'ನಾವು ವೋಟ್ ಮಾಡಲು ಬಿಹಾರಕ್ಕೆ ಹೋಗಲ್ಲ'
ಬೆಂಗಳೂರು, ಸೆಪ್ಟೆಂಬರ್ 28 : ಬಿಹಾರ ವಿಧಾನಸಭೆ ಚುನಾವಣೆ ದೇಶಾದ್ಯಂತ ಕುತೂಹಲ ಹುಟ್ಟು ಹಾಕಿದೆ. ಆದರೆ, ಬಿಹಾರದಿಂದ ಕೆಲಸ ಹುಡುಕುಕೊಂಡು ಉದ್ಯಾನಗರಿಗೆ ಬಂದಿರುವ ಭರತ್ ಕುಮಾರ್ ಮತ್ತು ಶಿವಶಂಕರ್ ಅವರಿಗೆ ಈ ಚುನಾವಣೆ ಬಗ್ಗೆ ಆಸಕ್ತಿ ಇಲ್ಲ. ಬಿಹಾರದಿಂದ ಬೇರೆ-ಬೇರೆ ರಾಜ್ಯಗಳಿಗೆ ವಲಸೆ ಹೋಗಿರುವವರು ಮತ ಹಾಕಲು ತೆರಳುವುದಿಲ್ಲ ಎನ್ನುತ್ತಾರೆ ಇವರು.
ಭರತ್ ಕುಮಾರ್ ಮತ್ತು ಶಿವಶಂಕರ್ ಅವರು ಬೆಂಗಳೂರಿನಲ್ಲಿ ಚಾಟ್ ಶಾಪ್ ಇಟ್ಟುಕೊಂಡಿದ್ದಾರೆ. ಬಿಹಾರ ಜನರಿಗೆ ಉದ್ಯೋಗ ಬೇಕು. ಕೆಲಸ ಹುಡುಕಿಕೊಂಡು ಬೇರೆ ಕಡೆ ಹೋಗುವಂತಾಗಬಾರದು ಎಂದು ಇವರು ಹೇಳುತ್ತಾರೆ. ಚುನಾವಣೆ ದಿನ ಮತ ಹಾಕಲು ನಾವು ಬಿಹಾರಕ್ಕೆ ಹೋಗುವುದಿಲ್ಲ ಎಂದು ಇಬ್ಬರು ಹೇಳುತ್ತಾರೆ. [ಬಿಹಾರ ಚುನಾವಣಾ ವೇಳಾಪಟ್ಟಿ]

ಬಿಹಾರದ ಸುಮಾರು 55 ಲಕ್ಷ ಜನರು ಉದ್ಯೋಗ ಅರಸಿಕೊಂಡು ಬೇರೆ ರಾಜ್ಯಗಳಿಗೆ ಹೋಗಿದ್ದಾರೆ. ಅವರು ಯಾರೂ ಮತಹಾಕಲು ಬಿಹಾರಕ್ಕೆ ಬರುವುದಿಲ್ಲ ಎಂದು ಶಿವಶಂಕರ್ ಹೇಳುತ್ತಾರೆ. ನಿತೀಶ್ ಕುಮಾರ್ ಕೇಂದ್ರದಿಂದ ವಿಶೇಷ ಪ್ಯಾಕೇಜ್ ಕೇಳುತ್ತಿದ್ದಾರೆ. ಆದರೆ, ಬಿಹಾರಕ್ಕೆ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳ ಅಗತ್ಯವಿದೆ ಎಂದು ಇಬ್ಬರು ವಿಶ್ಲೇಷಿಸುತ್ತಾರೆ. [ಬಿಹಾರ ಸೀಟು ಹಂಚಿಕೆ ಲೆಕ್ಕಾಚಾರ]
ಚುನಾವಣೆಯಲ್ಲಿ ಜಾತಿಯೇ ಮುಖ್ಯ : ಕರ್ನಾಟಕವನ್ನು ನನ್ನ ರಾಜ್ಯ ಎಂದು ನಾನು ಅಂದುಕೊಳ್ಳುತ್ತೇನೆ. ನಾನು ಕನ್ನಡ ಮಾತನಾಡಲು ಕಲಿತಿದ್ದೇನೆ ಎಂದು ಹೇಳುವ ಭರತ್ ಕುಮಾರ್, ಬಿಹಾರಕ್ಕೆ ನಾನು ವಾಪಸ್ ಹೋಗುವ ಬಗ್ಗೆ ಖಚಿತವಾದ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎನ್ನುತ್ತಾರೆ. [ಈ 'ವಿಶೇಷ ಅತಿಥಿ'ಗಳ ಮೇಲೆ ಕಣ್ಣು ಇಡುವವರು ಯಾರು?]
ಬಿಹಾರದ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಅಭಿವೃದ್ಧಿಯ ಬಗ್ಗೆ ಮಾತನಾಡುತ್ತವೆ. ಆದರೆ, ಅಲ್ಲಿ ನಡೆಯುವುದು ಜಾತಿ ರಾಜಕೀಯ. ಚುನಾವಣೆ ಫಲಿತಾಂಶವನ್ನು ಜಾತಿಯೇ ನಿರ್ಧರಿಸಲಿದೆ ಎನ್ನುತ್ತಾರೆ. ಲಾಲೂ ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಅಧಿಕಾರಕ್ಕಾಗಿ ಒಂದಾಗಿದ್ದಾರೆ ಎಂದು ವಿಶ್ಲೇಷಿಸುತ್ತಾರೆ.
ವಲಸೆ ಬಂದವರು ಮತ ಹಾಕೋಲ್ಲ : ಚುನಾವಣೆಗಳು ನಡೆದಾಗ ವಲಸೆ ಬಂದವರು ವಾಪಸ್ ಬಿಹಾರಕ್ಕೆ ಹೋಗಿ ಮತದಾನ ಮಾಡುವುದಿಲ್ಲ. 2001ರಲ್ಲಿ ನಡೆಸಿದ ಸಮೀಕ್ಷೆಯಂತೆ 55 ಲಕ್ಷ ಬಿಹಾರಿಗಳು ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ. ಇಂದಿಗೂ ಈ ಸಂಖ್ಯೆ ಹೆಚ್ಚಾಗುತ್ತಲೇ ಇದೆ ಬಿಟ್ಟರೆ ಕಡಿಮೆಯಾಗುತ್ತಿಲ್ಲ.
2013ರ ಸಮೀಕ್ಷೆ ವರದಿಯಂತೆ ಬಿಹಾರದಲ್ಲಿ ಸುಮಾರು 3,345 ಕೈಗಾರಿಕೆಗಳಿವೆ. ಇವು ಅಲ್ಲಿನ ಜನರಿಗೆ ಉದ್ಯೋಗ ನೀಡಲು ವಿಫಲವಾಗುತ್ತಿವೆ. ಆದ್ದರಿಂದ ಜನರು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಉದ್ಯೋಗದ ಹೊರತಾಗಿ ಆರೋಗ್ಯ, ಶಿಕ್ಷಣ, ಮೂಲ ಸೌಲಭ್ಯಗಳ ಕೊರತೆ ಮುಂತಾದ ಸಮಸ್ಯೆಗಳು ಬಿಹಾರವನ್ನು ಕಾಡುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications