Bengaluru: ಬೆಂಗಳೂರು - ಹೈದರಾಬಾದ್ ನಡುವೆ ಪ್ರಮುಖ ಕಾರಿಡಾರ್ಗೆ ತೆಲಂಗಾಣ ಲಾಬಿ!
Bengaluru: ಕರ್ನಾಟಕದ ರಾಜಧಾನಿ ಬೆಂಗಳೂರು ಹಾಗೂ ತೆಲಂಗಾಣದ ರಾಜಧಾನಿ ಹೈದರಾಬಾದ್ ನಡುವೆ ಇತ್ತೀಚಿನ ದಿನಗಳಲ್ಲಿ ಪೈಪೋಟಿ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ವ್ಯಾಲ್ಯೂ ಹಾಗೂ ಐಟಿ ರಾಜಧಾನಿ ವಿಚಾರದಲ್ಲಿ ಬೆಂಗಳೂರು ಮತ್ತು ತೆಲಂಗಾಣ ನಗರಗಳ ನಡುವೆ ತೀವ್ರ ಪೈಪೋಟಿ ಇದೆ. ಈ ರೀತಿ ಇರುವಾಗಲೇ ತೆಲಂಗಾಣದ ಮುಖ್ಯಮಂತ್ರಿ ಈ ಎರಡೂ ನಗರಗಳ ನಡುವೆ ಮಹತ್ವದ ಯೋಜನೆಯೊಂದನ್ನು ಅನುಷ್ಠಾನ ಮಾಡುವ ಪ್ರಸ್ತಾವನೆ ಇರಿಸಿದ್ದಾರೆ.
ಹೌದು, ಬೆಂಗಳೂರು ಹಾಗೂ ಹೈದರಾಬಾದ್ ನಗರಗಳ ನಡುವೆ ಪೈಪೋಟಿ ಹೆಚ್ಚಾಗುತ್ತಿರುವಾಗಲೇ ಈ ಎರಡೂ ನಗರಗಳ ನಡುವೆ ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್ ಅಭಿವೃದ್ಧಿಪಡಿಸುವಂತೆ / ಯೋಜನೆಯನ್ನು ಘೋಷಣೆ ಮಾಡುವಂತೆ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ವಿಚಾರವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲವೇ ತಿಂಗಳುಗಳ ಮುಂಚೆಯಷ್ಟೇ ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಎಚ್ಎಎಲ್ ವಿಚಾರವಾಗಿ ಸಂಘರ್ಷ ಏರ್ಪಟ್ಟಿತ್ತು. ಕೇಂದ್ರದಲ್ಲಿ ಅಧಿಕಾರ ದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿರುವ ತೆಲುಗು ದೇಶಂ ಪಾರ್ಟಿಯು ಬೆಂಗಳೂರಿನ ಎಚ್ಎಎಲ್ ಆಕರ್ಷಿಸುವುದಕ್ಕೆ ಭಾರೀ ಸರ್ಕಸ್ ನಡೆಸಿತ್ತು. ಆದರೆ ಆ ಪ್ರಯತ್ನದಲ್ಲಿ ಯಶಸ್ಸು ಕಂಡಿರಲಿಲ್ಲ. ಆಂಧ್ರಪ್ರದೇಶದ ನಂತರ ಇದೀಗ ತೆಲಂಗಾಣ - ಬೆಂಗಳೂರಿನ ಮೇಲೆ ಕಣ್ಣಿಟ್ಟಂತಿದೆ.
ಈಚೆಗೆ ಬೆಂಗಳೂರು ಹಾಗೂ ಹೈದರಾಬಾದ್ ನಡುವಿನ ಪ್ರಮುಖ ಯೋಜನೆಯ ಬಗ್ಗೆ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಸ್ತಾಪಿಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ತೆಲಂಗಾಣದ ಏರೊಸ್ಪೇಸ್ ಮತ್ತು ಡಿಫೆನ್ಸ್ ವಲಯದಿಂದ ಭರ್ಜರಿ ರಫ್ತು ಆಗುತ್ತಿದೆ. ಅಲ್ಲದೇ ಈ ಪ್ರಮಾಣವು ದ್ವಿಗುಣವಾಗಿದೆ. ಕಳೆದ 9 ತಿಂಗಳಲ್ಲಿ ಸುಮಾರು 30,000 ಕೋಟಿ ಔಷಧ ರಫ್ತು ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಮುಂದುವರಿದು ನಾಗರಿಕ ವಿಮಾನಯಾನ ಸಚಿವಾಲಯದಿಂದ ತೆಲಂಗಾಣವು ಏರೊಸ್ಪೇಸ್ ಪ್ರಶಸ್ತಿ ಬಂದಿದೆ. ಏರೊಸ್ಪೇಸ್ ವಲಯದಲ್ಲಿ ಹೂಡಿಕೆಗೆ ಕೌಶಲ ಅಭಿವೃದ್ಧಿ ಅಗತ್ಯವಾಗಿದೆ. ಈ ಕಾರಣಕ್ಕಾಗಿ ಬೆಂಗಳೂರು-ಹೈದರಾಬಾದ್ ಪ್ರದೇಶವನ್ನು ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್ ಎಂದು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ತೆಲಂಗಾಣದ ಏರೊಸ್ಪೇಸ್ ಮತ್ತು ರಕ್ಷಣಾ ವಲಯದ ಬೆಳವಣಿಗೆಯಲ್ಲಿ ಸಫ್ರಾನ್ ಘಟಕವು ಮಹತ್ವ ಮೈಲುಗಲ್ಲು ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಇದೀಗ ಈ ವಿಚಾರವಾಗಿ ಭಾರೀ ಚರ್ಚೆ ಮುಂದುವರಿದಿದೆ.
-
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications