ಎನ್ಡಿಪಿಎಸ್ ಕಾಯ್ದೆಯಡಿ 'ಭಾಂಗ್’ ಗೆ ನಿಷೇಧವಿಲ್ಲ: ಹೈಕೋರ್ಟ್
ಬೆಂಗಳೂರು, ಅ 28: ಮಾದಕ ದ್ರವ್ಯ ಮತ್ತು ಉದ್ದೀಪನ ವಸ್ತುಗಳ ಸೇವನೆ ತಡೆ (ಎನ್ಡಿಪಿಎಸ್) ಕಾಯ್ದೆ ಅಡಿಯಲ್ಲಿ 'ಭಾಂಗ್' ಅನ್ನು ನಿಷೇಧಿವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಅದನ್ನು ಮಾದಕ ದ್ರವ್ಯ ಮತ್ತು ಅಥವಾ ಪಾನೀಯವೆಂದು ಘೋಷಿಸಲಾಗಿಲ್ಲ ಎಂದು ಹೇಳಿರುವ ನ್ಯಾಯಾಲಯ, 29 ಕಿಲೋಗ್ರಾಂಗಳಷ್ಟು ಭಾಂಗ್ (Bhang) ಮಿಶ್ರಣವನ್ನು ಹೊಂದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಜಾಮೀನು ನೀಡಿದೆ.
ಬೇಗೂರು ಪೊಲೀಸರು ಜೂ.1ರಂದು ಬಿಹಾರ ಮೂಲದ ರೋಷನ್ ಕುಮಾರ್ ಮಿಶ್ರಾ ಎಂಬಾತನನ್ನು ಬಂಧಿಸಿ ಆತನಿಂದ 400 ಗ್ರಾಂ ಗಾಂಜಾ ಜೊತೆಗೆ ಬ್ರಾಂಡ್ 'ಭಾಂಗ್ ' ಅನ್ನು ವಶಪಡಿಸಿಕೊಂಡಿದ್ದರು.

ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯವು ತಿರಸ್ಕರಿಸಿತು, ನಂತರ ಅವರು ಹೈಕೋರ್ಟ್ ಮೊರೆ ಹೋಗಿದ್ದರು ಮತ್ತು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಆತನಿಗೆ ಜಾಮೀನು ಮಂಜೂರು ಮಾಡಿದೆ.
ವೈಜ್ಞಾನಿಕ ಪುರಾವೆ ಇಲ್ಲ: ಭಾಂಗ್ ಅನ್ನು ಚರಸ್ ಅಥವಾ ಗಾಂಜಾ ಅಥವಾ ಗಾಂಜಾ ಎಲೆಗಳಿಂದ ತಯಾರಿಸಲಾಗುತ್ತದೆ ಎಂದು ತೋರಿಸಲು ಈ ನ್ಯಾಯಾಲಯದ ಮುಂದೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಅಲ್ಲದೆ, ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಗಾಂಜಾದ ಎಲೆಗಳು ಮತ್ತು ಬೀಜಗಳನ್ನು ಗಾಂಜಾ ವ್ಯಾಖ್ಯಾನದಿಂದ ಹೊರಗಿಡಲಾಗಿದೆ ಮತ್ತು ಎನ್ಡಿಪಿಎಸ್ ಕಾಯಿದೆಯಲ್ಲಿ ಎಲ್ಲಿಯೂ ಭಾಂಗ್ ಅನ್ನು ನಿಷೇಧಿತ ಪಾನೀಯ ಅಥವಾ ನಿಷೇಧಿತ ಔಷಧ ಎಂದು ಉಲ್ಲೇಖಿಸಲಾಗಿಲ್ಲ" ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಸುಪ್ರೀಂಕೋರ್ಟ್ನ ಮಧುಕರ್ ವರ್ಸಸ್ ಸ್ಟೇಟ್ ಆಫ್ ಮಹಾರಾಷ್ಟ್ರ ಮತ್ತು ಅರ್ಜುನ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಹರಿಯಾಣ- ಎರಡು ತೀರ್ಪುಗಳನ್ನು ಉಲ್ಲೇಖಿಸಿರುವ ಹೈಕೋರ್ಟ್, ಈ ಎರಡೂ ಪ್ರಕರಣಗಳಲ್ಲೂ ಭಂಗ್ ಗಾಂಜಾ ಅಲ್ಲ, ಅದು ಎನ್ ಡಿಪಿಎಸ್ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಹೇಳಿದೆ.
ವಿಧಿ ವಿಜ್ಞಾನ ಪ್ರಯೋಗಾಲದ ವರದಿ ಬರುವವರೆಗೆ ಭಾಂಗ್ ಅನ್ನು ಗಾಂಜಾದಿಂದಲೇ ತಯಾರಿಸಲಾಗಿದೆ ಎಂಬ ತೀರ್ಮಾನಕ್ಕೆ ಬರಲಾಗದು ಎಂದು ಹೇಳಿರುವ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಲಾಗುದು ಎಂದು ಆದೇಶಿಸಿದೆ. ಆತ ಬಳಿ ದೊರೆತಿರುವುದು ಸಣ್ಣ ಪ್ರಮಾಣದ ಗಾಂಜಾ ಅಷ್ಟೇ, ಹಾಗಾಗಿ ಆತ ಜಾಮೀನಿಗೆ ಅರ್ಹ ಎಂದು ನ್ಯಾಯಾಲಯ ತಿಳಿಸಿದೆ.
ಆರೋಪಿಗೆ 2 ಲಕ್ಷ ರೂ. ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದಲ್ಲಿ ಜಾಮೀನು ನೀಡಲು ನ್ಯಾಯಾಲಯ ಆದೇಶಿಸಿದೆ.
ನಿಷೇಧಿತ ಪದಾರ್ಥವಲ್ಲ: ರೋಷನ್ ಮಿಶ್ರಾ ಪರ ವಾದಿಸಿದ್ದ ವಕೀಲ ಎಸ್.ಮನೋಜ್ ಕುಮಾರ 'ಭಾಂಗ್' ಎಂಬುದು ಉತ್ತರ ಭಾರತದ ಲಸ್ಸಿ ಅಂಗಡಿಗಳಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಪಾನೀಯವಾಗಿದೆ. ಇದು ನಿಷೇಧಿತ ಔಷಧವಲ್ಲ. ಶಿವರಾತ್ರಿ ಹಬ್ಬದ ಸಮಯದಲ್ಲಿ ಈ ಪಾನೀಯವನ್ನು ಬಳಸಲಾಗುತ್ತದೆ ಮತ್ತು ಇದು ನಿಷೇಧಿತ ಪಾನೀಯವಲ್ಲ ಮತ್ತು ಕಾಯಿದೆ ಅಡಿಯಲ್ಲಿ ಬರುವುದಿಲ್ಲ'' ಎಂದು ಹೇಳಿದ್ದರು.
ಆದಾಗ್ಯೂ ಸರ್ಕಾರಿ ವಕೀಲರು, ಭಾಂಗ್ ಅನ್ನು ಗಾಂಜಾ ಎಲೆಗಳಿಂದ ತಯಾರಿಸಲಾಗುತ್ತದೆ ಮತ್ತು ಆದ್ದರಿಂದ ಇದು ಗಾಂಜಾ ವ್ಯಾಖ್ಯಾನದ ಅಡಿಯಲ್ಲಿ ಬರುತ್ತದೆ ಎಂದು ವಾದಿಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications