ಬೆಂಗಳೂರಲ್ಲಿ ಬೀಫ್ ಫೆಸ್ಟಿವಲ್ ವಿರುದ್ಧ ಗೋರಕ್ಷಕರ ಪ್ರತಿಭಟನೆ
ಕೇರಳದಲ್ಲಿ ನಡೆಸಲಾದ ಗೋಹತ್ಯೆ ಕಮ್ ಬೀಫ್ ಫೆಸ್ಟಿವಲ್ ಈಗ ಬೆಂಗಳೂರಿಗೆ ಕಾಲಿಡುತ್ತಿದೆ. ಸೋಮವಾರ(ಮೇ 29) ಟೌನ್ ಹಾಲ್ ನಲ್ಲಿ ನಿಗದಿಯಾಗಿರುವ ಕಾರ್ಯಕ್ರಮಕ್ಕೆ ಗೋ ಪರಿವಾರದವರು ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮೇ 29: ಕೇರಳದಲ್ಲಿ ನಡೆಸಲಾದ ಗೋಹತ್ಯೆ ಕಮ್ ಬೀಫ್ ಫೆಸ್ಟಿವಲ್ ಈಗ ಬೆಂಗಳೂರಿಗೆ ಕಾಲಿಡುತ್ತಿದೆ. ಸೋಮವಾರ(ಮೇ 29) ಟೌನ್ ಹಾಲ್ ನಲ್ಲಿ ನಿಗದಿಯಾಗಿರುವ ಕಾರ್ಯಕ್ರಮಕ್ಕೆ ಗೋ ಪರಿವಾರದವರು ವಿರೋಧ ವ್ಯಕ್ತಪಡಿಸಿ, ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಬೀಫ್ ಫೆಸ್ಟಿವಲ್ ನಿಲ್ಲಿಸಿ ಎಂದು ಅಭಿಯಾನ ಆರಂಭಿಸಿದ್ದಾರೆ.
ಅಕ್ರಮವಾಗಿ ಪಶುಗಳ(ಹಸು,ಎಮ್ಮೆ, ಒಂಟೆ, ಎತ್ತು, ಇತ್ಯಾದಿ)ಮಾರಾಟವನ್ನು ತಪ್ಪಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ನಿಯಮಾವಳಿಗಳ ವಿರುದ್ಧ ಕೇರಳದಲ್ಲಿ ಭಾರಿ ವಿರೋಧ, ಪ್ರತಿಭಟನೆ ವ್ಯಕ್ತವಾಗಿತ್ತು.[ಗೋಹತ್ಯೆ ನಿಷೇಧದ ವಿರುದ್ಧ ಗೋಮಾಂಸ ಭಕ್ಷಣೆ ಉತ್ಸವ]

ಕೇರಳದಲ್ಲಿ ಬಿಜೆಪಿ ಹೊರತುಪಡಿಸಿ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಾಟಿಕ್ ಫ್ರಂಟ್(ಯುಡಿಎಫ್), ಎಲ್ ಡಿ ಎಫ್ ಇನ್ನಿತರ ಪಕ್ಷಗಳು ಸೇರಿದಂತೆ ದನದ ಮಾಂಸ ಭಕ್ಷಕರು ನಡುರಸ್ತೆಯಲ್ಲಿ ಗೋ ಹತ್ಯೆ ಮಾಡಿ, ಮಾಂಸ ಹಂಚಿಕೊಂಡು ಪ್ರತಿಭಟನೆ ಮಾಡಿದ್ದರು. ನಂತರ ಮಾಂಸದ ಪಾರ್ಸೆಲ್ ವೊಂದನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳಿಸುವ ಯೋಜನೆ ಹಾಕಿದ್ದರು.[ಕಸಾಯಿಖಾನೆ ಮುಚ್ಚಿ, ಆಹಾರ ಹಕ್ಕು ಕಸಿದುಕೊಂಡಿದ್ದೇಕೆ? : ಯೋಗಿಗೆ ಪ್ರಶ್ನೆ]
Let's voice out louder..!! Let's not allow our garden city to be slaughter city..! @OneindiaKannada #StopBeefFest
— Rajashekar K Shetty (@Shetty_Belanje) May 29, 2017
pic.twitter.com/nH6l6Fz7Tu
ಈಗ ಬೀಫ್ ಫೆಸ್ಟಿವಲ್ ಬೆಂಗಳೂರಿನಲ್ಲಿ ಆಯೋಜನೆಗೊಂಡಿದೆ. ಇದರ ವಿರುದ್ಧ ಗೋ ರಕ್ಷಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಭಾರತದ ಅನೇಕ ರಾಜ್ಯಗಳಲ್ಲಿ ಅಕ್ರಮ ಗೋವುಗಳ ಸಾಗಾಟ, ಮಾರಾಟ, ಹತ್ಯೆ ನಡೆಯುತ್ತಲೇ ಇದೆ. ಈ ಬಗ್ಗೆ ರಾಜ್ಯ ಸರ್ಕಾರಗಳು ಯಾವುದೇ ಸಮರ್ಥ ಕಾನೂನು ರೂಪಿಸಿಲ್ಲ. ಗೋ ಹತ್ಯೆ ನಿಷೇಧ ಹೇರಿಕೆಗೆ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸುವಂತೆ ಕೋರಿ ಸುಪ್ರೀಂಕೋರ್ಟಿಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
@girishalva @sagenaradamuni @malviyamit @mohnotgaurav18 @devyanidilli @hindu_g We don't want to happen Namma Bengaluru as Kerala!#StopBeefFest organised at Town Hall Bengaluru! pic.twitter.com/3AzrEx06j0
— #GiveUpAMeal Vidya (@Vidyakailankaje) May 29, 2017
ಆದರೆ, ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ವಿರೋಧಾಭಾಸದಿಂದ ಕೂಡಿದ್ದು, ಕೇರಳದಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications