಾ ಅವರ ಮುಂದಿನ ನಡೆ ಏನು ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ. ಒಂದು ವೇಳೆ ಉಪ ಮೇಯರ್ ಆಯ್ಕೆ ವಿಚಾರದಲ್ಲಿ ಭಿನ್ನಮತ ಭುಗಿಲೆದ್ದರೆ ಚುನಾವಣೆಯಲ್ಲಿ ಆಗಬಹುದಾದ ಹಿನ್ನಡೆಯನ್ನು ತಪ್ಪಿಸಿಕೊಳ್ಳಲು ಜೆಡಿಎಸ್ ಸಂಧಾನ ತಂತ್ರ ಅನುಸರಿಸುತ್ತಿದ್ದು, ಭದ್ರೇಗೌಡ ಅವರ ಹೆಸರನ್ನು ಪ್ರಕಟಿಸದೆ ಗೌಪ್ಯವಾಗಿಡುವ ಸಾಧ್ಯತೆ ಇದೆ.
-
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications