ನಾನು ಆಮ್ ಆದ್ಮಿ ಆಗೋಲ್ಲವೆಂದ ಕಿರಣ್

ಆದರೆ ಬೆಂಗಳೂರಿನಲ್ಲಿ ಬಿಟಿ ಉದ್ಯಮಿ, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಅವರು ಮಾತ್ರ ತಾನು Aam Adami Party ಸೇರ್ಪಡೆಯಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 'ನಾನು ಆಮ್ ಆದ್ಮಿ ಪಕ್ಷವನ್ನಾಗಲಿ ಅಥವಾ ಮತ್ಯಾವುದೇ ಪಕ್ಷವನ್ನಾಗಲಿ ಸೇರುವುದಿಲ್ಲ' ಎಂದು ಒತ್ತಿ ಹೇಳಿದ್ದಾರೆ.
Biocon ಕಂಪನಿಯ ಮಾಲೀಕರಾದ ಕಿರಣ್ ಮಜುಂದಾರ್ ಷಾ ಅವರು 'ಉತ್ತಮ ಆಡಳಿತ ಮತ್ತು ಅರ್ಥವ್ಯವಸ್ಥೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡುವುದಕ್ಕಷ್ಟೇ ನನ್ನನ್ನು ಸೀಮಿತಗೊಳಿಸಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ. ( ಕರ್ನಾಟಕದ ಮತ್ತೊಬ್ಬ ಉದ್ಯಮಿ ಆಮ್ ಆದ್ಮಿ ಆದ್ರು! )
ಕ್ಯಾಪ್ಟನ್ ಗೋಪಿನಾಥ್, ವಿ ಬಾಲಕೃಷ್ಣನ್, ಇದೀಗ ನಂದನ್ ನಿಲೇಕಣಿ ಅವರುಗಳು ರಾಜಕೀಯದೊಂದಿಗೆ ಗುರುತಿಸಿಕೊಂಡು, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ಆರಂಭಿಸಿರುವ ಹೊತ್ತಿನಲ್ಲಿ ಬಿ ಪ್ಯಾಕ್ ಜತೆ ಪ್ರಮುಖವಾಗಿ ಗುರುತಿಸಿಕೊಂಡಿರುವ ( President- Bangalore Political Action Committee) ತಾವು ರಾಜಕೀಯ ಪ್ರವೇಶ ಮಾಡುತ್ತೀರಿ ಎಂದು ಕಿರಣ್ ಮಜುಂದಾರ್ ಅವರನ್ನು ಸುದ್ದಿಗಾರರು ಕೇಳಿದಾಗ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
ನಂದನ್ ನಿಲೇಕಣಿ ರಾಜಕೀಯ ಸೇರಿರುವುದರ ಬಗ್ಗೆ ಮಾತನಾಡಿದ ಕಿರಣ್ ಮಜುಂದಾರ್ ಅವರು ಹೊಸತನ, ಹೊಸ ನೀರು ತರಲು ಬಯಸುವ ಜನ ಆದ್ಯವಾಗಿ ರಾಜಕೀಯಕ್ಕೆ ಬರಬೇಕು. ಅಂತಹವರು ರಾಜಕೀಯ ಸೇರುವುದು ನಿಜಕ್ಕೂ ಸ್ವಾಗತಾರ್ಹ. ನಿಲೇಕಣಿಗೆ ಸ್ಪಷ್ಟ ದೃಷ್ಟಿಕೋನವಿದೆ. ನಿಲೇಕಣಿ ಅಂತಹವರು ಖಂಡಿತ ಬದಲಾವಣೆ ತರಬಲ್ಲರು ಎಂದು ಮೆಚ್ಚುಗೆ ಸೂಚಿಸಿದರು.
ಉದ್ಯಮ ರಂಗದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರವಿದೆ. ಮೊದಲು ಇದನ್ನು ಸರಿಪಡಿಸಬೇಕಾಗಿದೆ ಎಂದು ಕಿರಣ್ ಮಜುಂದಾರ್ ಅವರು ಮಾರ್ಮಿಕವಾಗಿ ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications