ಕೊರೊನಾಕ್ಕೆ ಕಿಕ್ ಕೊಡಲು ನಿತ್ಯಾನಂದನಿಂದ ಪಚ್ಚೈ ಪತ್ತಿನಿ ವೃತ ಆರಂಭ!
ಬೆಂಗಳೂರು, ಮಾರ್ಚ್ 17; ಜಗತ್ತಿನಲ್ಲಿ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ಗೆ (covid19) ಒಂದು ಗತಿ ಕಾಣಿಸಲು ಚೀನಾ ಅಮೆರಿಕ ಸೇರಿದಂತೆ ಅನೇಕ ಬಲಿಷ್ಠ ರಾಷ್ಟ್ರಗಳು ಹೆಣಗಾಡುತ್ತಿವೆ.
ಆದರೆ, ಕೊರೊನಾ ವೈರಸ್ ನ್ನು ಇಲ್ಲಿಗೆ ನಿಲ್ಲಿಸಲು ಅಥವಾ ಅದು ಮುಂದೆ ಪಸರಿಸದಂತೆ ಮಾಡಲು ವಿವಾದಿತ ಸ್ವಾಮೀಜಿ ಸ್ವ ಘೋಷಿತ ದೇವಮಾನವ ಬಿಡದಿಯ ನಿತ್ಯಾನಂದ ಸ್ವಾಮಿ ಅವರು ಘೋರ ವೃತ ಆರಂಭಿಸಿದ್ದೇನೆ ಎಂದು ಹೇಳಿದ್ದಾರೆ.
ಮಾಧ್ಯಮಗಳಿಗೆ ಈ ಮೇಲ್ ಮೂಲಕ ಪತ್ರಿಕಾ ಪ್ರಕಟಣೆ ನೀಡಿರುವ ನಿತ್ಯಾನಂದ ಸ್ವಾಮಿಗಳು, ಕೊರೊನಾ ಹೊಡೆದೊಡಿಸಲು, ಕೊರೊನಾ ಬರದಂತೆ ತಡೆಯಲು 28 ದಿನಗಳ ಪಚ್ಚೈ ಪತ್ತಿನಿ ಎಂಬ ಮಹಾ ವೃತ ಆರಂಭಿಸಿರುವುದಾಗಿ ಹೇಳಿದ್ದಾರೆ.

ಏನಿದು ಪಚ್ಚೈ ಪತ್ತಿನಿ ವೃತ?
28 ದಿನ ಘೋರ ಉಪವಾಸ ಕೈಗೊಳ್ಳುವುದು ಈ ಪಚ್ಚೈ ಪತ್ತಿನಿ ವೃತದ ಸಂಕ್ಷಿಪ್ತ ರೂಪ. ಇದರಲ್ಲಿ ಸ್ವಾಸ್ಥ್ಯ ಜೀವನಕ್ಕೆ ಉಪವಾಸ, ಶಿವಧ್ಯಾನ, ಮಹಾವಾಕ್ಯದ ಪಠಣ ನಡೆಯುತ್ತದೆ. ಇದಕ್ಕೆ ಕೊರೊನಾಕ್ಕಿಂತಲೂ ಬಲಶಾಲಿಯಾದ ರೋಗ ಹೋಗಲಾಡಿಸುವ ಶಕ್ತಿ ಇದೆ ಎಂದು ನಿತ್ಯಾನಂದ ಸ್ವಾಮಿ ಹೇಳಿದ್ದಾರೆ.

ಕೈಲಾಸ ದೇಶದಲ್ಲಿ ವೃತ
ಕೈಲಾಸ ದೇಶದಲ್ಲಿ (ಈಕ್ವೆಡಾರ್) ಈಗಾಗಲೇ ಕಳೆದ ಮೂರು ದಿನಗಳಿಂದಲೇ ಪಚ್ಚೈ ಪತ್ತಿನಿ ವೃತ ಆರಂಭಿಸಿರುವ ನಿತ್ಯಾನಂದ, ಪಚ್ಚೈ ಪತ್ತಿನಿ ವೃತ ಆರಂಭಿಸುವಂತೆ ತನ್ನ ಶಿಷ್ಯರಿಗೆ ಕರೆ ನೀಡಿದ್ದಾರೆ. ಮಾರಿಯಮ್ಮನಿಗೆ ನೈವೇದ್ಯ, ಎಳನೀರು, ಬೆಲ್ಲದ ನೀರು, ಮಜ್ಜಿಗೆ, ಕಬ್ಬಿನ ಹಾಲು ಮಾತ್ರ ಉಪವಾಸದ ವೇಳೆ ಸೇವಿಸಬಹುದು ಎಂದು ತಿಳಿಸಿದ್ದಾರೆ.

ಜನ ಭಯಗೊಳ್ಳಬಾರದು
ಕೊರೊನಾ ವೈರಸ್ ಮುನಿದ ಮಾರಿಯ ರೂಪ. ಇದಕ್ಕೆ ಜನ ಭಯಗೊಳ್ಳಬಾರದು, ಪಚ್ಚೈ ಪತ್ತಿನಿ ವೃತ ಮಾಡುವುದರಿಂದ ಮಾರಿಯಮ್ಮ ಸಂತುಷ್ಟಳಗುತ್ತಾಳೆ. ಇದು ವೈಜ್ಞಾನಿಕ ತಳಹದಿಯ ಮೇಲಿದೆ ಎಂದು ನಿತ್ಯಾನಂದ ಹೇಳಿದ್ದಾರೆ.

ಪರ್ಯಾಯ ಅಲ್ಲ
ನಾನು ನನ್ನ ಭಕ್ತರಿಗೆ ಈ ಪರಿಸ್ಥಿತಿಯಲ್ಲಿ ಪಚ್ಚೈ ಪತ್ತಿನಿ ವೃತ ಆರಂಭಿಸುವಂತೆ ಕರೆ ನೀಡಿದ್ದೇನೆ. ಆದರೆ, ಇದು ವೈದ್ಯಕೀಯ ಚಿಕಿತ್ಸೆ ಪದ್ದತಿಗೆ ಪರ್ಯಾಯ ಅಲ್ಲ. ರೋಗದ ಲಕ್ಷಣಗಳು ಇದ್ದರೆ ಅಂತವರು ಉತ್ತಮ ಚಿಕಿತ್ಸೆ ಪಡೆದುಕೊಳ್ಳಲಿ ಎಂದೂ ಸಹ ಈ ಮೇಲ್ ನ ಕೊನೆಯಲ್ಲಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications