Bengaluru Traffic: ಹಾಡಗಲೇ ನಗರದಲ್ಲಿ ವೀಲ್ಹಿಂಗ್ ಪುಂಡರ್ ಹಾವಳಿ: ವಿಡಿಯೋ ವೈರಲ್
ಬೆಂಗಳೂರು, ಮಾರ್ಚ್ 06: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಜೊತೆಗೆ ಸಂಚಾರ ನಿಯಮ ಉಲ್ಲಂಘಿಸುವವರ ಸಂಖ್ಯೆಯು ಕಡಿಮೆ ಏನು ಇಲ್ಲ. ನಗರ ಸಂಚಾರಿ ಪೊಲೀಸರು ಎಷ್ಟೇ ಕಠಿಣ ಕ್ರಮ, ನಿಯಮ ಜಾರಿಗೆ ತಂದರೂ ವ್ಹೀಲಿಂಗ್ ಪುಂಡರ್ ಹಾವಳಿ ಮಾತ್ರ ಕಡಿಮೆ ಆಗಿಲ್ಲ. ನಗರದ ನೈಸ್ ರಸ್ತೆ, ಔಟರ್ ರಿಂಗ್ ರಸ್ತೆ ಹಾಗೂ ಹೊರ ವಲಯದ ರಸ್ತೆಯಲ್ಲಿ ಕಾಣಿಸುತ್ತಿದ್ದ ವೀಲ್ಹಿಂಗ್ ಪುಂಡರ್ ಗುಂಪು ಇದೀಗ ನಗರದ ಹೃದಯ ಭಾಗಕ್ಕೂ ಕಾಲಿಟ್ಟಿದೆ.
ಬೈಕ್ ಏರಿ ವೀಲ್ಹಿಂಗ್ ಮಾಡಿದರೆ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂಬ ಸಾಮಾನ್ಯ ಕಾಳಜಿ ಇಲ್ಲದೇ ನಡುರಸ್ತೆಯಲ್ಲಿ ಪುಂಡಾಟಿಕೆ ಮೆರೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಲ್ಹಿಂಗ್ ನಿಷೇಧವಿದ್ದರೂ ಸಹಿತ ಹಾಡಹಗಲೇ ಮೂರು ದ್ವಿಚಕ್ರ ವಾಹನಗಳಲ್ಲಿ (ಮೊಪೆಡ್) ಬಂದ ಕಿಡಿಗೇಡಿಗಳು ನಡುರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ್ದಾರೆ. ಈ ಘಟನೆ ಬೆಂಗಳೂರು ಜಯನಗರದ 3ನೇ ಬ್ಲಾಕ್ನಲ್ಲಿ ನಡೆದಿದೆ.

ಬೆಂಗಳೂರು ಸಂಚಾರಿ ಪೊಲೀಸರ ಭಯ ಇವರಿಗೆ ಇದ್ದಂತೆ ಕಾಣುತ್ತಿಲ್ಲ. ಏಕೆಂದರೆ ಇವರು ಮೂರು ದ್ವಿಚಕ್ರ ವಾಹನಗಳ (ಮೊಪೆಡ್) ನಂಬರ್ ಪ್ಲೇಟ್ ತೆಗೆದು ಹಾಕಿದ್ದಾರೆ. ಹೀಗಾಗಿಯೇ ಏನು ಮಾಡಿದರೂ ನಡೆಯುತ್ತದೆ ಎಂಬ ಯೋಚನೆ ಇವರು ಹೊಂದಿದಂತಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ 'ಥರ್ಡ್ ಐ' ಖಾತೆಯಿಂದ ವಿಡಿಯೋ ಹಂಚಿಕೊಂಡಿದೆ. ಸವಾರರು ವೀಲ್ಹಿಂಗ್ ವೇಳೆ ನಂಬರ್ ಪ್ಲೇಟ್ ತೆಗೆದಿರುವುದು ವಿಡಿಯೋದಲ್ಲಿ ದೃಢವಾಗಿದೆ.
Group of people performing wheelie at Jayanagar 3rd block road and they do this everyday @blrcitytraffic @JnagarTr pic.twitter.com/pAWDyX5Wyn
— ThirdEye (@3rdEyeDude) March 6, 2025
ಟ್ರಾಫಿಕ್ ಪೊಲೀಸರ ಸ್ಪಂದನೆ, ತನಿಖೆ ಪ್ರಗತಿ
ಪೋಸ್ಟ್ನಲ್ಲಿ ಬೆಂಗಳೂರು ಸಂಚಾರಿ ಪೊಲೀಸರಿಗೆ ಮತ್ತು ಜಯನಗರ ಪೊಲೀಸರಿಗೆ ವಿಡಿಯೋ ಟ್ಯಾಗ್ ಮಾಡಲಾಗಿದೆ. ಈ ಪ್ರಕರಣ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಹಿನ್ನೆಲೆಯ ತನಿಖೆ, ವೀಲ್ಹಿಂಗ್ ಕಿಡಿಗೇಡಿಗಳು ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರವೇ ಪತ್ತೆ ಆಗುವ ವಿಶ್ವಾಸ ಪೊಲೀಸರು ವ್ಯಕ್ತಪಡಿಸಿದ್ದಾರೆ.

ನಡುರಸ್ತೆ ಹೀಗೆ ವೀಲ್ಹಿಂಗ್ ಮಾಡುವ ದೃಶ್ಯ ನೀವು ವಿಡಿಯೋದಲ್ಲಿ ನೋಡಬಹುದು. ಇದರಿಂದ ಪಾದಾಚಾರಿಗಳಿಗೆ, ಸಹ ವಾಹನ ಸವಾರರಿಗೆ ತೊಂದರೆ ಆಗುತ್ತದೆ. ರಸ್ತೆ ಅಪಘಾತಗಳ ಹೆಚ್ಚಳ ಕಾರಣವಾಬಹುದು. ಅಲ್ಲದೇ ಈ ಕಿಡಿಗೇಡಿಗಳಿಗೆ ಸ್ವತಃ ಅವರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಲೇ ವೀಲ್ಹಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ಅಂತವರ ವಿರುದ್ಧ ದಂಡ, ಜೈಲು ಹಾಗೂ ಬೈಕ್ ವಶಕ್ಕೆ ಪಡೆಯುವ ಜೊತೆಗೆ ಪರವಾನಿಗೆ ರದ್ದುಗೊಳಿಸಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications