ಬಿಜೆಪಿ ಹಿರಿಯ ನಾಯಕ ಬಿ.ಬಿ ಶಿವಪ್ಪ ವಿಧಿವಶ
ಬೆಂಗಳೂರು, ಜುಲೈ 31: ಬಿಜೆಪಿ ಹಿರಿಯ ನಾಯಕ ಬಿ.ಬಿ ಶಿವಪ್ಪ(89) ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ಇಚ್ಛೆಯಂತೆ ಅವರ ಅಂತಿಮ ಸಂಸ್ಕಾರವನ್ನು ಅವರ ಊರಾದ ಸಕಲೇಶಪುರದ ಕುಂಬಾರಹಳ್ಳಿಯ ಎಸ್ಟೇಟಿನಲ್ಲಿ ನೆರವೇರಿಸಲಾಗುತ್ತದೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಪಾರ್ಥೀವ ಶರೀರವನ್ನು ಇರಿಸಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡುವ ಸಾಧ್ಯತೆಯಿದೆ. ಮಧ್ಯಾಹ್ನದ ವೇಳೆ ಸಕಲೇಶಪುರಕ್ಕೆ ಪಾರ್ಥೀವ ಶರೀರವನ್ನು ರವಾನಿಸಲಾಗುತ್ತದೆ.
ಬಿ.ಬಿ.ಶಿವಪ್ಪ ಅವರು ಸಕಲೇಶಪುರದಲ್ಲಿ 1994 ಮತ್ತು 1999ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

* 1989ರ ವಿಧಾನಸಭೆ ಚುನಾವಣೆಯಲ್ಲಿ ಸೋಮವಾರಪೇಟೆಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
* 1991ರ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
* ಸತತ ಸೋಲುಗಳಿಂದ ಕಂಗೆಡದ ಬಿ.ಬಿ.ಶಿವಪ್ಪ ಅವರು ಪಕ್ಷ ಸಂಘಟಿಸಿ 1994ರಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
*1999ರ ಚುನಾವಣೆಯಲ್ಲೂ ಸಕಲೇಶಪುರದಿಂದ ಮರು ಆಯ್ಕೆಯಾದರು. ಆದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಸಿಗದ ಕಾರಣ, ಬಂಡಾಯವೆದ್ದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿ ಎಂಬ ಕಾರಣಕ್ಕೆ ಪಕ್ಷದಿಂದ ಅಮಾನತಾದರು.

* 2005ರಲ್ಲಿ ಮತ್ತೆ ಬಿಜೆಪಿ ಸೇರಿದರು. 2012ರಲ್ಲಿ ಬಿಎಸ್ ಯಡಿಯೂರಪ್ಪ ಪರ ಸರಣಿ ಆರೋಪ ಮಾಡಿ, ಪಕ್ಷದ ಹೈಕಮಾಂಡ್ ಗೆ ಪತ್ರ ಬರೆದು ಚುರುಕು ಮುಟ್ಟಿಸಿದ್ದರು.
More From
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications