ಜೂ.7ರಿಂದ ಗೋಪಿನಾಥ ದಾಸರ ಜನ್ಮಶತಮಾನೋತ್ಸವ
ಬೆಂಗಳೂರು, ಜೂ. 7 : ಎಂಬತ್ಮೂರು ವರ್ಷಗಳ ಭವ್ಯ ಇತಿಹಾಸವಿರುವ ಕನ್ನಡ ನಾಡಿನ ಹೆಮ್ಮೆಯ ನೃತ್ಯ ನಾಟಕ ಪರಿವಾರ 'ಪ್ರಭಾತ್ ಕಲಾವಿದರು' ಸಂಸ್ಥೆಯನ್ನು ಸ್ಥಾಪಿಸಿದ 'ಹರಿಕಥಾ ರತ್ನ' ಟಿ.ವಿ. ಗೋಪಿನಾಥ ದಾಸರು ಅವರ ಜನ್ಮ ಶತಮಾನೋತ್ಸವ 'ಗೋಪಣ್ಣ 100' ಜೂ.7ರಿಂದ ಎಂಟು ದಿನಗಳ ಕಾಲ ಭವ್ಯವಾಗಿ ಬೆಂಗಳೂರಿನಲ್ಲಿ ಆಚರಿಸಲಾಗುತ್ತಿದೆ.
ಎಂಟು ದಿನಗಳ ಕಾಲ, ಪ್ರತಿ ಶನಿವಾರ ಮತ್ತು ಭಾನುವಾರ, ನಾಟಕ, ನೃತ್ಯ ನಾಟಕ, ಗಾಯನ, ನರ್ತನ, ಕಥಾ ಕೀರ್ತನೆ ಮುಂತಾದ ಸಾಂಸ್ಕೃತಿಕ ಸಂಮೃದ್ಧ ಕಾರ್ಯಕ್ರಮಗಳು ಬೆಂಗಳೂರಿನ ಕಲಾ ಪ್ರೇಮಿಗಳನ್ನು ತೋಯಿಸಲಿವೆ. ಈ ಸಂದರ್ಭದಲ್ಲಿ ಕಲೆಗಾಗಿ ಜೀವನವನ್ನು ಮುಡುಪಿಟ್ಟ ಹಲವಾರು ಸಾಧಕರನ್ನು ಸನ್ಮಾನ ಕೂಡ ಮಾಡಲಾಗುತ್ತಿದೆ.

ಶನಿವಾರ ಸಂಜೆ 6.15ಕ್ಕೆ ಸೆಂಟ್ರಲ್ ಕಾಲೇಜು ಕ್ಯಾಂಪಸ್ ನಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ಖೋಡೆ ಗ್ರೂಪ್ ಆಫ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಹರಿ ಖೋಡೆ, ಕೇಂದ್ರ ಸಾಹಿತ್ಯ ಅಕಾಡೆಮಿಯ ಉಪಾಧ್ಯಕ್ಷ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಮತ್ತು ಸಚಿವೆ ಉಮಾಶ್ರೀ ಉಪಸ್ಥಿತರಿರಲಿದ್ದಾರೆ. [ಕರ್ನಾಟಕ ಹೆಮ್ಮೆಯ ಪ್ರಭಾತ್ ಕಲಾವಿದರು]
ಉದ್ಘಾಟನೆಯ ನಂತರ ಹರಿಕಥಾ ವಿದ್ವಾಂಸ ಭದ್ರಗಿರಿ ಸರ್ವೋತ್ತಮ ಪೈ, ದಿ. ಮೈಸೂರು ಅನಂತಸ್ವಾಮಿ ಅವರ ಪತ್ನಿ ಶಾಂತಾ ಅನಂತಸ್ವಾಮಿ ಅವರನ್ನು ಸನ್ಮಾನಿಸಲಾಗುತ್ತಿದೆ. ನಂತರ ಹರಿಕಥಾ ರತ್ನಾಕರ ಗೋಪಿನಾಥ ದಾಸರ ಅವರ ಜೀವನ ಚರಿತ್ರೆ ಆಧಾರಿತ ರೂಪಕ 'ಕಲಾತಪಸ್ವಿ' ಮತ್ತು ಪ್ರಭಾತ ಕಲಾವಿದರಿಂದ ನೃತ್ಯ ನಾಟಕ 'ಪುಣ್ಯಕೋಟಿ ಮತ್ತು ಭಗವದ್ಗೀತೆ' ಪ್ರದರ್ಶನಗೊಳ್ಳಲಿವೆ.
ಜೂನ್ 8ರಿಂದ ನಗರದ ಹಲವಾರು ಸಭಾಂಗಣಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ರಸದೌತಣ ಬಡಿಸಲಿವೆ. ಜೆಪಿ ನಗರದ ಆರ್ ವಿ ಡೆಂಟಲ್ ಕಾಲೇಜು ಸಭಾಂಗಣ, ಕುಮಾರಸ್ವಾಮಿ ಲೇಔಟ್ ನಲ್ಲಿರುವ ಪ್ರೇಮಚಂದ್ರ ಸಾಗರ ಸಭಾಂಗಣ, ವಿವಿ ಪುರಂನಲ್ಲಿನ ಕುವೆಂಪು ಕಲಾಕ್ಷೇತ್ರ, ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರಗಳಲ್ಲಿ ಕಲಾವೈಭವ ಮೇಳೈಸಲಿದೆ. [ಹೆಚ್ಚಿನ ವಿವರಗಳಿಗಾಗಿ]
ಜೂನ್ 29ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮೂರು ಗಂಟೆಗೆ ಬೆನಕ ತಂಡದಿಂದ 'ಹಯವದನ' ನಾಟಕ ಪ್ರದರ್ಶಿತವಾಗಲಿದೆ. ಸಮಾರೋಪ ಸಮಾರಂಭದಲ್ಲಿ ರಾಜ್ಯ ಸರಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ ಜಯರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀನಿವಾಸಾಚಾರಿ ಅವರು ಭಾಗವಹಿಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications