ಭಾರತ ರತ್ನ ಸಿಎನ್ಆರ್ ರಾವ್ ವ್ಯಕ್ತಿ ಚಿತ್ರ
ಬೆಂಗಳೂರು, ನ. 16 : ಹಿರಿಯ ವಿಜ್ಞಾನಿ ಪ್ರೊ ಸಿ.ಎನ್.ಆರ್. ರಾವ್ ಅವರಿಗೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಭಾರತ ರತ್ನ ನೀಡಿದೆ. ಪ್ರೊ ರಾವ್ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯವರು ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಸದ್ಯ ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹೆ ಪರಿಷತ್ ಅಧ್ಯಕ್ಷರಾಗಿ ಸೇವೆ ಅವರು ಸಲ್ಲಿಸುತ್ತಿದ್ದಾರೆ.
ಜೂನ್ 30, 1934ರಲ್ಲಿ ಜನಿಸಿದ ಪ್ರೊ.ಸಿ.ಎನ್.ಆರ್. ರಾವ್ ಅವರ ಪೂರ್ಣ ಹೆಸರು ಚಿಂತಾಮಣಿ ನಾಗೇಶ ರಾಮಚಂದ್ರರಾವ್. ರಸಾಯನ ಶಾಸ್ತ್ರ ವಿಷಯದಲ್ಲಿ ಸಾಕಷ್ಟು ಸಂಶೋಧನೆ ಮಾಡಿರುವ ರಾವ್ ಅವರಿಗೆ ದೇಶದ ಅತ್ಯುನ್ನತ ನಾಗರೀಕ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗಿದೆ.

ಸಿ.ಎನ್.ಆರ್. ರಾವ್ ಅವರ ತಂದೆ ಹನುಮಂತ ನಾಗೇಶ್ ರಾವ್, ತಾಯಿ ಹನುಂತಮ್ಮ ನಾಗಮ್ಮ ರಾವ್. ಮೈಸೂರು ವಿಶ್ವವಿದ್ಯಾಲಯದಲ್ಲಿ 1951ರಲ್ಲಿ ರಾವ್ ತಮ್ಮ ಪದವಿ ಅಧ್ಯಯನವನ್ನು ಮುಗಿಸಿದರು. ಎರಡು ವರ್ಷಗಳ ನಂತರ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಾಧ್ಯಪಕರಾಗಿ ರಾವ್ 1963ರಲ್ಲಿ ವೃತ್ತಿ ಜೀವನ ಆರಂಭಿಸಿದರು.
ರಸಾಯನ ಶಾಸ್ತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಪ್ರೊ.ಸಿ.ಎನ್.ಆರ್. ರಾವ್ ಅವರು 1, 4000 ರಿಸರ್ಚ್ ಪೇಪರ್ ಮತ್ತು 45 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ರಾವ್ ಬೆಂಗಳೂರಿನಲ್ಲಿರುವ ಜವಾಹರ್ ಲಾಲ್ ನೆಹರು ತಾರಾಲಯದ ಸಂಸ್ಥಾಪಕ ಅಧ್ಯಕ್ಷರು ಹೌದು.
ಪ್ರಾಧ್ಯಪಕರಾಗಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಾದ ಆಕ್ಸಫರ್ಡ್, ಕೇಂಬ್ರಿಡ್ಜ್ ಗಳಲ್ಲಿ ರಾವ್ ಉಪನ್ಯಾಸ ನೀಡಿದ್ದಾರೆ. ರಸಾಯನಶಾಸ್ತ್ರ ವಿಷಯಕ್ಕೆ ಸಿ.ಎನ್.ಆರ್.ರಾವ್ ಬಹಳಷ್ಟು ಕೊಡುಗೆ ನೀಡಿದ್ದಾರೆ. ಯು.ಎಸ್.ನ್ಯಾಷನಲ್ ಅಕಾಡಮೆ ಪ್ರಶಸ್ತಿ, ಅಮೆರಿಕಾ ಅಕಾಡಮಿಯ ವಿಜ್ಞಾನಿ ಪ್ರಶಸ್ತಿಯನ್ನು ರಾವ್ ಮುಡಿಗೇರಿಸಿಕೊಂಡಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications