Bidar-Bengaluru Corridor: ಬೀದರ್-ಬೆಂಗಳೂರು ಕಾರಿಡಾರ್ ಅಭಿವೃದ್ಧಿಗೆ ನಿರ್ಧಾರ, ಪ್ರಯೋಜನೆಗಳು & ತಗಲುವ ವೆಚ್ಚ ಎಷ್ಟು?
ಬೆಂಗಳೂರು, ಫೆಬ್ರವರಿ, 21: ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ್ದು, ಈ ವೇಳೆ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾರಿಡಾರ್ಗಳ ಯೋಜನೆಯೂ ಒಂದಾಗಿದೆ.
ಮುಂಬೈ-ಚೆನ್ನೈ ಕಾರಿಡಾರ್ ಮಾದರಿಯಲ್ಲಿ ಮಂಗಳೂರು-ಬೆಂಗಳೂರು ಸೇರಿದಂತೆ ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಈ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಹಾಗಾದರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಒಂದು ಕಾರಿಡಾರ್ ಮಂಗಳೂರು ಬಂದರಿನಿಂದ ಬೆಂಗಳೂರುವರೆಗೆ ಅಭಿವೃದ್ಧಿ ಮಾಡಲಾಗುತ್ತದೆ. ಇದರಿಂದ ಬಂದರು ಸಂಪರ್ಕ ಸುಲಭ ಆಗುತ್ತದೆ. ಅಲ್ಲದೆ, ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಗಣನೀಯವಾಗಿ ಕಡಿಮೆ ಆಗಲಿದೆ.
ಇನ್ನೊಂದು ಕಾರಿಡಾರ್ನ್ನು ಬೀದರ್ ಹಾಗೂ ಬೆಂಗಳೂರು ನಡುವೆ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಆದರೆ ಈ ಯೋಜನೆಗಳಿಗೆ ತಗಲುವ ವೆಚ್ಚದ ಬಗ್ಗೆ ಬಜೆಟ್ನಲ್ಲಿ ತಿಳಿಸಿಲ್ಲ.
ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆ ಜಾರಿಗೊಳಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದ್ದು, ಇದಕ್ಕಾಗಿ ಬಾಹ್ಯ ಹಣಕಾಸು ಸಂಸ್ಥೆಯ ನೆರವು (ಸಾಲ) ಪಡೆಯಲು ನಿರ್ಧಾರ ಮಾಡಲಾಗುದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿಲೋ ಮೀಟರ್ ಉದ್ದದ ರಾಜ್ಯ ಹೆದ್ದಾರಿಯನ್ನು 5,736 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ.
* ರಾಜ್ಯದಲ್ಲಿನ 1,300 ಕಿಲೋ ಮೀಟರ್ ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಎಸ್ಎಚ್ಡಿಪಿ ) ಹಂತ-5 ಪ್ರಾರಂಭ.
* ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು ಕೇಂದ್ರದ ಸಹಕಾರದೊಂದಿಗೆ 450 ಕೋಟಿ ರೂಪಾಯಿ ವೆಚ್ಚದಲ್ಲಿ 4.50 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣ.
* ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆ ತಗ್ಗಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ.
* ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆಆರ್ಎಸ್ ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications