Video: ನೂತನ ಸಿಎಂ ಬೊಮ್ಮಾಯಿ ಮನೆ ಮುಂದೆ ಮೊದಲ ದಿನವೇ ಆಗಿದ್ದೇನು?
ಬೆಂಗಳೂರು, ಜು. 29: ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ವ್ಹೀಲಿಂಗ್ ಮಾಡಲು ಹೋಗಿ ಮೂವರು ಪೊಲೀಸರ ಅತಿಥಿಗಳಾಗಿದ್ದಾರೆ. ನೂತನ ಮುಖ್ಯಮಂತ್ರಿ ಮನೆಯ ಭದ್ರತಾ ಸಿಬ್ಬಂದಿ ಮೂವರು ಯುವರಕನ್ನು ವಶಕ್ಕೆ ಪಡೆದು ಎರಡು ವ್ಹೀಲಿಂಗ್ ಬೈಕ್ ಸಮೇತ ಆರ್.ಟಿ. ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಹುದ್ದೆಗೆ ಅಲಂಕರಿಸಿದ ಬಸವರಾಜ ಬೊಮ್ಮಾಯಿ ಅವರು ಆರ್.ಟಿ. ನಗರದಲ್ಲಿ ವಾಸವಾಗಿದ್ದಾರೆ. ಅವರು ಮುಖ್ಯಮಂತ್ರಿಯಾಗುವ ಮುನ್ನ ಮನೆಗೆ ಯಾವುದೇ ರೀತಿಯ ಭದ್ರತೆ ತೆಗೆದುಕೊಂಡಿರಲಿಲ್ಲ. ಬುಧವಾರ ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆ ಅವರ ಮನೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅವರ ಮನೆ ಸಮೀಪವೇ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಪುಂಡರನ್ನು ಎರಡು ಬೈಕ್ ಸಮೇತ ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಆರ್.ಟಿ. ನಗರ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಎರಡು ಬೈಕ್ ಜಪ್ತಿ ಮಾಡಿದ್ದು, ಮೂವರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕುರಿತು ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೂತನ ಸಿಎಂ ಮನೆ ಮಂದೆ ವ್ಹೀಲಂಗ್ ಮಾಡಿದ ಮೂವರನ್ನು ವಿಚಾರಣೆ ನಡೆಸಿ ಬಿಟ್ಟು ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Recommended Video
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರ್. ಟಿ.ನಗರ ನಿವಾಸದ ಮುಂದೆ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರು ದುಷ್ಕರ್ಮಿಗಳನ್ನು ಆರ್. ಟಿ. ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಹೀಲಿಂಗ್ ಗೆ ಬಳಸಿದ್ದ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. @BSBommai @CMofKarnataka #Wheeling @rtnagarps pic.twitter.com/XZUcA2DXqZ
— oneindiakannada (@OneindiaKannada) July 29, 2021