Bidadi Township: ಬಿಡದಿ ಟೌನ್ಶಿಪ್ ಯೋಜನೆ: ಎಚ್.ಡಿ.ಕುಮಾರಸ್ವಾಮಿ ಸವಾಲಿಗೆ ಡಿ.ಕೆ. ಶಿವಕುಮಾರ್ ಪ್ರತಿಸವಾಲು
Bidadi Township: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕನಕಪುರದ ದೊಡ್ಡ ಆಲಹಳ್ಳಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ಬಿಡದಿ ಟೌನ್ಶಿಪ್ ಕುರಿತು ಡಿಸಿಎಂ ಮಾತನಾಡಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸವಾಲಿಗೆ ಪ್ರತಿಸವಾಲು ಹಾಕಿದರು. ಹಾಗಾದ್ರೆ ಏನು ಹೇಳಿದರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮದವರು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿ ಆಗಿದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ ಸಹ ನಮ್ರತೆಯಿಂದ ಅವರ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ ಬರಲಿ ಎಂದು ಪ್ರತಿಸವಾಲು ಎಸೆದರು.

ಚರ್ಚಗೆ ತಯಾರಿದ್ದೇನೆ: ಬಿಡದಿ ಟೌನ್ಶಿಪ್ ಯೋಜನೆ ವಿಚಾರವಾಗಿ ಡಿ.ಕೆ.ಸಹೋದರರು ನನ್ನ ಜೊತೆ ಚರ್ಚೆ ಬರಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, "ಕುಮಾರಸ್ವಾಮಿ ಅವರು ಯಾವಾಗ ಚರ್ಚೆಗೆ ಸಿದ್ಧ ಎಂದು ಹೇಳುವರೋ ಅಂದು ಚರ್ಚೆ ಮಾಡಲು ನಾನು ತಯಾರಿದ್ದೇನೆ," ಎಂದು ಹೇಳಿದರು.
"ಮಾಧ್ಯಮಗಳೇ ದಿನಾಂಕ ನಿಗದಿ ಮಾಡಲಿ. ರಾಮಮಂದಿರದ ಮುಂದೆ ಪ್ರಶ್ನೆ ಕೇಳಿದ್ದೀರಿ. ನಾನು ಇದೇ ರಾಮ ಮಂದಿರದಲ್ಲಿ ಕುಳಿತು, ನುಡಿದಂತೆ ನಡೆಯುತ್ತೇನೆ. ಪೂರ್ವನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಈ ಚರ್ಚೆಯ ದಿನಾಂಕದ ಬಗ್ಗೆ ಮೂರು ದಿನ ಮುಂಚಿತವಾಗಿ ತಿಳಿಸಿ, ನಾನು ಚರ್ಚೆಗೆ ಬರುತ್ತೇನೆ," ಎಂದು ಹೇಳಿದರು.
ಬಿಡದಿ ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಕೇಳಿದಾಗ, "ಅವರು ರಾಜಕಾರಣ ಮಾಡಬೇಕು ಮಾಡುತ್ತಿದ್ದಾರೆ. ಯೋಜನೆಯನ್ನು ನಾನು ಮಾಡಿದ್ದಲ್ಲ, ಅವರೇ ಮಾಡಿದ್ದು. ರೈತರಿಗೆ 800 ಅಡಿ ಭೂಮಿಯನ್ನು ನೀಡುತ್ತೇನೆ ಎಂದು ಭರವಸೆ ಕೊಟ್ಟಿದ್ದೆ ಎಂದು ಅವರೇ ಹೇಳಿದ್ದಾರೆ. ಅವರು ಹೇಳಿದ್ದನ್ನು ನಾವು ಈಗ ಮುಂದುವರೆಸುತ್ತಿದ್ದೇವೆ ಅಷ್ಟೇ," ಎಂದರು.
"ಇಲ್ಲಿ ನಾನು ಹಾಗೂ ಕುಮಾರಸ್ವಾಮಿ ಇಬ್ಬರೂ ಶಾಶ್ವತವಲ್ಲ. ಆದರೆ, ನಾವು ತೆಗೆದುಕೊಂಡ ತೀರ್ಮಾನ ಶಾಶ್ವತವಾಗಿ ಉಳಿಯುತ್ತದೆ. ನಾನು ಹಾಗೂ ಅವರು ಇಲ್ಲದೇ ಹೋದರೂ ಯೋಜನೆಯಿಂದ ಮುಂದಿನ ಪೀಳಿಗೆಗೆ ಅನುಕೂಲ ಆಗಲಿದೆ. ಮುಂದಿನ ಜನಾಂಗ ನಮ್ಮನ್ನು ನೆನಪಿಸಿಕೊಳ್ಳಲಿದೆ. ನನ್ನ ಕ್ಷೇತ್ರದ ರಸ್ತೆಗಳ ಅಗಲೀಕರಣ ಮಾಡಲಾಗಿದೆ," ಎಂದು ಹೇಳಿದರು.
"ಇದಕ್ಕೆ ಎಷ್ಟು ಪರಿಹಾರ ದೊರಕಿದೆ ಎಂದು ದೊಡ್ಡಆಲಹಳ್ಳಿ, ಸಾತನೂರು, ಕನಕಪುರದವರನ್ನು ಕೇಳಿ. ದೊಡ್ಡ ಆಲಹಳ್ಳಿಯಲ್ಲಿ ಅಡಿಗೆ 1,500 ರೂಪಾಯಿ ಪರಿಹಾರ ಕೊಡಿಸಿದ್ದೇನೆ. ನಗರ ಭಾಗದ ಸೌಲಭ್ಯಗಳನ್ನು ಇಲ್ಲಿ ಮಾಡಿಕೊಡಲಾಗಿದೆ. ನಾನು ಮಾಧ್ಯಮಗಳಿಗೆ ಉತ್ತರಿಸುವ ಬದಲು ನೇರವಾಗಿ ಕುಮಾರಸ್ವಾಮಿ ಅವರಿಗೇ ಉತ್ತರ ನೀಡುತ್ತೇನೆ." ಎಂದು ಹೇಳಿದರು.
ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಜನ ಅಪೇಕ್ಷಿಸುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ. ಈಗಲೂ ರಾಜಕಾರಣದಲ್ಲಿ ಇದ್ದಾರೆ ಅಲ್ಲವೇ. ರಾಷ್ಟ್ರ ಏನು, ರಾಜ್ಯ ಏನು ಎಂದು ನನಗೆ ಗೊತ್ತಿಲ್ಲ," ಎಂದು ಹೇಳುವ ಮೂಲಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಗ್ದಾಳಿ ನಡೆಸಿದರು.
ಕುಮಾರಸ್ವಾಮಿಯವರಿಗೆ ದೇವರು ಒಳ್ಳೆಯದು ಮಾಡಲಿ: ಅಂತಿಮ ದಿನಗಳನ್ನು ರಾಮನಗರ ಜಿಲ್ಲೆಯಲ್ಲಿಯೇ ನಾನು ಮುಂದುವರೆಸುತ್ತೇನೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಪ್ರಕ್ರಿಯಿಸಿ, "ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ. ಅವರಿಗೆ ಶಕ್ತಿ ಕೊಡಲಿ, ಅವರ ಆಸೆ ಏನಿದೆಯೋ ಅದನ್ನು ಕೇಳಿಕೊಳ್ಳಲಿ. ಜನರುಂಟು, ಅವರುಂಟು. ಅದೇ ರೀತಿ ಜನವುಂಟು ನಾವುಂಟು," ಎಂದು ಹೇಳಿದರು.
500ಕ್ಕೂ ಹೆಚ್ಚು ದೇವಾಲಯಗಳ ನಿರ್ಮಾಣ: "ನಮ್ಮ ಕ್ಷೇತ್ರದಲ್ಲಿ ಒಂದೆರಡು ದೇವಾಲಯ ಮಾತ್ರವಲ್ಲ, ಸುಮಾರು 500ಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ದೊಡ್ಡ ಆಲಹಳ್ಳಿಯಲ್ಲಿ ಏಳೆಂಟು ದೇವಾಲಯಗಳನ್ನು ನಿರ್ಮಿಸಲಾಗಿದೆ. ಪಟ್ಟಲದಮ್ಮ ದೇವಸ್ಥಾನವನ್ನು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.
"ನಮ್ಮ ತಂದೆಯವರು ಅವರ ಕಾಲದಲ್ಲಿ ಶಂಕರೇಶ್ವರ ದೇವಾಲಯವನ್ನು ಕಟ್ಟಿಸಿದರು. ಈ ಮೊದಲಿದ್ದ ರಾಮ ಮಂದಿರದಲ್ಲಿ ಭಜನೆ ಮಾಡಲಾಗುತ್ತಿತ್ತು. ಎಲ್ಲರ ಸಹಕಾರದಿಂದ ಇಡೀ ಕ್ಷೇತ್ರದಲ್ಲಿ ಉತ್ತಮ ದೇವಾಲಯಗಳ ನಿರ್ಮಾಣ ಮಾಡಲಾಗಿದೆ," ಎಂದು ಹೇಳಿದರು.
"ಎಲ್ಲಾ ಧರ್ಮದವರಿಗೂ ನಾವು ಸಹಾಯ ಮಾಡುತ್ತಿದ್ದೇವೆ. ಮುಸ್ಲಿಮರಿಗೆ ಮಸೀದಿ, ಕ್ರೈಸ್ತರ ಚರ್ಚ್ ನಿರ್ಮಾಣಕ್ಕೆ ಸಹಾಯ ಮಾಡಿದ್ದೇವೆ. ಜೊತೆಗೆ ಎಲ್ಲಾ ಸಮುದಾಯದವರ ಅವಶ್ಯಕತೆಗಳಿಗೆ ಸ್ಪಂದಿಸಲಾಗಿದೆ. ರಾಮ ಮಂದಿರವನ್ನು ಒಂದು ಪಂಗಡ ನೋಡಿಕೊಳ್ಳುತ್ತದೆ. ತಿಗಳ ಸಮುದಾಯದವರು ಇನ್ನೊಂದು ದೇವಸ್ಥಾನ ನೋಡಿಕೊಳ್ಳುವರು. ಊರಿನ ಎಲ್ಲರೂ ಸೇರಿ ಊರಿನ ದೇವಸ್ಥಾನ ನೋಡಿಕೊಳ್ಳುವರು," ಎಂದರು.
ರಾಮಮಂದಿರ ಶಕ್ತಿ ನೀಡಲಿ ಎನ್ನುವ ಮನವಿಯ ಬಗ್ಗೆ ಕೇಳಿದಾಗ, "ನಾನು ಜೈಲಿಗೆ ಹೋದಾಗ ನನ್ನ ಕ್ಷೇತ್ರದ ಜನ ಬರಿಗಾಲಿನಲ್ಲಿ ಕಾಲಿಗೆ ಚಪ್ಪಲಿ ಇಲ್ಲದೇ ದೆಹಲಿಯವರೆಗೆ ಬಂದಿದ್ದಾರೆ. ನನಗೆ ಜಾಮೀನು ನೀಡಬಾರದು ಎಂದಿತ್ತು. ಆದರೆ, ಕ್ಷೇತ್ರದ ಜನರ ಪ್ರಯತ್ನ ಹಾಗೂ ಪ್ರಾರ್ಥನೆಯಿಂದಾಗಿಯೇ 48 ದಿನಗಳಲ್ಲಿ ಜೈಲಿನಿಂದ ಬಿಡುಗಡೆಯಾದೆ. ನನಗೆ ನನ್ನ ಕ್ಷೇತ್ರದ ಜನರೇ ಆಸ್ತಿ. ಈ ಊರಿನಲ್ಲಿದ್ದ ಅನೇಕ ಆಸ್ತಿಯನ್ನು ಜನರಿಗೆ ಬಿಟ್ಟಿದ್ದೇನೆ. ತಾತ, ಮುತ್ತಾತರ ಕಾಲದ ಆಸ್ತಿಗಳನ್ನು ಶಾಲೆ, ಹಾಸ್ಟಲ್ಗಾಗಿ ದಾನ ಮಾಡಿದ್ದೇನೆ. ಮಾರಾಟ ಮಾಡಲು ಹೋದರೆ, ಯಾರಾದರೂ ತೆಗೆದುಕೊಳ್ಳುವರೇ? ಕ್ಷೇತ್ರದ ಜನ ನಮ್ಮನ್ನು ಬೆಳೆಸಿದ್ದಾರೆ, ಸಾಕಿದ್ದಾರೆ. ಅವರುಗಳೇ ಅವುಗಳನ್ನು ಉಪಯೋಗಿಸಿಕೊಳ್ಳಲಿ," ಎಂದು ಹೇಳಿದರು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications