ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ಅಡ್ಡ ಬಂದ ಮಂಗಳಮುಖಿ, ಮುಂದೇನಾಯ್ತು?
ಬೆಂಗಳೂರು, ಜೂನ್ 23: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಯಿ ಚಲಿಸುತ್ತಿದ್ದ ಬೈಕಿಗೆ ಮಂಗಳಮುಖಿಯೊಬ್ಬರು ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್
ನೆಲಮಂಗಲದ ತೊಣಚಿನಗುಪ್ಪೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಾತ್ರಿ ಮುನಿರಾಜು ಎಂಬುವವರು ತಮ್ಮ ಬೈಕಿನಲ್ಲಿ ತೆರಳುತ್ತಿರುವಾಗ ವ್ಯಕ್ತಿಯೊಬ್ಬರು ಮಂಗಳಮುಖಿ ಅಡ್ಡ ಬಂದ ಪರಿಣಾಮ ಅವರಿಂದ ತಪ್ಪಿಸಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಪಘಾತದಲ್ಲಿ ಮಂಗಳಮುಖಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
Biker died in accident near Nelamangala Highway of Bengaluru outskirts.
Story first published: Sunday, June 23, 2019, 13:26 [IST]