Bidar-Bengaluru flight: ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತ, ಕಾರಣ ಏನು ಗೊತ್ತಾ?-ಇಲ್ಲಿದೆ ಮಾಹಿತಿ
ಬೆಂಗಳೂರು, ಡಿಸೆಂಬರ್, 27: ಇತ್ತೀಚೆಗಷ್ಟೇ ಪ್ರಯಾಣಿಕರು ಕ್ಷೀಣಿಸುತ್ತಿರುವ ಹಿನ್ನೆಲೆ ಮೈಸೂರು ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಯನ್ನು ರದ್ದುಪಡಿಸಲಾಗಿತ್ತು. ಇದೀಗ ಬೀದರ್-ಬೆಂಗಳೂರು ನಡುವೆ ಸ್ಟಾರ್ಏರ್ ವಿಮಾನ ಹಾರಾಟ ಸೇವೆಯನ್ನು ಸ್ಥಗಿತಗೊಳಿಸಿದೆ. ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೀದರ್-ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರು ಈ ಮಾಹಿತಿಯನ್ನು ಗಮನಿಸಲೇಬೇಕಿದೆ. ನಷ್ಟದ ಕಾರಣದಿಂದ 'ಸ್ಟಾರ್ ಏರ್' ತನ್ನ ವಿಮಾನ ಸೇವೆಯನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸ್ಟಾರ್ ಏರ್ ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ವಿಮಾನಯಾನ ಸೇವೆಯು ನಷ್ಟದಲ್ಲಿ ನಡೆಯುತ್ತಿದ್ದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈವರೆಗೆ ಬೀದರ್-ಬೆಂಗಳೂರು, ಬೆಂಗಳೂರು-ಬೀದರ್ ನಡುವೆ ಸ್ಟಾರ್ ಏರ್ ನಿತ್ಯ ಒಂದು ಬಾರಿ ತನ್ನ ವಿಮಾನ ಹಾರಾಟ ನಡೆಸುತ್ತಿದ್ದು, ನಷ್ಟ ಹಿನ್ನೆಲೆ ಈಗ ಒಪ್ಪಂದದ ಅವಧಿಗೂ ಮುನ್ನವೇ ತನ್ನ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.
ನವೆಂಬರ್ನಲ್ಲಿ ಈ ವಿಮಾನ ನಿಲ್ದಾಣದಿಂದ ವಿದೇಶಗಳಿಗೆ ಪ್ರಯಾಣಿಸಿದವರೆಷ್ಟು?
ದೇವನಹಳ್ಳಿ, ಡಿಸೆಂಬರ್, 27: ಸಾಮಾನ್ಯವಾಗಿ ಅಂತಾಷ್ಟ್ರೀಯ ವಿಮಾನ ನಿಲ್ದಾಣಗಳಿಂದ ಬೇರೆ ದೇಶಗಳಿಗೆ ಇಂತಹ ತಿಂಗಳಿನಲ್ಲಿ ಇಂತಿಷ್ಟು ಪ್ರಯಾಣಿಕರು ಪ್ರಯಾಣ ಮಾಡಿರುತ್ತಾರೆ ಎನ್ನುವ ದಾಖಲೆ ಇರುತ್ತದೆ. ಅದೇ ರೀತಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವೆಂಬರ್ನಲ್ಲಿ ಅತೀ ಹೆಚ್ಚು ಪ್ರಯಾಣಿಕರು ವಿದೇಶಗಳಿಗೆ ಪ್ರಯಾಣ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಇದು ದಾಖಲೆಯಾಗಿದೆ .
ನವೆಂಬರ್ ತಿಂಗಳಲ್ಲಿ ಒಟ್ಟು 3,98,792 ಪ್ರಯಾಣಿಕರು ಟರ್ಮಿನಲ್-2ರಿಂದ ವಿದೇಶ ಪ್ರಯಾಣ ಮಾಡಿದ್ದಾರೆ. 2022ರ ನವೆಂಬರ್ ತಿಂಗಳಿಗೆ ಹೋಲಿಸಿದರೆ ಈ ಬಾರಿ ಪ್ರಯಾಣಿಕರ ಸಂಖ್ಯೆ ಶೇಕಡಾ 8.6ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿಮಾನ ನಿಲ್ದಾಣ ಪ್ರಾಧಿಕಾರ ವರದಿ ತಿಳಿಸಿದೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 2023ರ ನವೆಂಬರ್ನಲ್ಲಿ 30,75,234 ಪ್ರಯಾಣಿಕರು ದೇಶದ ವಿವಿಧ ನಗರಗಳಿಗೆ ಸಂಚರಿಸಿದ್ದಾರೆ. ಇದೇ ವರ್ಷ ವಿಮಾನ ಸಂಚಾರ ಆರಂಭಿಸಿದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ಹೆಚ್ಚು ವಿಮಾನಗಳು ಸಂಚರಿಸುತ್ತಿವೆ. ಆಗಸ್ಟ್ನಲ್ಲಿ ಕೇವಲ 145 ಪ್ರಯಾಣಿಕರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಕ್ಟೋಬರ್ 3,338 ಪ್ರಯಾಣಿಕರು, ನವೆಂಬರ್ 4,622 ಪ್ರಯಾಣಿಕರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ನವೆಂಬರ್ ತಿಂಗಳಿನಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ 31,447 ಪ್ರಯಾಣಿಕರು, ಕುಂದಾನಗರಿ ಬೆಳಗಾವಿಗೆ 32,059 ಪ್ರಯಾಣಿಕರು ಸಂಚರಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 44.7ರಷ್ಟು ಹೇಚ್ಚಳ ಆಗಿದೆ ಎಂದು ತಿಳಿದುಬಂದಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications