Cow Incident: ಹಸುಗಳ ಕೆಚ್ಚಲು ಕತ್ತರಿಸಿದ್ದ ಆರೋಪಿ ಬಂಧನ
ಬೆಂಗಳೂರು, ಜನವರಿ 13: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ವಿಕೃತ ಘಟನೆ ನಡೆದಿತ್ತು. ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದ ಘಟನೆ ವರದಿ ಆಗಿತ್ತು. ಕೇವಲ 48 ಗಂಟೆಗಳಲ್ಲಿ ಕಾಟನ್ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಬೇರೆ ಯಾರದ್ದು ಪಾತ್ರ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಶನಿವಾರ ರಾತ್ರಿ ಮೂರು ಹಸುಗಳ ಮೇಲೆ ಹಲ್ಲೆ ನಡೆದಿತ್ತು. ಕೆಚ್ಚಲು ಕತ್ತರಿಸಿ ವಿಕೃತಿ ಮೆರೆಯಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿ ಬಿಹಾರ ಮೂಲಕ 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ಹೆಸರು ಶೇಖ್ ನಸ್ರು. ಈತ ಕುಡಿದ ಅಮಲಿನಲ್ಲಿ ಈ ರೀತಿ ಕೃತ್ಯ ಎಸಗಿದ್ದಾರೆ. ಮತ್ತಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದಾನೆ. ಅವುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆರ್.ಅಶೋಕ್ ಇತರ ನಾಯಕರು, ಹಿಂದೂಪರ ಕಾರ್ಯಕರ್ತರು ಆಗಮಿಸಿ ಭೇಟಿ ನೀಡಿದ್ದರು.
ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಅಪರಾಧದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ. ಪಶುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವಕ್ಕೆ ಅಪಾಯ ಇಲ್ಲ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್ ಗಿರೀಶ್ ಮಾಹಿತಿ ನೀಡಿದ್ದಾರೆ.
ಹಸುಗಳ ಸ್ಥಿತಿ ಪತ್ತೆ ಆಗಿದ್ದು ಹೇಗೆ?
ಶನಿವಾರ ರಾತ್ರಿ ಘಟನೆ ನಡೆದಿದೆ. ಭಾನುವಾರ ಬೆಳಗಿನ ಜಾವ 4.30ಕ್ಕೆ ವಿನಾಯಕ ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಈ ಹಸುಗಳು ರಕ್ತಸ್ರಾವದಿಂದ ಒದ್ದಾಡುತ್ತಿದ್ದವು. ಪಾದಾಚಾರಿಗಳು ಹಸುಗಳ ಸ್ಥಿತಿ ನೋಡಿ ಹಸುಗಳ ಆರೈಕೆ ಮಾಡುವ ಹೈನುಗಾರ ಕರ್ಣ ಅವರಿಗೆ ತಿಳಿಸಿದ್ದಾರೆ. ಬೆಳಗಾಗುವಷ್ಟರಲ್ಲಿ ಕೃತ್ಯದ ಸುದ್ದಿ ಎಲ್ಲೆಡೆ ಹಬ್ಬಿತ್ತು.
ಸರ್ಕಾರದ ಕಾಯ್ದೆ ಪ್ರಕಾರ, ಪ್ರಾಣಿಯನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ದುಷ್ಕೃತ್ಯ (ಬಿಎನ್ಎಸ್ ಸೆಕ್ಷನ್ 325) ಅಡಿ ಕಾಟನ್ಪೇಟೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ದೃಷ್ಕೃತ್ಯ ನಡೆಸಿದ ದುರುಳರನ್ನು ಶಿಕ್ಷಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೃತ್ಯ ಖಂಡಿಸಿದ್ದರು. ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಅವರು ಖಂಡಿಸಿದರು.
ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವುದರಲ್ಲಿತ್ತು. ಅಷ್ಟರಲ್ಲಿ ಕೇಳಿ ಬಂದ ಒತ್ತಾಯದ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದರು. ಅದರ ಬೆನ್ನಲ್ಲೆ ಆರೋಪಿಯ ಬಂಧನವಾಗಿದೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications