ಪ್ರಭಾತ್ ಕಲಾವಿದರಿಂದ ಗೋಪಣ್ಣ ಜನ್ಮಶತಮಾನೋತ್ಸವ
ಬೆಂಗಳೂರು, ಜೂ.4: ಹರಿಕಥಾರತ್ನಾಕರ ಗೋಪಿನಾಥದಾಸರ ಜನ್ಮ ಶತಮಾನೋತ್ಸವವನ್ನು 'ಗೋಪಣ್ಣ 100' ಎಂಬ ಹೆಸರಿನಲ್ಲಿ ಪ್ರಭಾತ ಕಲಾವಿದರು ಜೂ.7 ರಿಂದ ಜೂ 29 ರ ತನಕ ಪ್ರತಿ ಶನಿವಾರ ಮತ್ತು ಭಾನುವಾರ ವೈವಿಧ್ಯಮಯವಾಗಿ ಆಚರಿಸುತ್ತಿದ್ದಾರೆ.
ಜೂ.7ರಂದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಂಜೆ 6.15ಕ್ಕೆ 'ಗೋಪಣ್ಣ 100' ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ಕಲಾ ಪೋಷಕರಾದ ಹರಿಖೋಡೆ ಉದ್ಘಾಟಿಸಲಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರಿ ಉಪಸ್ಥಿತರಿರುತ್ತಾರೆ.

ಇದೇ ಸಂದರ್ಭದಲ್ಲಿ ಭದ್ರಗಿರಿ ಸರ್ವೋತ್ತಮ ಪೈ, ಹರಿಕಥಾ ವಿದ್ವಾಂಸರು ಹಾಗೂ ಶಾಂತಾ ಅನಂತಸ್ವಾಮಿ, ದಿ ಮೈಸೂರು ಅನಂತಸ್ವಾಮಿ ಅವರ ಪತ್ನಿ ಇವರಿಗೆ ಸನ್ಮಾನ ಮಾಡಲಾಗುತ್ತದೆ.
* ಜೂ. 8ರಂದು ಜೆಪಿ ನಗರದ ಆರ್ ವಿ ಡೆಂಟಲ್ ಕಾಲೇಜು ಸಭಾಂಗಣದಲ್ಲಿ ಐರಾವತ ತುಂಟ ಗಣಪ ಕಥಾ ಕೀರ್ತನೆ. ಸಂಜೆ ಮೈಸೂರು ಮಲ್ಲಿಗೆ ನಾಟಕ,
* ಜೂ. 14 ಹಾಗೂ ಜೂ.15ರಂದು ದಯಾನಂದ ಸಾಗರ್ ಕಾಲೇಜಿನ ಸಭಾಂಗಣದಲ್ಲಿ
ನೃತ್ಯಾರ್ಪಣ: ಹೇಮಾ ಪಂಚಮುಖಿ ಮತ್ತು ತಂಡ ಇನ್ನಿತರ ಕಾರ್ಯಕ್ರಮಗಳು
* ಜೂ .22ರಂದು ಕುವೆಂಪು ಕಲಾಕ್ಷೇತ್ರ, ವಿವಿಪುರಂನಲ್ಲಿ ಉತ್ತರ ಭೂಪ ನಾಟಕ, ಭೈರವಿ ನಾಟಕ, ವಿಜಯೋತ್ಸವ ನೃತ್ಯ ನಾಟಕವಿರುತ್ತದೆ.
* ಜೂ.29ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಯವದನ ನಾಟಕ ಹಾಗೂ ಗೋಪಿನಾಥದಾಸರ ಜೀವನ ಕುರಿತ ಕಲಾ ತಪಸ್ವಿ ನಾಟಕ ಹಾಗೂ ಸಮಾರೋಪ ಸಮಾರಂಭವಿರುತ್ತದೆ.
ಕಲಾಸಕ್ತರು ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂತಸ ಅನುಭವಿಸಬೇಕಾಗಿ ಪ್ರಭಾತ್ ಕಲಾವಿದರು ತಂಡ ಹರೀಶ್ ಅವರು ಕೋರಿದ್ದಾರೆ.ಹೆಚ್ಚಿನ ಮಾಹಿತಿಗೆ ಪ್ರಭಾತ್ ಕಲಾವಿದರು ವೆಬ್ ಸೈಟ್ ಗೆ ಭೇಟಿ ಕೊಡಿ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications