ಬಯೋಜೀನ್, ಜೈನ್ ಸಹಭಾಗಿತ್ವದಲ್ಲಿ ಬಯೋ ಎಂಎಸ್ಸಿ
ಬೆಂಗಳೂರು, ಜೂ. 20 : ಜೈವಿಕ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಬೆಂಗಳೂರು ಮೂಲದ ಬಯೋಜೀನ್ ಕಂಪನಿ ಜೈನ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಇಂಡಸ್ಟ್ರಿಯಲ್ ಬಯೋಟೆಕ್ನಾಲಜಿಯಲ್ಲಿ ಎಂಎಸ್ಸಿ ಸ್ನೋತಕೋತ್ತರ ಪದವಿಯನ್ನು ಆರಂಭಿಸಿದೆ.
ಬಯೋ ಫಾರ್ಮಾಸ್ಯುಟಿಕಲ್ ನಲ್ಲಿ ಸಾಕಷ್ಟು ನೈಪುಣ್ಯತೆ ಹೊಂದಿರುವ ಬಯೋಜೀನ್, ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿ ನೀಡಲು, ಹೊಸ ತಂತ್ರಜ್ಞಾನದಲ್ಲಿ ಪಳಗಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಔದ್ಯಮಿಕ ಕೌಶಲ್ಯವನ್ನು ಒದಗಿಸಲಿದೆ.
ಇಂದಿನ ಕೈಗಾರಿಕೆಗಳ ಅಗತ್ಯಗಳಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಹದವಾಗಿ ರೂಪಿಸಲು ನಿಷ್ಣಾತ ಕೈಗಾರಿಕಾ ತಜ್ಞರಿಂದ ತರಬೇತಿ, ಸಹ ಸಂಶೋಧನಾ ಕಾರ್ಯಕ್ರಮ, ಹಾಗು ವಿದ್ಯಾರ್ಥಿಗಳಲ್ಲಿ ತಾಂತ್ರಿಕ ನೈಪುಣ್ಯತೆ ತುಂಬಲು ಬಯೋಜೀನ್ ಸಹಕರಿಸಲಿದೆ.

ಜೈವಿಕ ತಂತ್ರಜ್ಞಾನ ಶಿಕ್ಷಣ, ಸಂಶೋಧನೆ ಮತ್ತು ಉದ್ಯಮದಲ್ಲಿ ಸಹಭಾಗಿತ್ವದಲ್ಲಿ ನಾವೀನ್ಯತೆಯನ್ನು ತರುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಮತ್ತು ಕೈಗಾರಿಕೆ ನಡುವೆ ಜೂ.16ರಂದು ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಐಐಎಸ್ಸಿಯ ಮೈಕ್ರೋ ಬಯಾಲಜಿಯಲ್ಲಿ ಪ್ರೊಫೆಸರ್ ಆಗಿರುವ 'ಪದ್ಮಶ್ರೀ' ಪ್ರೊ. ಎಂ. ವಿಜಯನ್ ಮುಖ್ಯ ಅತಿಥಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಜೈನ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ.ಜಿ. ಕೃಷ್ಣದಾಸ್ ನಾಯರ್, ಬಯೋಜೀನ್ನ ಎಕ್ಸಿಕ್ಯೂಟಿವ್ ನಿರ್ದೇಶಕ ವಿಬಿನ್ ಜೋಸೆಫ್, ಡಾ. ಜಗದೀಶ್ ಮಿಟ್ಟೂರ್, ರಮಣ್ ಕೆ. ರಾಮಚಂದ್ರನ್ ಮುಂತಾದ ಗಣ್ಯರು ಭಾಗವಹಿಸಿದ್ದರು.
ಈ ಸಮಾವೇಶದಲ್ಲಿ ಯಾವ ಗಣ್ಯರು ಏನು ಹೇಳಿದರು, ಈ ಸ್ನಾತಕೋತ್ತರ ಪದವಿ ಪಡೆಯಲು ಯಾರು ಅರ್ಹರು, ಅವರಿಗೆ ಯಾವ ಪದವಿ ಇರಬೇಕು, ಇದಕ್ಕೆ ಅರ್ಜಿ ಹಾಕಲು ಯಾರನ್ನು ಸಂಪರ್ಕಿಸಬೇಕು ಇತ್ಯಾದಿ ವಿವರಗಳಿಗಾಗಿ ಈ ಲಿಂಕನ್ನು ಕ್ಲಿಕ್ಕಿಸಿ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications