ಬಿಬಿಎಂಪಿ ಹೊಸ ಮೇಯರ್ ಸ್ವಾಗತಿಸಿದ ಹಳೇ ಕಸದ ಸಮಸ್ಯೆ
ಬೆಂಗಳೂರು, ಸೆಪ್ಟೆಂಬರ್, 12 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ಗೆ ಹಳೆಯ ಸಮಸ್ಯೆ ಸ್ವಾಗತ ಕೋರಿದೆ. ಬಿಂಗೀಪುರದಲ್ಲಿ ಕಸ ಡಂಪಿಂಗ್ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದು, ಕಸದ ಲಾರಿಗಳನ್ನು ತಡೆದಿದ್ದಾರೆ.
ಮಂಜುನಾಥ ರೆಡ್ಡಿ ಅವರು ಬಿಬಿಎಂಪಿ ಮೇಯರ್ ಆಗಿ ಅಧಿಕಾರ ವಹಿಸಿಕೊಂಡು 24 ಗಂಟೆ ಪೂರೈಸುವುದಕ್ಕೂ ಮೊದಲೇ ಕಸ ವಿಲೇವಾರಿ ಸಮಸ್ಯೆ ಎದುರಾಗಿದೆ. ಗ್ರಾಮಸ್ಥರು ಕಸದ ಲಾರಿಗಳನ್ನು ತಡೆದಿದ್ದರಿಂದ ಬೆಂಗಳೂರು ದಕ್ಷಿಣ ಭಾಗದಲ್ಲಿ ಕಸ ವಿಲೇವಾರಿಗೆ ಸಮಸ್ಯೆ ಎದುರಾಗಿದೆ. [ನೂತನ ಮೇಯರ್ ಮುಂದಿರುವ 10 ಸವಾಲುಗಳು]

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆನೇಕಲ್ ಬಳಿ ಇರುವ ಬಿಂಗೀಪುರದಲ್ಲಿ ಕಸ ಡಂಪಿಂಗ್ ಮಾಡುತ್ತಿದೆ. ಆದರೆ, ಈಗ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ, ಬನಶಂಕರಿ, ಜಯನಗರ, ಲಕ್ಕಸಂದ್ರ, ಪದ್ಮನಾಭನಗರ ಸೇರಿದಂತೆ ಹಲವು ಕಡೆ ಕಸ ರಸ್ತೆಯಲ್ಲೇ ಉಳಿದಿದೆ. [ಮತ್ತೆ ಕಸ ಗಲಾಟೆ, ಎಲ್ಲಿ ಹೋಯ್ತು ಸ್ವಚ್ಛಭಾರತ?]
ಬಿಬಿಎಂಪಿ ಬಿಂಗೀಪುರದಲ್ಲಿ ಸುಮಾರು 20 ಎಕರೆ ಜಾಗದಲ್ಲಿ ಕಸವನ್ನು ಸುರಿಯುತ್ತಿದೆ. ಸುಮಾರು ಎರಡು ವರ್ಷಗಳಿಂದ ಪ್ರತಿನಿತ್ಯ ಇಲ್ಲಿಗೆ 40 ಟನ್ ಕಸವನ್ನು ತಂದು ಸುರಿಯಾಗುತ್ತದೆ. ಬೊಮ್ಮನಹಳ್ಳಿ, ಬಿಟಿಎಂ, ಜಯನಗರ, ಚಿಕ್ಕಪೇಟೆ, ಪದ್ಮನಾಭನಗರ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದ ಕಸವನ್ನು ಇಲ್ಲಿಗೆ ಸಾಗಣೆ ಮಾಡಲಾಗುತ್ತದೆ. [ಇದೆಲ್ಲ ಇಲ್ಲದಿದ್ದರೆ ಬೆಂಗಳೂರನ್ನು ಬೆಂಗಳೂರು ಅಂತಾರಾ?]
2014ರಲ್ಲಿಯೂ ಇಲ್ಲಿನ ಗ್ರಾಮಸ್ಥರು ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಆಗ ಬಿಬಿಎಂಪಿ ಆಯುಕ್ತರು ಸ್ಥಳಕ್ಕೆ ತೆರಳಿ ಜನರ ಮನವೊಲಿಸಿದ್ದರು. ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಒದಗಿಸುತ್ತೇವೆ, ಆರೋಗ್ಯ ಶಿಬಿರ ನಡೆಸುತ್ತೇವೆ, ಗ್ರಾಮದ ರಸ್ತೆ ರಿಪೇರಿ ಮಾಡಿಸುತ್ತೇವೆ ಎಂದು ಭರವಸೆ ನೀಡಿದ್ದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications