ಬಿಎಚ್ಇಎಲ್ ಉದ್ಯೋಗಿ ಅನುಷಾ ಹತ್ಯೆ ಮಾಡಿದ್ದು ಭಾವ!
ಬೆಂಗಳೂರು, ಫೆಬ್ರವರಿ 21 : ಬಿಎಚ್ಇಎಲ್ ಉದ್ಯೋಗಿ ಎಸ್.ಅನುಷಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಭಾವನಿಂದಲೇ ಅನುಷಾ ಹತ್ಯೆ ನಡೆದಿದೆ.
ವಿವೇಕ್ ಅರ್ಗವಾಲ್ ಮತ್ತು ಆತನ ಸ್ನೇಹಿತ ಥಾಯ್ ಹೇಲ್ ಬಂಧಿತ ಆರೋಪಿಗಳು. ಫೆ.15ರಂದು ಕೆಂಗೇರಿಯ ಸನ್ ಸಿಟಿ ಬಳಿಯ ನಿವಾಸದಲ್ಲಿ 32 ವರ್ಷದ ಅನುಷಾರನ್ನು ಹತ್ಯೆ ಮಾಡಲಾಗಿತ್ತು.
ಫೆ.15ರಂದು ಎಸ್.ಅನುಷಾ ಎಂದಿನತೆ ಕೆಲಸಕ್ಕೆ ಹೋಗಿದ್ದರು. ಆ ಬಳಿಕ ಅವರು ಯಾರ ಫೋನ್ ಕರೆಯನ್ನೂ ಸ್ವೀಕರಿಸಿರಲಿಲ್ಲ. ಹಲವಾರು ಬಾರಿ ಕರೆ ಮಾಡಿದ್ದ ಫೋಷರು, ಹೆಚ್ಚು ಕೆಲಸ ಇರಬಹುದು ಎಂದು ಸುಮ್ಮನಾಗಿದ್ದರು.
ಆದರೆ, ಸಂಜೆಯಾದರೂ ಕರೆ ಸ್ವೀಕರಿಸಿದ ಕಾರಣ ಅನುಷಾ ಪತಿ ಸನತ್ಗೆ ವಿಚಾರ ತಿಳಿಸಿದ್ದರು. ಸನತ್ ಮನೆಗೆ ಬಂದು ನೋಡಿದಾಗ ಅನುಷಾ ಶವ ಪತ್ತೆಯಾಗಿತ್ತು. ತಕ್ಷಣ ಅವರು ಕೆಂಗೇರಿ ಪೊಲೀಸರಿಗೆ ವಿಷಯ ತಿಳಿಸಿದ್ದರು.

ಆಸ್ತಿ ವಿಚಾರಕ್ಕೆ ಹತ್ಯೆ : ಅನುಷಾ ಮತ್ತು ಸನತ್ ಪರಸ್ಪರ ಪ್ರೀತಿಸುತ್ತಿದ್ದರು. ಒಂದು ವರ್ಷದ ಹಿಂದೆ ಇಬ್ಬರು ವಿವಾಹವಾಗಿದ್ದು ಸನ್ ಸಿಟಿ ಬಳಿ ವಾಸವಾಗಿದ್ದರು. ಬಿಡದಿ ಬಳಿ ಅನುಶಾ ಅವರಿಗೆ ಸೇರಿದ ಆಸ್ತಿಯೊಂದಿತ್ತು. ಈ ವಿಚಾರಕ್ಕಾಗಿ ಅನುಶಾ ಅಕ್ಕ ಮತ್ತು ಭಾವನ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು.
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದ ವಿವೇಕ್ ಅಪಾರ ನಷ್ಟ ಅನುಭವಿಸಿದ್ದರು. ಆದ್ದರಿಂದ, ಬಿಡದಿ ಬಳಿ ಇರುವ ಆಸ್ತಿ ನೀಡುವಂತೆ ಅನುಷಾರನ್ನು ಒತ್ತಾಯಿಸುತ್ತಿದ್ದರು. ಆದರೆ, ಅವರು ನಿರಾಕರಿಸಿದ್ದರು.
ಫೆ.15ರಂದು ವಿವೇಕ್ ಆತನ ಸ್ನೇಹಿತ ಥಾಯ್ ಜೊತೆಗೆ ಅನುಷಾ ಅವರ ಮನೆಗೆ ಬಂದು ಆಸ್ತಿ ವಿಚಾರಕ್ಕೆ ಮತ್ತೆ ಗಲಾಟೆ ಮಾಡಿದ್ದರು. ಆಸ್ತಿ ನೀಡಲು ಒಪ್ಪದಿದ್ದಾಗ ಅನುಷಾರನ್ನು ಕೊಲೆ ಮಾಡಿ ಪರಾರಿಯಾಗಿದ್ದರು.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ











Click it and Unblock the Notifications