ಹೆಬ್ಬಗೋಡಿ ಮೆಟ್ರೋ ನಿಲ್ದಾಣ: ಬಿಎಂಆರ್ಸಿಎಲ್ ಜತೆ ಬಯೋಕಾನ್ ಒಪ್ಪಂದ
ಬೆಂಗಳೂರು, ಅಕ್ಟೋಬರ್ 08: ನಮ್ಮ ಮೆಟ್ರೋ ಎರಡನೇ ಹಂತದ ಆರ್ವಿ ರಸ್ತೆ ಬೊಮ್ಮಸಂದ್ರ ಮಾರ್ಗದಲ್ಲಿನ ಹೆಬ್ಬಗೋಡಿ ನಿಲ್ದಾಣ ನಿರ್ಮಾಣಕ್ಕೆ ಬಯೋಕಾನ್ ಸಂಸ್ಥೆ ಒಪ್ಪಂದಕ್ಕೆ ಸಹಿ ಹಾಕಿದೆ.
ಸಂಸ್ಥೆಯ ಪ್ರಧಾನ ಕಚೇರಿಯ ಸಮೀಪದಲ್ಲಿ ಈ ನಿಲ್ದಾಣ ನಿರ್ಮಾಣವಾಗಲಿದ್ದು, ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನೆರವು ನೀಡಲು ಯೋಜಿಸಿದೆ. ಈ ನಿಲ್ದಾಣವನ್ನು ದತ್ತು ಪಡೆಯಲಾಗುತ್ತದೆ ಎಂದು ಬಯೋಕಾನ್ ಮುಖ್ಯಸ್ಥೆ ಮಜುಂದಾರ್ ಷಾ ತಿಳಿಸಿದ್ದಾರೆ.
ನಗರದಲ್ಲಿ ಹಲವು ಮೂಲಸೌಕರ್ಯ ಕಾಮಗಾರಿಗಳು ಆರಂಭವಾಗಿದ್ದು, ಮೂರು ತಿಂಗಳಲ್ಲಿ ದೊಡ್ಡ ಮಟ್ಟದ ಬದಲಾವಣೆ ಕಾಣುವ ವಿಶ್ವಾಸವಿದೆ ಎಂದರು.

ಬಯಕಾನ್ ಸಂಸ್ಥೆಯು ಬಿಎಂಆರ್ಸಿಎಲ್ಗೆ 65ಕೋಟಿ ರೂ ನೀಡಲಿದೆ. ಈ ಕ್ರಮವು ಪರಿಸರದ ಬಗೆಗಿನ ಕಂಪನಿ ಜವಾಬ್ದಾರಿಯನ್ನು ಪೂರೈಸಲು ಮತ್ತು ಚಲನಶೀಲತೆಗೆ ಪರ್ಯಾಯ ಮಾರ್ಗಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಮೆಟ್ರೋ ನಿರ್ಮಾಣವಾಗುವುದರಿಂದ ಸಂಚಾರ ದಟ್ಟಣೆ ಕೂಡ ಕಡಿಮೆಯಾಗಿದೆ. ಆರ್ವಿ ರಸ್ತೆ ಬೊಮ್ಮಸಂದ್ರದ ನಡುವೆ 18.82 ಕಿಮೀ ಯೋಜನೆಯಿದೆ. ಒಟ್ಟು 5744 ಕೋಟಿ ರೂ ವೆಚ್ಚದಲ್ಲಿ ಯೋಜನೆ ನಿರ್ಮಾಣವಾಗುತ್ತಿದೆ.
ಚಾಲಕ ರಹಿತ ಮೆಟ್ರೋ ಓಡಿಸಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಎರಡನೇ ಹಂತದ ಮೆಟ್ರೋ ಯೋಜನೆಯಲ್ಲಿ ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ಓಡಾಟ ನಡೆಸಲಿದೆ.
ಕಮ್ಯುನಿಕೇಷನ್ ಬೇಸ್ಡ್ ಟ್ರೈನ್ ಕಂಟ್ರೋಲ್ ಸಿಗ್ನಲಿಂಗ್ ಸಿಸ್ಟಮ್ ತಂತ್ರಜ್ಞಾನವನ್ನು ಎರಡನೇ ಹಂತದ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತದೆ. ರೈಲನ್ನು ನಿಯಂತ್ರಣ ಕೊಠಡಿಯಿಂದಲೇ ನಿರ್ವಹಣೆ ಮಾಡಲಾಗುತ್ತದೆ. ಒಂದನೇ ಹಂತದಲ್ಲಿ ಈಗ ರೈಲು ಕಾರ್ಯಾಚರಣೆಗೊಳಿಸುತ್ತಿರುವ ವ್ಯವಸ್ಥೆಯಲ್ಲಿ ಡಿಟಿಜಿ ವ್ಯವಸ್ಥೆ ಇದೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications