ಶಿಕ್ಷಕರ ಕ್ಷೇತ್ರದ ಚುನಾವಣೆ, ಮಹತ್ವದ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು: ಭಾರತೀಯ ಚುನಾವಣಾ ಆಯೋಗ, ಈಗಾಗಲೇ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸುವ ಬಗ್ಗೆ ವೇಳಾಪಟ್ಟಿ ಪ್ರಕಟಿಸಿದೆ. ಕೆಲವೆ ದಿನದಲ್ಲಿ ಚುನಾವಣೆ ನಡೆಯಲಿದ್ದು ಈ ಕುರಿತು ಈಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಹಾಗಾದರೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯೋದು ಯಾವಾಗ? ಈ ಬಗ್ಗೆ ಮಾಹಿತಿಗೆ ಮುಂದೆ ಓದಿ.
ಅಂದಹಾಗೆ ಇದೀಗ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆಗೆ ನಿಗದಿಯಾದ ದಿನಾಂಕ ಪ್ರಕಾರ, 16-02-2024ಕ್ಕೆ ಮತದಾನ ನಡೆಯಲಿದೆ. ಹಾಗೇ ದಿನಾಂಕ 20-02-2024 ರಂದು ಮತ ಎಣಿಕೆ ನಡೆಯಲಿದೆ. ಹೀಗಾಗಿ ಇದೀಗ ಅಗತ್ಯ ಇರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಹಾಗೇ ಚುನಾವಣೆ ಬಗ್ಗೆ ಇನ್ನೂ ಅನೇಕ ಮಾಹಿತಿಯನ್ನ ಈಗ ನೀಡಲಾಗಿದೆ. ಆ ಕುರಿತು ತಿಳಿದುಕೊಳ್ಳಲು ಮುಂದೆ ಓದಿ.

ಯಾವಾಗ ನಡೆಯಲಿದೆ ಮತದಾನ?
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ, ಉಪ ಚುನಾವಣೆ 2024ರ ಸಂಬಂಧ ಈಗ ಮಹತ್ವದ ಮಾಹಿತಿ ಸಿಕ್ಕಿದೆ. 16.02.2024 ರಂದು ಮತದಾನವನ್ನು ನಡೆಸಿದರೆ, ಕೆಲವೇ ದಿನದಲ್ಲಿ ಫಲಿತಾಂಶ ಕೂಡ ಹೊರಬೀಳಲಿದೆ. ಹಾಗೇ ಚುನಾವಣೆಯ ಹಿನ್ನೆಲೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರಿಗೆ ಬಲಗೈನ ಮಧ್ಯ ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚುವ ಬಗ್ಗೆ ತಿಳಿಸಲಾಗಿದೆ. ಬೆಂಗಳೂರು ಶಿಕ್ಷಕರ ಕೇತ್ರ ಮತ್ತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾದರಿ ನೀತಿ ಸಂಹಿತೆ ಜಾರಿ
ದಿ. 16.01.2024ರಿಂದ 23.02.2024 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳಾದ, 150 ಯಲಹಂಕ & 152 ಬ್ಯಾಟರಾಯನಪುರ, 153 ಯಶವಂತಪುರ, 155 ದಾಸರಹಳ್ಳಿ, 174 ಮಹದೇವಪುರ ಮತ್ತೆ 176 ಬೆಂಗಳೂರು ದಕ್ಷಿಣ ಸೇರಿದಂತೆ, 177 ಆನೇಕಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಸಾರ್ವಜನಿಕರ ದೂರು ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 24/7 ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ/ದೂರು ನಿವಾರಣಾ ಕೇಂದ್ರ ಸ್ಥಾಪಿಸಲಾಗಿದೆ.
ಮತದಾರರು, ಸಾರ್ವಜನಿಕರು, ಸಂಘ ಸಂಸ್ಥೆಗಳು & ಇತರರು ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ದೂರು /ಕುಂದು ಕೊರತೆಗಳನ್ನು ಕಂಟ್ರೋಲ್ ರೂಂ ದೂರು ನಿವಾರಣಾ ಕೇಂದ್ರದಲ್ಲಿನ ಸಹಾಯವಾಣಿ ಸಂಖ್ಯೆ 080-22211106 ಅಥವಾ ಇ-ಮೇಲ್ [email protected] ಮೂಲಕ ಸಲ್ಲಿಸಬಹುದು ಎಂದು ಮಾಹಿತಿ ನೀಡಲಾಗಿದೆ.

ಸಾಮಾಜಿಕ ಮಾಧ್ಯಮ ಅಥವಾ ಜಾಲ ತಾಣಗಳಾದ ಫೇಸ್ ಬುಕ್ -Deputy Commissioner, Bengaluru Urban, ಇನ್ ಸ್ಟಾಗ್ರಾಮ್ ಐಡಿ- dc_bangalore_urban, ಟ್ವಿಟರ್ ಐಡಿ- DC_blrurban, ಮೂಲಕವು ದೂರು ಸಲ್ಲಿಸಬಹುದು ಅಂತ ಸಹಾಯಕ ಚುನಾವಣಾಧಿಕಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications