ವಿಟಿಯು: ಎಂಜಿನಿಯರಿಂಗ್ ಪದವಿಯಲ್ಲಿ ಜೀವಶಾಸ್ತ್ರ ಸೇರ್ಪಡೆ
ಬೆಂಗಳೂರು, ಸೆಪ್ಟೆಂಬರ್ 25: ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯವು(ವಿಟಿಯು) ತನ್ನ ಅಧೀನದಲ್ಲಿರುವ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ವರ್ಷದಿಂದ ಬಯೋಲಜಿ ವಿಷಯವನ್ನು ಸೇರ್ಪಡೆಗೊಳಿಸಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿಟಿಯು ಕುಲಪತಿ ಕರಿಸಿದ್ದಪ್ಪ, ಕೊರೊನಾ ಸಾಂಕ್ರಾಮಿಕ ಬಂದಾಗಿನಿಂದ ಎಂಜಿನಿಯರ್ ಉದ್ಯೋಗಿಗಳು ವೈದ್ಯರ ಜೊತೆ ಸೇರಿಕೊಂಡು ಕಾರ್ಯ ನಿರ್ವಹಿಸುವ ಬೆಳವಣಿಗೆ ಕಂಡುಬಂಡಿತ್ತು. ವೈದ್ಯಕೀಯ ಉಪಕರಣ ಅಭಿವೃದ್ಧಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ತಂತ್ರಜ್ನಾನ ಮತ್ತಿತರ ಕ್ಷೇತ್ರಗಳಲ್ಲಿ ವೈದ್ಯರ ಜೊತೆ ಎಂಜಿನಿಯರ್ ಗಳೂ ಒಂದಾಗಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸೂಚಿಸಲಾಗಿರುವ ability enhancement courses ಅಡಿ ಈ ನೂತನ ವಿಷಯವನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಈ ನೂತನ ಸವಾಲನ್ನು ಸುಲಭವಾಗಿ ಮೆಟ್ಟಿನಿಲ್ಲಲು ಎಂಜಿನಿಯರಿಂಗ್ ಕಲಿಕೆಯ ಮಟ್ತದಲ್ಲೇ ಬಯೋಲಜಿ ವಿಷಯ ಸೇರ್ಪಡೆಗೊಳಿಸುವುದರಿಂದ ಪ್ರತಿ ಎಂಜಿನಿಯರಿಂಗ್ ವಿದ್ಯಾರ್ಥಿ ವೈದ್ಯಕೀಯ ಕ್ಷೇತ್ರದಲ್ಲಿ ಎದುರಾಗಲಿರುವ ಸವಾಲುಗಳನ್ನು ಎದುರಿಸಬಹುದು ಎಂದಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಈ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡಬಲ್ ಎಂಜಿನಿಯರಿಂಗ್ ಡಿಗ್ರಿ ಪಡೆಯುವ ಆಯ್ಕೆಯನ್ನು ಒದಗಿಸಿದೆ. ಹೆಚ್ಚುವರಿ ಎರಡನೇ ಡಿಗ್ರಿ ಪಡೆಯಲು ವಿದ್ಯಾರ್ಥಿಗಳು ಹೆಚ್ಚುವರಿ ವರ್ಷಗಳನ್ನು ಕಾಲೇಜಿನಲ್ಲಿ ಕಳೆಯಬೇಕಾಗುವುದು.
ಒಂದು ಡಿಗ್ರಿ ಪಡೆಯಲು ಎಂಜಿನಿಯರಿಂಗ್ ವಿದ್ಯಾರ್ಥಿ ಕನಿಷ್ಟ 4 ವರ್ಷಗಳ ಕಾಲ ವ್ಯಾಸಂಗ ಮಾಡಬೇಕು. ಇದು ಎಲ್ಲರಿಗೂ ಗೊತ್ತಿರುವುದೇ. ಡಬಲ್ ಡಿಗ್ರಿ ಪಡೆಯಲು ಇಚ್ಛಿಸುವ ಎಂಜಿನಿಯರಿಂಗ್ ವಿದ್ಯಾರ್ಥಿ ಹೆಚ್ಚುವರಿ 2 ವರ್ಷ ಅಂದರೆ ಒಟ್ಟು 6 ವರ್ಷಗಳ ಕಾಲ ವ್ಯಾಸಂಗ ಮಾಡಬೇಕಾಗುತ್ತದೆ.
2021- 22ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರುವ ವಿದ್ಯಾರ್ಥಿಗಳಿಗೆ ಈ ಸವಲತ್ತು ಅನ್ವಯವಾಗಲಿದೆ. ವಿಟಿಯು ಒದಗಿಸಿರುವ ಈ ಸವಲತ್ತಿಗೆ ವ್ಯಾಸಂಗ ಮಂಡಳಿ ಮತ್ತು ಶೈಕ್ಷಣಿಕ ಮಂಡಳಿ ಇನ್ನೂ ಅಂತಿಮ ಆನುಮೋದನೆ ನೀಡಬೇಕಿದೆ. ಈ ವರ್ಷದಿಂದಲೇ ಈ ನೂತನ ವ್ಯವಸ್ಥೆ ಜಾರಿಯಾಗುವ ಬಗ್ಗೆ ವಿಟಿಯು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Recommended Video
ಬೆಳಗಾವಿಯಲ್ಲಿ ಎಂಜಿನಿಯರಿಂಗ್ ಕೋರ್ಸ್ಗಳ ಜತೆಗೆ ಸಂಗೀತ, ಯೋಗ, ಲಲಿತಕಲೆ, ಭೂಗೋಳ, ವಿಜ್ಞಾನ, ಕನ್ನಡ ಸಾಹಿತ್ಯ, ಬೌದ್ಧಿಕ ಆಸ್ತಿ ಹಕ್ಕು, ಸಮಾಜವಿಜ್ಞಾನ, ಇತಿಹಾಸ, ರಾಜಕೀಯ ವಿಜ್ಞಾನ,ಕೃತಕಬುದ್ಧಿಮತ್ತೆ, ರೊಬೊಟಿಕ್ಸ್, ಸಾಮಾಜಿಕ ಎಂಜಿನಿಯರಿಂಗ್ ಸೈಬರ್ ಕ್ರೈಂ ಮೊದಲಾದ ಕೋರ್ಸ್ಗಳನ್ನು ತೆಗೆದುಕೊಂಡು ಉತ್ತೀರ್ಣರಾಗುವ ಮೂಲಕ ಹೆಚ್ಚುವರಿಯಾಗಿ ಪದವಿ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications