ಸಿ.ಎನ್.ಆರ್.ರಾವ್ ಛಾಯಾಚಿತ್ರ ಪ್ರದರ್ಶನ
ಬೆಂಗಳೂರು, ಜೂ. 18 : ಭಾರತರತ್ನ ಪ್ರಶಸ್ತಿ ಪುರಸ್ಕೃತ ಸಿ.ಎನ್.ಆರ್.ರಾವ್ ಅವರ ಜೀವನದ ಅಮೂಲ್ಯ ಕ್ಷಣಗಳ ಛಾಯಾಚಿತ್ರ ಪ್ರದರ್ಶನವನ್ನು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು. ಬುಧವಾರ ರಾಜ್ಯ ಸರ್ಕಾರದ ವತಿಯಿಂದ ಅವರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮಂಗಳವಾರ ವಾರ್ತಾ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ರೊ. ಸಿ.ಎನ್.ಆರ್. ರಾವ್ ಅವರ ಜೀವನದ ಅಮೂಲ್ಯ ಕ್ಷಣಗಳ ಛಾಯಾಚಿತ್ರ ಪ್ರದರ್ಶನವನ್ನು ವಾರ್ತಾ ಸಚಿವ ಆರ್. ರೋಷನ್ ಬೇಗ್ ಉದ್ಫಾಟಿಸಿದರು.

ಅಪರೂಪದ ಈ ಛಾಯಾ ಚಿತ್ರ ಪ್ರದರ್ಶನದಲ್ಲಿ ಮೂರು ತಲೆಮಾರಿನ ಕುಟುಂಬದ ಹಿರಿಯ ಸದಸ್ಯರೊಂದಿಗೆ ಬಾಲಕ ಸಿ.ಎನ್.ಆರ್. ರಾವ್ ಇರುವ ಚಿತ್ರಗಳಿವೆ. ರಾವ್ ಅವರ ವಿದ್ಯಾರ್ಥಿ ಜೀವನ, ಕನ್ನಡ ನಾಟಕವೊಂದರಲ್ಲಿ ಅಭಿನಯಿಸಿದ ಚಿತ್ರ. ಪ್ರಯೋಗಾಲಯಗಳಲ್ಲಿ ತೊಡಗಿಕೊಂಡಿರುವ ಚಿತ್ರಗಳಗಳಿವೆ.
ಸಿ.ಎನ್.ಆರ್.ರಾವ್ ವಿವಾಹ, ಹಲವಾರು ಪ್ರಶಸ್ತಿ ಪಡೆಯುತ್ತಿರುವ ಚಿತ್ರಗಳು, ವಿವಿಧ ಗಣ್ಯವ್ಯಕ್ತಿಗಳೊಂದಿಗೆ ಅವರು ಸಂವಾದ ನಡೆಸುತ್ತಿರುವ ಚಿತ್ರಗಳನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ. ಇತ್ತೀಚೆಗೆ ಭಾರತರತ್ನ ಪ್ರಶಸ್ತಿ ಸ್ವೀಕರಿಸಿದ ಛಾಯಾಚಿತ್ರಗಳು ಪ್ರದರ್ಶನದಲ್ಲಿವೆ.

ವಾರ್ತಾ ಇಲಾಖೆ ಹಾಗೂ ವಿಜ್ಞಾನ ಮತ್ತು ತಂತ್ರಜಾನ ಇಲಾಖೆ ಹೊರತಂದಿರುವ ಸಿ.ಎನ್.ಆರ್. ರಾವ್ ಕುರಿತ ಸಾಕ್ಷ್ಯಚಿತ್ರಗಳ ಸಿ.ಡಿ. ಹಾಗೂ ಕನ್ನಡಕ್ಕೆ ಅನುವಾದವಾಗಿರುವ ಅವರು ಬರೆದಿರುವ ಪುಸ್ತಕಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. [ಸಿಎನ್ಆರ್ ಸಂದರ್ಶನ ಓದಿ]
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀಮತಿ ಉಮಾಶ್ರೀ, ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಇಲಾಖೆ ನಿರ್ದೇಶಕರಾದ ಎನ್.ಆರ್. ವಿಶುಕುಮಾರ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ಇಂದು ಅಭಿನಂದನಾ ಸಮಾರಂಭ : ಕರ್ನಾಟಕ ರಾಜ್ಯ ಸರ್ಕಾರವು ಭಾರತರತ್ನ ಪ್ರಶಸ್ತಿ ಪುರಸ್ಕೃತ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಜೂನ್ 18 ಸಂಜೆ 5ಗಂಟೆಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ವಾರ್ತಾ ಸಚಿವ ಆರ್. ರೋಷನ್ ಬೇಗ್, ವಿಧಾನ ಪರಿಷತ್ ಸಭಾಪತಿ ಡಿ. ಎಚ್. ಶಂಕರಮೂರ್ತಿ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications