ಬೈಕ್ ಸ್ಕಿಡ್ ಆಗಿ ಬಿದ್ದವನಿಗೆ ಕ್ಯಾರೆ ಅನ್ನದ ವೈದ್ಯರು
Recommended Video

ಬೆಂಗಳೂರು, ನವೆಂಬರ್ 03 : ರಾಜ್ಯಾದ್ಯಂತ ನಡೆಯುತ್ತಿರುವ ಖಾಸಗಿ ವೈದ್ಯರ ಒಂದು ದಿನದ ಮುಷ್ಕರದ ಬಿಸಿ ಅನುಭವಿಸಿದವರಿಗೇ ಗೊತ್ತು. ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಲು ಒದ್ದಾಡುತ್ತಿರುವುದು ಬಡವರೇ.
In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರುದ್ಧ ಪ್ರತಿಭಟನೆಗಿಳಿದಿರುವ ಖಾಸಗಿ ವೈದ್ಯರು ಹೊರರೋಗಿಗಳನ್ನು ಕಣ್ಣೆತ್ತಿಯೂ ನೋಡುತ್ತಿಲ್ಲ. ರೋಗಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ದೂರವಿದ್ದರೂ ಸರಕಾರಿ ಆಸ್ಪತ್ರೆಗೆ ಹೋಗುವಂತಾಗಿದೆ.

ಎಚ್ಎಸ್ಆರ್ ಬಡಾವಣೆಯ ನಿವಾಸಿಯೊಬ್ಬರು ಸಿಲ್ಕ್ ಬೋರ್ಡ್ ಬಳಿ ಸ್ಕಿಡ್ ಆಗಿ ಬೈಕ್ ಮೇಲಿಂದ ಬಿದ್ದಿದ್ದಾರೆ. ಅವರನ್ನು ಕೂಡಲೆ ಎಚ್ಎಸ್ಆರ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕದ ಹಾಕಿರುವುದರಿಂದ ಅವರಿಗೆ ತುರ್ತು ಚಿಕಿತ್ಸೆ ದೊರೆತಿಲ್ಲ.
ಆದ್ದರಿಂದ ಅನಿರ್ವಾಯವಾಗಿ ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ ಎಂದು ಗಾಯಾಳುವಿನ ಸಂಬಂಧಿಕರು ಹೇಳಿದರು. ಅಲ್ಲಿ ಅವರಿಗೆ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications