Get Updates
Get notified of breaking news, exclusive insights, and must-see stories!

ಬಿಹಾರ ಪಿಎಫ್‌ಐ ಧನಸಹಾಯ ಪ್ರಕರಣ: ಬೆಂಗಳೂರಿನಲ್ಲಿ 4, ಕೇರಳದಲ್ಲಿ ಒಬ್ಬರನ್ನು ಬಂಧಿಸಿದ ಎನ್‌ಐಎ

ಬಂಧಿತರನ್ನು ಕರ್ನಾಟಕದ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್, ಇಕ್ಬಾಲ್ ಮತ್ತು ಅಬ್ದುಲ್ ರಫೀಕ್ ಎಂದು ಗುರುತಿಸಲಾಗಿದೆ.

ಬೆಂಗಳೂರು, ಮಾರ್ಚ್ 07: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಕೊಲೆಯ ಸಂಚಿಗೆ ಹಣ ನೀಡಿದ ಆರೋಪದ ಮೇಲೆ ಕರ್ನಾಟಕದಲ್ಲಿ ನಾಲ್ವರು ಮತ್ತು ಕೇರಳದ ಓರ್ವ ಸೇರಿದಂತೆ ಐವರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಬೆಂಗಳೂರಿನಲ್ಲಿ ಮಂಗಳವಾರ ತಿಳಿಸಿದೆ.

ಬಂಧಿತರನ್ನು ಕರ್ನಾಟಕದ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್, ಇಕ್ಬಾಲ್ ಮತ್ತು ಅಬ್ದುಲ್ ರಫೀಕ್ ಎಂದು ಗುರುತಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಅಬಿದ್ ಕೆ ಎಂ ಎನ್ನುವವರನ್ನು ಬಂಧಿಸಲಾಗಿದೆ. ಫುಲ್ವಾರಿ ಷರೀಫ್ ಪಿಎಫ್‌ಐ ಪ್ರಕರಣದ ಎನ್‌ಐಎ ತನಿಖೆಯು ದಕ್ಷಿಣ ಭಾರತದಲ್ಲಿ ಹವಾಲಾ ಕಾರ್ಯಕರ್ತರ ದೊಡ್ಡ ಜಾಲವನ್ನು ಪತ್ತೆಹಚ್ಚಿದ ನಂತರ ಈ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಸಂಸ್ಥೆ ತಿಳಿಸಿದೆ.

Bihar PFI funding case: NIA arrests 4 from Karnataka and 1 from Kerala

ದುಬೈನಲ್ಲಿ ತನ್ನ ಬೇರುಗಳನ್ನು ಹೊಂದಿರುವ ಮತ್ತು ಬಿಹಾರ, ಕರ್ನಾಟಕದಿಂದ ಕಾರ್ಯನಿರ್ವಹಿಸುತ್ತಿರುವ ಪಿಎಫ್‌ಐ ಫಂಡಿಂಗ್ ಮಾಡ್ಯೂಲ್ ಅನ್ನು ಪತ್ತೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಎನ್‌ಐಎ ಪ್ರಕಾರ, ಫುಲ್ವಾರಿ ಷರೀಫ್ ಮತ್ತು ಮೋತಿಹಾರಿಯಲ್ಲಿರುವ ಪಿಎಫ್‌ಐ ಕಾರ್ಯಕರ್ತರು ನಿಷೇಧಿತ ಸಂಘಟನೆಯ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ "ನಿರ್ದಿಷ್ಟ ಸಮುದಾಯದ ಯುವಕರನ್ನು" ಕೊಲೆ ಮಾಡಲು ಪಿಎಫ್‌ಐ ಕಾರ್ಯಕರ್ತರು ಬಂದೂಕು ಮತ್ತು ಮದ್ದುಗುಂಡುಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 5 ರಂದು ಈ ಘಟಕದ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಮಂಗಳವಾರ ಬಂಧಿತರಾಗಿರುವ ಐದು ಜನರು ಭಾರತದ ಹೊರಗಿನಿಂದ ಸಂಗ್ರಹಿಸಿದ ಅಕ್ರಮ ಹಣವನ್ನು ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರಿಗೆ ರವಾನಿಸುವ ಸಂಚಿನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

ಕಳೆದ ವರ್ಷ ಜುಲೈನಲ್ಲಿ ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ತರಬೇತಿ, ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಗಳನ್ನು ನಡೆಸುತ್ತಿದ್ದ ಏಳು ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 5 ರಿಂದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ. ಇದರಿಂದಾಗಿ ಎಂಟು ಸ್ಥಳಗಳಲ್ಲಿ ನಡೆದ ಶೋಧನೆಯಿಂದಾಗಿ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲು ಮತ್ತು ಹಲವಾರು ಕೋಟಿ ರೂಪಾಯಿಗಳ ವಹಿವಾಟಿನ ವಿವರಗಳ ದಾಖಲೆಗಳನ್ನು ಪಡೆಯಲಿ ಸಾಧ್ಯವಾಗಿದೆ ಎಂದು ಹೇಳಿದೆ.

Bihar PFI funding case: NIA arrests 4 from Karnataka and 1 from Kerala

27 ಸೆಪ್ಟೆಂಬರ್ 2022 ರಂದು ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಇದರ ಹೊರತಾಗಿಯೂ, ಪಿಎಫ್‌ಐ ಮತ್ತು ಅದರ ಕಾರ್ಯಕರ್ತರು ಹಿಂಸಾತ್ಮಕ ಉಗ್ರವಾದದ ಸಿದ್ಧಾಂತವನ್ನು ಪ್ರಚಾರ ಮಾಡುವುದನ್ನು ಮುಂದುವರೆಸಿದ್ದಾರೆ. ಅಪರಾಧಗಳನ್ನು ಮಾಡಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವ್ಯವಸ್ಥೆಗೊಳಿಸುತ್ತಿದ್ದಾರೆ ಎಂದು ಎನ್‌ಐಎ ಮಾಹಿತಿ ನೀಡಿದೆ.

ಬಂಧೀತ ಇಕ್ಬಾಲ್ ಮತ್ತು ಇತರ ಸಹಚರರು ದುಬೈ ಮತ್ತು ಅಬುಧಾಬಿಯಿಂದ ಅಕ್ರಮವಾಗಿ ಹಣವನ್ನು ಸಂಗ್ರಹಿಸಿ ಭಾರತದಲ್ಲಿ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್, ಅಬ್ದುಲ್ ರಫೀಕ್ ಮತ್ತು ಅಬಿದ್ ಕೆಎಂ ಅವರಿಗೆ ಹಸ್ತಾಂತರಿಸಿದ್ದಾರೆ. ಸಿನಾನ್, ಸರ್ಫರಾಜ್ ಮತ್ತು ರಫೀಕ್ ಅವರು ಪ್ರಕರಣದ ಆರೋಪಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಿದ್ದಾರೆ. ಐವರು ಆರೋಪಿಗಳನ್ನು ಶೀಘ್ರದಲ್ಲೇ ಪಾಟ್ನಾದ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ಸಂಸ್ಥೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+