ಎರಡನೇ ಏರ್ಪೋರ್ಟ್ಗಾಗಿ ಮಾಗಡಿ-ಶಿರಾ ನಡುವೆ ಬಿಗ್ ಫೈಟ್, ಆ ಜಾಗವೇ ಫೈನಲ್ ಆಗುವ ಸಾಧ್ಯತೆ
ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಯಾವ ಭಾಗದಲ್ಲಿ ನಿರ್ಮಾಣವಾಗಲಿದೆ ಎನ್ನುವುದು ಇನ್ನೂ ಯಕ್ಷ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರವೇನೋ ಅಧಿಕೃತವಾಗಿ ಎರಡು ಪ್ರದೇಶಗಳನ್ನು ಪ್ರಸ್ತಾಪಿಸಿದೆ. ಆದರೆ ಈ ಸಂಖ್ಯೆ ನಾಲ್ಕಕ್ಕೆ ಏರಿದೆ. ಕನಕಪುರ ರಸ್ತೆ ಅಥವಾ ಕುಣಿಗಲ್ ಭಾಗದಲ್ಲಿ ಈ ನೂತನ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಜನ ನಿರೀಕ್ಷಿಸಿದ್ದರು. ಆದರೆ, ಇದೀಗ ಇನ್ನೆರಡು ಜಾಗಗಳ ನಡುವೆ ದೊಡ್ಡ ಫೈಟ್ ಶುರುವಾಗಿದೆ. ಮೊದಲಿಗೆ ಬೆಂಗಳೂರಿಗೆ ಸಮೀಪದಲ್ಲೇ ಹೊಸ ಏರ್ಪೋರ್ಟ್ ಬರುವ ಲಕ್ಷಣಗಳು ಕಂಡುಬಂದಿತ್ತು. ಇದೀಗ ತುಮಕೂರು ಅಥವಾ ರಾಮನಗರ ಜಿಲ್ಲೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.
ಹೌದು ರಾಜ್ಯ ಸರ್ಕಾರವು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತುದಿಗಾಲಲ್ಲಿ ನಿಂತಿದೆ. ಈಗಾಗಲೇ ಹಲವು ಪರಿಶೀಲನೆ ನಂತರ ಕುಣಿಗಲ್ ಬಳಿ ಒಂದು ಜಾಗ ಹಾಗೂ ಕನಕಪುರ ರಸ್ತೆಯಲ್ಲಿ ಎರಡು ಜಾಗಗಳನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಕೂಡ ತಂಡ ಕಳುಹಿಸಿ, ಈ ಜಾಗಗಳ ವೀಕ್ಷಣೆ ಮಾಡಿ ಹೋಗಿತ್ತು. ಇನ್ನೇನು ಈ ಎರಡಲ್ಲೇ ಒಂದು ಜಾಗ ಫಿಕ್ಸ್ ಎನ್ನುವಷ್ಟರಲ್ಲಿ ರಾಜಕೀಯ ನಾಯಕರಿಂದ ಭಾರಿ ವಿರೋಧ ಕಂಡುಬಂತು.

ತುಮಕೂರು, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿಗಳು ಈ ಎರಡನೇ ಏರ್ಪೋರ್ಟ್ ತುಮಕೂರು ಜಿಲ್ಲೆಯ ಶಿರಾ ಭಾಗದಲ್ಲಿ ನಿರ್ಮಿಸಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ಇದಕ್ಕೆ ಕೇಂದ್ರ ಬಿಜೆಪಿ ಸಚಿವರು ಕೂಡ ಕೈಜೋಡಿಸಿದ್ದಾರೆ. ಹಾಗಾಗಿ ಶಿರಾದಲ್ಲಿ ಸಾಧ್ಯವಿಲ್ಲದಿದ್ದರೂ ತುಮಕೂರು ಜಿಲ್ಲೆಯ ಯಾವುದಾದರೂ ಜಾಗದಲ್ಲಿ ಏರ್ಪೋರ್ಟ್ ನಿರ್ಮಿಸಿ ಎಂದು ಒತ್ತಡ ಹೇರಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಒಂದು ದೊಡ್ಡ ತಲೆನೋವಾಗಿದೆ.
ಇನ್ನು ರಾಜ್ಯ ಸರ್ಕಾರ ಕನಕಪುರ ರಸ್ತೆಯಲ್ಲೇ ಎರಡು ಜಾಗಗಳನ್ನು ಗುರುತಿಸಿರುವುದು ಕೂಡ ಕೆಲ ರಾಜಕಾರಣಿಗಳ ವಿರೋಧಕ್ಕೆ ಕಾರಣವಾಗಿದೆ. ಕನಕಪುರ ಭಾಗದ ಅಭಿವೃದ್ಧಿಗಾಗಿ ಡಿಕೆ ಶಿವಕುಮಾರ್ ಅವರು ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ವಿಶೇಷ ಕಾಳಜಿ ವಹಿಸಿದ್ದಾರೆ ಎಂಬ ಆರೋಪವೂ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಮೊದಲಿಗೆ ಕನಕಪುರ ರಸ್ತೆ ವರ್ಸಸ್ ಶಿರಾ ಎಂಬ ಫೈಟ್ ಶುರುವಾಗಿತ್ತು.

ಆದರೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವಂತೆ ಎರಡನೇ ಏರ್ಪೋರ್ಟ್ಗೆ ಸದ್ದಿಲ್ಲದೆ ಮತ್ತೊಂದು ಜಾಗ ಫಿಕ್ಸ್ ಮಾಡಲಾಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಈ ಏರ್ಪೋರ್ಟ್ಗೆ ಸಾವಿರಾರು ಎಕರೆ ಜಾಗ ಗುರುತಿಸುವ ಕೆಲಸ ನಡೆದಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಕನಕಪುರ ರಸ್ತೆ ಅಥವಾ ಕುಣಿಗಲ್ನ ಸಂಭಾವ್ಯ ಜಾಗಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡದಿದ್ದರೆ, ಆಯ್ಕೆಯಾಗಿ ಮಾಗಡಿಯ ಜಾಗವನ್ನು ತೋರಿಸಲು ಸಜ್ಜಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮತ್ತೊಂದೆಡೆ ಬಿಜೆಪಿ ಕೇಂದ್ರ ಸಚಿವರೂ ಆಗಿರುವ ವಿ.ಸೋಮಣ್ಣ ಅವರು ತುಮಕೂರಿನಲ್ಲೇ ಏರ್ಪೋರ್ಟ್ ನಿರ್ಮಾಣ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಈ ಚದುರಂಗದಾಟದಲ್ಲಿ ಅಂತಿಮವಾಗಿ ಯಾವ ಜಾಗದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣವಾಗುತ್ತೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications