ಮಕ್ಕಳನ್ನು ಭೇಟಿಯಾಗಲು ಪರಪ್ಪನ ಅಗ್ರಹಾರಕ್ಕೆ ಬಂದ ಭವಾನಿ ರೇವಣ್ಣ
ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರನ್ನು ನೋಡಲು ತಾಯಿ ಭವಾನಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿಗೆ ದೌಡಾಯಿಸಿದ್ದರು. ಪರಪ್ಪನ ಅಗ್ರಾಹರ ಜೈಲಿನ ಆವರಣದಲ್ಲಿನ ಕ್ಯಾಮೆರಾಗಳನ್ನು ಕಂಡು ಭವಾನಿ ಮುಜಗರಕ್ಕೆ ಈಡಾದಂತೆ ಆಗಿ, ಕೈ ಗಳಿಂದ ತಮ್ಮ ಮುಖವನ್ನು ಮುಚ್ಚಿಕೊಂಡು ಸಾಗಿದರು.
ಪುತ್ರ ಪ್ರಜ್ವಲ್ ರೇವಣ್ಣ ಜರ್ಮನಿಯ ಪ್ರವಾಸವನ್ನು ಮುಗಿಸಿ ನೇರವಾಗಿ ಪೊಲೀಸರ ಅತಿಥಿ ಆಗಿದ್ದಾರೆ. ಹೀಗಾಗಿ ತಾಯಿಯನ್ನು ಭೇಟಿ ಆಗಲು ಆಗಿರಲಿಲ್ಲ. ಇಂದು ಭವಾನಿ ರೇವಣ್ಣ ಅವರು ಕೇಂದ್ರ ಕಾರಗ್ರಹಕ್ಕೆ ಭೇಟಿ ನೀಡಿ ಮಗನನ್ನು ವಿಚಾರಿಸಿದರು.

ಮಾಜಿ ಸಚಿವ ರೇವಣ್ಣ ಅವರ ಸಂಪೂರ್ಣ ಕುಟುಂಬಕ್ಕೆ ಈಗ ಸಂಕಷ್ಟ ಎದುರಾಗಿದೆ. ಪುತ್ರರಾದ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಸಿಐಡಿ ಕಸ್ಟಡಿ ಹಾಗೂ ಜೈಲು ಸೇರಿದ್ದಾರೆ. ಮಾಜಿ ಸಚಿವ ರೇವಣ್ಣ ಸಹ ಜೈಲಿನ ವಾಸವನ್ನು ಅನುಭವಿಸಿ ಬಂದಿದ್ದಾರೆ. ಪತ್ನಿ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಎಲ್ಲ ಘಟನೆಗಳಿಂದ ಮನ ನೊಂದಿರುವ ಭವಾನಿ ರೇವಣ್ಣ ಜೈಲಿಗೆ ಬರುವವ ವೇಳೆ ಮಾಧ್ಯಮದವನ್ನು ಕಂಡು ತಕ್ಷಣ ಮುಖ ಮುಚ್ಚಿಕೊಳ್ಳುವ ಪ್ರಯತ್ನವನ್ನು ಮಾಡಿದರು.
ಚುನಾವಣೆಯ ವೇಳೆ ಪೆನ್ಡ್ರೈವ್ ವಿಚಾರ ರಾಜ್ಯದಲ್ಲಿ ಬಹುವಾಗಿ ಚರ್ಚೆಗೀಡಾಯಿತು. ಮಾಜಿ ಸಂಸದ್ ಪ್ರಜ್ವಲ್ ರೇವಣ್ಣ, ವಿದೇಶದ ಫ್ಲೈಟ್ ಹತ್ತಿತು. ಜರ್ಮನಿ ಹೋದ ಪ್ರಜ್ವಲ್ರಿಗೆ ಹಲವು ನೋಟಿಸ್ ನೀಡಲಾಯಿತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸಹ ಎಸ್ಐಟಿ ತಂಡವನ್ನು ರಚಿಸಿತು. ಎಸ್ಐಟಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿದರೂ, ತಲೆ ಕೆಡಿಸಿಕೊಂಡಿರಲಿಲ್ಲ.
ನೋಟಿಸ್ ಜಾರಿ ಆದ ಕೆಲವು ದಿನಗಳ ಬಳಿಕ ಪ್ರಜ್ವಲ್ ಅಜ್ಞಾತ ಸ್ಥಳದಿಂದ ವಿಡಿಯೋ ಒಂದನ್ನು ರೆಕಾರ್ಡ್ ಮಾಡಿ ತಮ್ಮ ಸಾಮಾಜಿಕ ತಾಣದಲ್ಲಿ ಹಾಕಿಕೊಂಡಿದ್ದರು. ಅಲ್ಲದೆ ಸ್ವಲ್ಪ ಸಮಯಾವಕಾಶವನ್ನು ನೀಡಬೇಕು ಎಂದು ಮನವಿ ಮಾಡಿದ್ದರು.
ಪ್ರಜ್ವಲ್ ಜರ್ಮನಿಯಿಂದ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸುತ್ತಾರೆ ಎಂದು ತಿಳಿದ ತಕ್ಷಣ ಎಸ್ಐಟಿ ಅವರನ್ನು ಬಂಧಿಸಲು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿತ್ತು. ಅವರು ಹೊರಕ್ಕೆ ಬರುತ್ತಿದ್ದಂತೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications