Rajath-Vinay: ರಜತ್-ವಿನಯ್ ರಿಲೀಸ್: ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಹಿರಂಗ!
ಬೆಂಗಳೂರು, ಮಾರ್ಚ್ 25: ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಅವರು ಮಚ್ಚು ಹಿಡಿದು ಭಯದ ವಾತಾವರಣ ಸೃಷ್ಟಿಸಿದ್ದಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಅವರಿಬ್ಬರನ್ನು ಸ್ಟೇಷನ್ ಬೇಲ್ ಮೇಲೆ ನೆನ್ನೆ ರಾತ್ರಿಯೇ ಬಿಡುಗಡೆ ಮಾಡಲಾಗಿದೆ. ಪೊಲೀಸರು ಬಿಡುಗಡೆಗೆ ಕಾರಣ ನೀಡಿದ್ದಾರೆ. ಹೊರ ಬಂದ ಬಳಿಕ ವಿನಯ್ ಗೌಡ ಇನ್ಸ್ಟಾಗ್ರಾಮ್ ನಲ್ಲಿ ಮತ್ತೆ ವಿಡಿಯೋ ಪೋಸ್ಟ್ ಹಂಚಿಕೊಂಡಿದ್ದಾರೆ.
ರೀಲ್ಸ್ ಹುಚ್ಚಿಗೆ ಈ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಅವರು ಮಚ್ಚು ಹಿಡಿದು ರಸ್ತೆಯಲ್ಲಿ ರೀಲ್ಸ್ ಮಾಡಿದ್ದರು. ಸಾರ್ವಜನಿಕವಾಗಿ ಭಯದ ವಾತಾವರಣ ನಿರ್ಮಾಣ ಹಿನ್ನೆಲೆ ಅವರ ವಿರುದ್ಧ ಬಸವೇಶ್ವರ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದೀಗ ಮಚ್ಚು ಪರಿಶೀಲಿಸಿದ ಪೊಲೀಸರಿಗೆ ಇದು ಪೈಬರ್ ಮಚ್ಚು ಎಂಬುದು ಗೊತ್ತಾಗಿದೆ. ಈ ಕಾರಣದಿಂದ ಅವರನ್ನು ಸ್ಟೇಷನ್ ಬೇಲ್ ಮೇಲೆ ರಿಲೀಸ್ ಮಾಡಲಾಗಿದೆ. ಸೋಮವಾರ ರಾತ್ರಿ 10.30 ಅವರು ಠಾಣೆಯಿಂದ ಬಿಡುಗಡೆಯಾದರು ಎನ್ನುವ ಮಾಹಿತಿ ಲಭ್ಯವಾಗಿದೆ.

ನಟ ದರ್ಶನ್ ಸಿನಿಮಾ ಹೆಸರಗಳನ್ನು ರಜತ್ ಹಾಕಿಕೊಂಡಿದ್ದರು. ವಿನಯ್ ಗೌಡ ಸಹ ಪುಷ್ಪರಾಜ್ ರೀತಿಯಲ್ಲಿ ಇಬ್ಬರು ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಇದು ವೈರಲ್ ಆಗುತ್ತಿದ್ದಂತೆ ಪೊಲೀಸರು ಅವರ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಮಾರ್ಚ್ 20 ರಂದು ಪ್ರಕರಣ ದಾಖಲಿಸಿದ್ದರು. ಸೋಮವಾರ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು.
ಹೀಗೆ ವಿಚಾರಣೆ ಮಾಡಿದ ಪೊಲೀಸರಿಗೆ ಇವರಿಬ್ಬರು ಬಳಸಿದ್ದ ಮಚ್ಚು ಪೈಬರ್ ಮಚ್ಚು ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಈ ಇಬ್ಬರು ಮಾಜಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿದ್ದಾಗ ಭಾರಿ ಸುದ್ದಿ ಮಾಡಿದ್ದರು. ರಜತ್ ತಾನು ಡಿ.ಬಾಸ್ ದರ್ಶನ್ ತುಗೂದೀಪ ಫ್ಯಾನ್ ಎಂದು ಹೇಳಿಕೊಂಡಿದ್ದರು. ಡೈಲಾಗ್ ಹೊಡೆದಿದ್ದರು. ಇತ್ತೀಚೆಗೆ ರಜತ್ ಬಟ್ಟೆ ಮೇಲೆ ಡಿ.ಬಾಸ್ ಹೆಸರು ಬರೆಸಿಕೊಂಡಿದ್ದರು. ಇದು ದರ್ಶನ್ ಕೆಲ ಅಭಿಮಾನಿಗಳ ಸಿಟ್ಟಿಗೂ ಕಾರಣವಾಗಿತ್ತು. ಅದರ ನಂತರ ಮಾಡಿದ್ದ ರೀಲ್ಸ್ ರಜತ್, ವಿನಯ್ ಅವರಿಗೆ ಸಂಕಷ್ಟ ತಂದೊಡ್ಡಿತ್ತು.
ಬಿಡುಗಡೆ ಬಳಿಕ ವಿನಯ್ ವಿಡಿಯೋ ಪೋಸ್ಟ್
ಪೊಲೀಸ್ ಕಸ್ಟಡಿಯಿಂದ ಹೊರ ಬಂದ ಬಳಿಕ ವಿನಯ್ ಗೌಡ ಅವರು ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದು ಹೊಸ ದಿನದ ಆರಂಭ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ತಮ್ಮೊಬ್ಬರದ್ದೆ 'ಪುಷ್ಪಾ ಹಾಡಿನ' ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೂಲಕ ಒಂದಷ್ಟು ಸ್ಪಷ್ಟನೆ ನೀಡಲು ಅವರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications