ಬೈಕ್ ಸ್ಟಿಕ್ಕರ್ ನೀಡಿದ ಸುಳಿವಿನಿಂದ ಇಬ್ಬರು ದರೋಡೆಕೋರರು ಸೆರೆ
ಬೆಂಗಳೂರು,ಜು.07: ಶೋಕಿಗಾಗಿ ಬೈಕ್ ಮತ್ತು ಕಾರಿನ ಮೇಲೆ ಸ್ಟಿಕ್ಕರ್ ಹಾಕುವುದು ಸಾಮಾನ್ಯ. ಹೀಗೆ ವಾಹನ ಮೇಲೆ ಹಾಕುವ ಸ್ಟಿಕ್ಕರ್ಗಳೇ ಪೊಲೀಸರು ಕೇಸ್ ಪತ್ತೆ ಮಾಡಲಿಕ್ಕೆ ಸಹಕಾರಿಯಾಗಲಿವೆ. ಪಾರ್ಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್ ಕದ್ದು ಪರಾರಿಯಾಗಿದ್ದ ಕಳ್ಳರನ್ನು ಬಂಧಿಸಲು ನೆರವಾಗಿದ್ದು ಅವರು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನದ ಮೇಲೆ ಅಂಟಿಸಿದ್ದ ಸ್ಟಿಕ್ಕರ್!
ಹೌದು. ದ್ವಿಚಕ್ರ ವಾಹನ ಮೇಲೆ ಅಂಟಿಸಿದ್ದ ಸ್ಟಿಕ್ಕರ್ ನೀಡಿದ ಸುಳಿವಿನ ಮೇರೆಗೆ ಒಂಟಿ ಮಹಿಳೆಯರ ಬ್ಯಾಗ್ ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಜೀವನ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹೋಂಡಾ ಆಕ್ಟೀವಾ ಬೈಕ್ ಹಾಗೂ ಮೊಬೈಲ್ ಮತ್ತು ಮನೆಯ ಕೀ ಗಳನ್ನು ವಶಪಡಿಸಿಕೊಂಡಿದ್ದಾರೆ.

Recommended Video
ಜೀವನ್ ಭೀಮಾ ನಗರದ ವಿಶ್ವೇಶ್ವರಯ್ಯ ಪಾರ್ಕ್ ಸಮೀಪ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಹೋಂಡಾ ಆಕ್ಟೀವಾದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ವ್ಯಾನಿಟಿ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದರು. ಈ ಕುರಿತು ಜೀವನ ಭೀಮಾ ನಗರ ಠಾಣೆಗೆ ದೂರು ನೀಡಿದ್ದ ಮಹಿಳೆ, ಹೊಂಡಾ ಆಕ್ಟೀವಾ ಬೈಕ್ ಹಾಗೂ ಅದರ ಮೇಲೆ ಅಂಟಿಸಿದ್ದ ಸ್ಟಿಕ್ಕರ್ ಸುಳಿವು ನೀಡಿದ್ದಳು. ಇದನ್ನೇ ಆಧಾರವಾಗಿಟ್ಟುಕೊಂಡು ಜೀವನ ಭೀಮಾನಗರ ಪೊಲೀಸರು ಬೈಕ್ ಹುಡುಕಾಟ ಶುರು ಮಾಡಿದ್ದರು. ಸಿಸಿಟಿವಿ ಕ್ಯಾಮರಾ ಆಧರಿಸಿ ಬೈಕ್ ವಿವರ ಸಂಗ್ರಹಿಸಿರುವ ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಒಂಟಿಯಾಗಿ ಓಡಾಡುತ್ತಿದ್ದ ಮಹಿಳೆಯರನ್ನು ಟಾರ್ಗೆಟ್ ಮಾಡಿ ಕದಿಯುವ ಸಂಗತಿ ಗೊತ್ತಾಗಿದೆ. ಆರೋಪಿಗಳು ಮಹಿಳೆ ಬಳಿ ಕದ್ದಿದ್ದ ವ್ಯಾನಿಟಿ ಬ್ಯಾಗ್ , ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಅಂತೂ ದ್ವಿಚಕ್ರ ವಾಹನದ ಮೇಲಿನ ಸ್ಟಿಕ್ಕರ್ ಪ್ರಕರಣ ಪತ್ತೆ ಮಾಡಲು ನೆರವಾಗಿರುವುದು ವಿಶೇಷ.
-
ಬಳ್ಳಾರಿ ಪ್ರಕರಣ: ಮಕ್ಕಳ ಬಾಲ್ಯ ಅತ್ಯಂತ ಸೂಕ್ಷ್ಮವಾದದ್ದು ಕೀಟಲೆ, ಏಕಾಂಗಿತನದ ಬಗ್ಗೆ ಇರಲಿ ಎಚ್ಚರ: ವಸುಧೇಂದ್ರ ಬರಹ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications