Plastic Sale: ಏಕ ಬಳಕೆ ಪ್ಲಾಸ್ಟಿಕ್ ಮಾರಾಟ, ಉತ್ಪನ್ನ, ಬಳಕೆ ಮಾಡುವವರಿಗೆ ಬಿಗ್ ಶಾಕ್!
ಬೆಂಗಳೂರು ಜುಲೈ 27: ಪರಿಸರವನ್ನು ಹಾಳು ಮಾಡುವ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆ. ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ನಿಷೇಧಕ್ಕೆ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ್ದರೂ ಬಹುತೇಕ ಕಡೆ ಅದರ ಮಾರಾಟ, ಉತ್ಪನ್ನ, ದಾಸ್ತಾನು ನಡೆಯುತ್ತಲೇ ಇದೆ. ಹೀಗಾಗಿ ಇದನ್ನು ತಡೆಗಟ್ಟಲು ಜಿಲ್ಲೆಗಳಲ್ಲಿ ಮಾರ್ಷಲ್ಗಳನ್ನು ಒಳಗೊಂಡ ಕಾರ್ಯಪಡೆ ರಚಿಸಿ ಏಕ ಬಳಕೆ ಪ್ಲಾಸ್ಟಿಕ್ ಸಾಗಾಟಕ್ಕೆ ಕಡಿವಾಣ ಹಾಕಲು ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದಾರೆ.

ಹೀಗಾಗಿ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ, ಉತ್ಪನ್ನ, ಬಳಕೆ ಮಾಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
ಏಕ-ಬಳಕೆಪ್ಲಾಸ್ಟಿಕ್ (SUP) ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ವಿಶೇಷ ಕಾರ್ಯಪಡೆಯನ್ನು ರಚಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಗೆ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ನಿರ್ದೇಶನ ನೀಡಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ, ಸಂಗ್ರಹಣೆ ಮತ್ತು ಸಾಗಣೆಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಮಾರ್ಷಲ್ಗಳನ್ನು ಒಳಗೊಂಡ ಕಾರ್ಯಪಡೆ ಕಾರ್ಯ ನಿರ್ವಹಿಸಬೇಕು. ಶುಕ್ರವಾರ ನಡೆದ ಸಭೆಯಲ್ಲಿ ಖಂಡ್ರೆ ಅವರು ತಕ್ಷಣ ಈ ತಂಡಗಳನ್ನು ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ವಿಕಾಸಸೌಧದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೊಂದಿಗೆ ಸಭೆ ನಡೆಸಿದ ಅವರು ಎಲ್ಲ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ತಿಳಿಸಿದರು.
ಏಕ ಬಳಕೆ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವುದನ್ನು ನಿಯಂತ್ರಿಸಲು ಸಾರಿಗೆ, ಪೊಲೀಸ್, ವಾಣಿಜ್ಯ ತೆರಿಗೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಸಲಹೆ ನೀಡಿದರು.
ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪೂಜೆಗೆ ಹಾಗೂ ಹಸಿರು ಪಟಾಕಿಗಳನ್ನು ಆಚರಣೆಗೆ ಬಳಸುವಂತೆ ಸಚಿವರು ಜನಸಾಮಾನ್ಯರಲ್ಲಿ ಮನವಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಪ್ಲಾಸ್ಟಿಕ್ ವಸ್ತು ಬಳಕೆ
ಪ್ಲಾಸ್ಟಿಕ್ ಕವರ್, ಸ್ಟ್ರಾಗಳು, ಕಟ್ಲೆರಿ, ಸಂಸ್ಕರಿತ ಆಹಾರದ ಪಾಕೆಟ್, ವ್ರಾಪರ್, ಕಾಟನ್ ಬಡ್ ಸ್ಟಿಕ್ ಇತ್ಯಾದಿಗಳು ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳಾಗಿವೆ. ಅದರಲ್ಲೂ ನೊರೆಯುಕ್ತ ಪ್ಲಾಸ್ಟಿಕ್ ವಸ್ತುವಿನಿಂದ ಮಾಡಿದ ವಸ್ತುಗಳಾದ ಪ್ಲಾಸ್ಟಿಕ್ ಪ್ಲೇಟ್, ಕಪ್ ಇತ್ಯಾದಿಗಳಿಂದ ಪರಿಸರಕ್ಕೆ ಭಾರೀ ಹಾನಿಯಾಗುತ್ತದೆ. ಹೀಗಾಗಿ ವಿಶ್ವಸಂಸ್ಥೆಯ ಆಶಯದ ಅನುಸಾರ ಭಾರತ ಇಂಥ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು ಮುಂದಾಗಿದೆ.
ಭಾರತದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಹೇಗೆ?
ಪುನವರ್ಬಳಕೆ ಸಾಧ್ಯವಿಲ್ಲದ ಮತ್ತು ಬಹು ಎಳೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು 2016ರಲ್ಲಿ ಭಾರತ ನಿಯಮ ರೂಪಿಸಿತು. ೨೦೧೮ರಲ್ಲಿ ಜಾರಿಗೆ ಬಂದ ಈ ನಿಯಮದಲ್ಲಿ 50 ಮೈಕ್ರಾನ್ಗಿಂತ ಕಡಿಮೆ ಮಂದದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ನಿಷೇಧಿಸಲಾಯಿತು. ನಂತರ ಮತ್ತೆ ಈ ನಿಯಮದಲ್ಲಿ ತುಸು ಸಡಿಲಿಕೆ ತಂದಿತು. ನಿಷೇಧಿತ ಪಟ್ಟಿಯಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ಸೇರಿಸಿರಲಿಲ್ಲ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications