Bengaluru Property: ಬೆಂಗಳೂರಿನಲ್ಲಿ ನಕ್ಷೆ ಮಂಜೂರಾತಿ ಪಡೆಯದ ಆಸ್ತಿದಾರರಿಗೆ ಜಿಬಿಎ ಶಾಕ್
ಬೆಂಗಳೂರು: ಬೆಂಗಳೂರಿನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಕಟ್ಟಡ ನಿರ್ಮಿಸಿದ್ದ ಆಸ್ತಿದಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಶಾಕ್ ನೀಡಿದೆ. ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಾಣ ಮಾಡಿರುವವ ಆಸ್ತಿದಾರರಿಗೆ ಶಾಕ್ ನೀಡುವುದು ಮುಂದುವರಿದಿದೆ.
ಬೆಂಗಳೂರು ಪೂರ್ವ ನಗರ ಪಾಲಿಕೆಯ ವೈಟ್ ಫೀಲ್ಡ್ ಉಪವಿಭಾಗ ವ್ಯಾಪ್ತಿಯ ನಲ್ಲೂರಹಳ್ಳಿ, ವಿಕ್ಟೋರಿಯಾ ವ್ಯೂ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್.ರಮೇಶ್ ಅವರು ತಿಳಿಸಿದ್ದಾರೆ.

ಮಹದೇವಪುರ ವಲಯದ ಜಂಟಿ ಆಯುಕ್ತರಾದ ಡಾ: ದಾಕ್ಷಾಯಿಣಿ ಕೆ. ಅವರ ನೇತೃತ್ವದಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದ್ದ ಆರು ಮಹಡಿ ಕಟ್ಟಡದ ತೆರವು ಕಾರ್ಯಾಚರಣೆಯನ್ನು ಗುರುವಾರ / ಜನವರಿ 22ರಂದು ನಡೆಸಲಾಗಿದೆ.
ತೆರವು ಕಾರ್ಯಾಚರಣೆ ನಡೆಸಲಾದ ಕಟ್ಟಡದ ವಿವರಗಳು
ಮಾಲೀಕರು ಹೆಸರು: ಶ್ರೀಕಾಂತ್ ರೆಡ್ಡಿ
ನಿವೇಶನದ ಸಂಖ್ಯೆ ಮತ್ತು ವಿಳಾಸ:02, ವಿಕ್ಟೋರಿಯಾ ವ್ಯೂ ಲೇಔಟ್, ನಲ್ಲೂರಹಳ್ಳಿ
ನಿವೇಶನದ ಅಳತೆ :1,600 ಚದರ ಅಡಿಗಳು
ಕಟ್ಟಡ: ತಳ ಮಹಡಿ ಸೇರಿದಂತೆ ಒಟ್ಟು 6 ಮಹಡಿಗಳ ಅನಧಿಕೃತ ಕಟ್ಟಡ
ಪಾಲಿಕೆ ಕಾರ್ಯಾಚರಣೆಯ ವಿವರ
ಗುರುವಾರ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಪಡೆಯದೆ ಕಟ್ಟಡ ನಿಯಮಾವಳಿಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ನಿರ್ಮಿಸಲ್ಪಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಮಾಲೀಕರಿಗೆ ಅಗತ್ಯ ನೊಟೀಸ್ಗಳನ್ನು ಜಾರಿಗೊಳಿಸಿದ ಬಳಿಕ ಸ್ವತ್ತಿನ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದ್ದರೂ, ಮಾಲೀಕರು ಅನಧಿಕೃತ ಕಟ್ಟಡವನ್ನು ಸ್ವಯಂ ತೆರವುಗೊಳಿಸದೆ ಇರುವುದರಿಂದ ಪೂರ್ವ ನಗರ ಪಾಲಿಕೆ ವೈಟ್ ಫೀಲ್ಡ್ ಉಪವಿಭಾಗ ವ್ಯಾಪ್ತಿಯ ಎಂಜಿನಿಯರ್ ವಿಭಾಗದ ಅಧಿಕಾರಿಗಳು ತೆರವು ಕಾರ್ಯಚರಣೆಯನ್ನು ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ಅಗತ್ಯ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಬ್ರೇಕರ್ ಮತ್ತು ಕಂಪ್ರೆಸರ್ ಯಂತ್ರಗಳನ್ನು ಬಳಸಿಕೊಂಡು ತೆರವುಗೊಳಿಸಲು ಕ್ರಮ ವಹಿಸಲಾಯಿತು ಎಂದು ಆಯುಕ್ತರು ತಿಳಿಸಿದ್ದಾರೆ.
ನಗರ ಪಾಲಿಕೆಯ ಸ್ಪಷ್ಟ ನಿಲುವು
ಅಕ್ರಮ ಕಟ್ಟಡಗಳು ಸಾರ್ವಜನಿಕ ಸುರಕ್ಷತೆ ಮತ್ತು ಯೋಜಿತ ನಗರ ಅಭಿವೃದ್ಧಿಗೆ ಗಂಭೀರ ಅಪಾಯವನ್ನುಂಟು ಮಾಡುತ್ತವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ, ಕಟ್ಟಡ ನಿಯಮ ಉಲ್ಲಂಘನೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುತ್ತಿದ್ದು, ಮುಂದೆಯೂ ಇಂತಹ ಅಕ್ರಮ ನಿರ್ಮಾಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್.ರಮೇಶ್ ಅವರು ಎಚ್ಚರಿಸಿದ್ದಾರೆ.
ಈ ಆಸ್ತಿದಾರರಿಗೆ ಮನವಿ
ಇನ್ನು ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಮೊದಲು ಅಗತ್ಯ ಅನುಮೋದನೆಗಳನ್ನು ಪಡೆಯುವಂತೆ, ಅನುಮೋದಿತ ನಕ್ಷೆ ಮತ್ತು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪಾಲಿಕೆಯು ನಾಗರಿಕರು, ಕಟ್ಟಡ ಮಾಲೀಕರು ಹಾಗೂ ಬಿಲ್ಡರ್ಗಳಿಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ಮನವಿ ಮಾಡಿದೆ. ನಿಯಮ ಉಲ್ಲಂಘನೆಯು ಕಂಡುಬಂದಲ್ಲಿ ಕಾನೂನು ಕ್ರಮ ಅನಿವಾರ್ಯವಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications