ಸೆ.10 ರಂದು ಅಡಿಗರ ಜನ್ಮಶತಮಾನೋತ್ಸವಕ್ಕಾಗಿ 'ಭೂಮಿಗೀತ'
ಬೆಂಗಳೂರು, ಸೆಪ್ಟೆಂಬರ್ 8: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ 'ನವ್ಯ ಸಾಹಿತ್ಯ ಪ್ರಕಾರ'ವನ್ನು ಪರಿಚಯಿಸಿದ ಕವಿ ಗೋಪಾಲಕೃಷ್ಣ ಅಡಿಗ. 'ಯಾವಮೋಹನ ಮುರಳಿ ಕರೆಯಿತೋ' ಹಾಡಿನಿಂದ ಸಹಸ್ರಾರು ಕನ್ನಡಿಗರ ಮನೆಮಾತಾದ ಗೋಪಾಲಕೃಷ್ಣ ಅಡಿಗ (18-02-1918: 1992)ರ ಜನ್ಮಶತಮಾನೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದನ್ನು ಅವಿರತ ಪ್ರತಿಷ್ಠಾನ ಆಯೋಜಿಸಿದೆ.
"ಭಾವತರಂಗ: ಬತ್ತಲಾರದ ಭೂಮಿಗೀತ" ಎಂಬ ಹೆಸರಿನ ಈ ಕಾರ್ಯಕ್ರಮ ಸೆಪ್ಟೆಂಬರ್ 10, ಭಾನುವಾರದಂದು, ಸಂಜೆ 5 ಕ್ಕೆ ವಿಜಯನಗರ ಟೊಲ್ ಗೇಟ್ ಬಳಿಯ ಕಾಸಿಯಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕಾವ್ಯ ವಾಚನ ಮತ್ತು ಕಾವ್ಯ ಗಾಯನ ಎಂಬ ಎರಡು ವಿಭಾಗಗಳಿವೆ. ಕನ್ನಡ ಧಾರಾವಾಹಿ ಮತ್ತು ಚಿತ್ರ ನಿರ್ದೇಶಕ ಟಿ.ಎನ್.ಸೀತಾರಾಮ್, ಬಿ.ಸುರೇಶ್, ಕಾವ್ಯಶ್ರೀ ಎಚ್. ಕಾವ್ಯ ವಾಚಿಸಲಿದ್ದು, ಗಾಯಕರಾದ ವಿನಯ್ ನಾಡಿಗ್, ಶ್ರೀಕೃಪಾ ಎಂ ಎಸ್, ಗೋವಿಂದ್ ಕರ್ನೂಲ್ ಸೇರಿದಂತೆ ಹಲವರು ಅಡಿಗರ ಪದ್ಯಗಳನ್ನು ಹಾಡಲಿದ್ದಾರೆ.
ಸಹೃದಯಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಉಡುಪಿ ಜಿಲ್ಲೆ ಮೊಗೆರಿಯ ಗೋಪಾಲಕೃಷ್ಣ ಅಡಿಗರು, ಭಾವಗೀತ, ಭೂಮಿಗೀತ, ಮಣ್ಣಿನ ವಾಸನೆ, ವರ್ಧಮಾನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದರು.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications