ಮುಜಾಹಿದೀನ್ ಸಂಘಟನೆಯ ನಾಲ್ವರು ಸದಸ್ಯರು ಪೊಲೀಸರ ವಶ
ಬೆಂಗಳೂರು, ಜುಲೈ, 08 : ಸ್ಫೋಟಕ ರವಾನೆ ಒಳಗೊಂಡಂತೆ ಹಲವು ದುಷ್ಕೃತ್ಯದಲ್ಲಿ ಸಂಬಂಧ ಹೊಂದಿದ್ದಾರೆ ಎಂದು ಭಟ್ಕಳ ಮೂಲದ ನಾಲ್ವರು ಉಗ್ರವಾದಿಗಳ ಮೇಲೆ ಬೆಂಗಳೂರು ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ಸಯ್ಯದ್ ಇಸ್ಮಾಯಿಲ್ ಅಫೆಕ್, ಸಯ್ಯದ್ ಸುಬೂರ್, ಸದ್ದಂ ಹುಸೇನ್, ರಿಯಾಜ್ ಅಹ್ಮದ್ ಸಯ್ಯದೀ ಈ ನಾಲ್ವರು ಕರಾಚಿಯಲ್ಲಿರುವ ಉಗ್ರವಾದಿ ರಿಯಾಜ್ ಭಟ್ಕಳ್, ಇಕ್ಬಾಲ್ ಶಾಹ್ ಬಂದ್ರಿ ಹಾಗೂ ಅತೀಫ್ ಜೊತೆಗೆ ಸಂಪರ್ಕ ಹೊಂದಿದ್ದಾರೆಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ[ಬಿರಿಯಾನಿಗೆ ಹೆಸರಾಗಿದ್ದ ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]

ನಾಲ್ವರ ಮೇಲೆ ಚಾರ್ಜ್ ಶೀಟ್ ದಾಖಲಿಸಿದ ಪೊಲೀಸರು ಇವರ ಬಳಿ ಇದ್ದಂತಹ ಎಲೆಕ್ಟ್ರಾನಿಕ್ ಆಸ್ಪೋಟಕಗಳು, ಗಿಲಾಟಿನ್ ಸ್ಟಿಕ್, ಅಮೋನಿಯಂ ನೈಟ್ರೇಟ್, ಜಿಹಾದಿ ಸಾಹಿತ್ಯ ಮತ್ತು ಪೋಸ್ಟರ್ಸ್, ಬಾಂಬ್ ಸ್ಫೋಟಕ ಸಂಬಂಧಿಸಿದ ಸರ್ಕ್ಯೂಟ್ ಬೋರ್ಡ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತನಾದ ಇಸ್ಮಾಯಿಲ್ ಅಫೆಕ್ ಬಾಂಬ್ ಸ್ಫೋಟದಲ್ಲಿ ತರಬೇತಿ ಹೊಂದಿದ್ದು, ರಿಯಾಜ್ ಭಟ್ಕಳ್, ಇಕ್ಬಾಲ್ ಭಟ್ಕಳ್ ಮತ್ತು ಅಫೀಫ್ ಅವರೊಂದಿಗೆ ಭಾರತದ ವಿವಿಧ ಭಾಗಗಳಲ್ಲಿ ನಡೆಸುವ ಬಾಂಬ್ ಸ್ಫೋಟಕ್ಕೆ ಬೇಕಾದ ಬೆಂಬಲ ನೀಡುವುದರ ಬಗ್ಗೆ ತಿಳಿಸಲು ತೆರಳಿದ್ದನು ಎಂದು ತಿಳಿದು ಬಂದಿದೆ. ಅಲ್ಲದೇ ಬಂಧನಕ್ಕೆ ಒಳಗಾದ ಈ ನಾಲ್ವರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಕರಾಚಿ ಪೊಲೀಸರಿಗೆ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications