ಬಿಜೆಪಿ ಕಾರ್ಯಕರ್ತ ಚಿಕ್ಕತಿಮ್ಮೇಗೌಡ ಕೊಲೆ ಆರೋಪಿ ಬಂಧನ
ಬಿಜೆಪಿ ಕಾರ್ಯಕರ್ತ ಚಿಕ್ಕತಿಮ್ಮೇಗೌಡ(42) ಹತ್ಯೆಗೆ ಸುಪಾರಿ ನೀಡಿದ್ದ ಮಾಜಿ ಬಿ.ಬಿ.ಎಂ.ಪಿ.ಸದಸ್ಯರಾದ ಗೋವಿಂದೇಗೌಡ ಹಾಗೂ ಅವರ ಪತ್ನಿ ವರಮಹಾಲಕ್ಷ್ಮೀ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು, ನವೆಂಬರ್ 18: ಬಿಜೆಪಿ ಕಾರ್ಯಕರ್ತ ಚಿಕ್ಕತಿಮ್ಮೇಗೌಡ(42) ಹತ್ಯೆಗೆ ಸುಪಾರಿ ನೀಡಿದ್ದ ಮಾಜಿ ಬಿ.ಬಿ.ಎಂ.ಪಿ.ಸದಸ್ಯರಾದ ಗೋವಿಂದೇಗೌಡ ಹಾಗೂ ಅವರ ಪತ್ನಿ ವರಮಹಾಲಕ್ಷ್ಮೀ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕತಿಮ್ಮೇಗೌಡ ಎಂಬುವವರು ನಾಗಣ್ಣ ಎಂಬುವರ ಜೊತೆ ದ್ವಿಚಕ್ರ ವಾಹನದಲ್ಲಿ ನವೆಂಬರ್ 8ರಂದು ಸುಂಕದಕಟ್ಟೆ, ಗಜಾನನಗರ, 2ನೇ ಮುಖ್ಯರಸ್ತೆಯ ಬಳಿ ಹೋಗುತ್ತಿದ್ದಾಗ, ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದ್ದರು.[ಬೀದರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಬಲಿ]
ಈ ಬಗ್ಗೆ ಚಿಕ್ಕತಿಮ್ಮೇಗೌಡ ಅವರ ಭಾಮೈದ ರಾಜಶೇಖರ್ ಅವರು ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿ ಮಾಜಿ ಕಾರ್ಪೊರೇಟರ್ ಗೊವಿಂದೇಗೌಡ ಅವರ ಮೇಲೆ ಆರೋಪ ಹೊರೆಸಿದ್ದರು."
ಈ ಪ್ರಕರಣದ ಆರೋಪಿಗಳನ್ನು ಪತ್ತೆಮಾಡಲು ಬೆಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರು ಮತ್ತು ಮಾನ್ಯ ಅಪರ ಪೊಲೀಸ್ ಆಯುಕ್ತರು, ಪಶ್ಚಿಮ ರವರ ನಿರ್ದೇಶನದಂತೆ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್,ವಿಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಎಂ.ವೇಣುಗೋಪಾಲರವರ ನೇತೃತ್ವದಲ್ಲಿ ಪಶ್ಚಿಮ ವಿಭಾಗದ ಆರು ಪೊಲೀಸ್ ಇನ್ಸಪೆಕ್ಟರ್ಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡವನ್ನು ನೇಮಕ ಮಾಡಿದ್ದರು.[ರುದ್ರೇಶ್ ಹತ್ಯೆ : ಶೋಭಾ ವಿರುದ್ಧ ಮಾನನಷ್ಟ ಮೊಕದ್ದಮೆ]

ಬಂಧಿತರು:
* ವರಮಹಾಲಕ್ಷ್ಮೀ (47) C/o ಗೋವಿಂದೇಗೌಡ
* ಗೋವಿಂದೇಗೌಡ(58) ಬಿನ್ ಲೇಟ್.ಎಂ.ವಿ.ಬಚ್ಚಣ್ಣ
* ಮಣಿಕಂಠ ಕಚ್ಚಿನ್ಸ್ ಬಿನ್ ಸಿದ್ದರಾಜು
* ಹರೀಶ್.ಬಿ ಬಿನ್ ಬಾಬು.ಎಸ್
* ಮಣಿಕಂಠ ಯೋಗೇಶ್ ಬಿನ್ ಜಯರಾಂ
* ಸುರೇಶ ಆರ್ಎಕ್ಸ್ ಸೂರಿ ಬಿನ್ ತಿಮ್ಮಪ್ಪ,
* ಮ್ಯಾಥೂ.ಎ ಅಜೇಯ ಬಿನ್ ಅಲೆಕ್ಷಾಂಡರ್
* ಸನಾವುಲ್ಲಾ ಸನಾ ಬಿನ್ ಬಷೀರ್ಖಾನ್
* ಯುವರಾಜು ಯುವ ಬಿನ್ ಗಂಗಪ್ಪ,
ಘಟನೆ ಹಿನ್ನಲೆ: ಗೋವಿಂದೆಗೌಡ ಮತ್ತು ವರಮಹಾಲಕ್ಷ್ಮೀರವರು ಜೆ.ಡಿ.ಎಸ್. ಕಾರ್ಯಕರ್ತರಾಗಿದ್ದು, ಮೃತ. ಚಿಕ್ಕತಿಮ್ಮೇಗೌಡನು ಇವರಿಬ್ಬರ ಪರ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದ.2015ರಲ್ಲಿ ನಡೆದ ಬಿ.ಬಿ.ಎಂ.ಪಿ. ಚುನಾವಣೆಯಲ್ಲಿ ಚಿಕ್ಕತಿಮ್ಮೇಗೌಡನು ಬಿ.ಜೆ.ಪಿ.ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದರಿಂದ ಆರೋಪಿ ವರಮಹಾಲಕ್ಷ್ಮೀರವರು ಚುನಾವಣೆಯಲ್ಲಿ ಪರಾಭವಗೊಂಡಿದ್ದರು.
ವರಮಹಾಲಕ್ಷ್ಮೀರವರ ಅಕ್ಕನ ಮಗ (ಸಾಕುಮಗ) ಸುರೇಶಕುಮಾರನು ಇವರಿಗೆ ಹಣಕಾಸಿನ ವ್ಯವಹಾರದಲ್ಲಿ ಸುಮಾರು ಕೋಟಿಯಷ್ಟು ಮೋಸಮಾಡಿ, ತಮ್ಮ ವಿರೋಧಿ ಚಿಕ್ಕತಿಮ್ಮೇಗೌಡನ ಜೊತೆ ಸೇರಿಕೊಂಡಿದ್ದರಿಂದ ಇವರಿಬ್ಬರು ಒಂದಾದರೆ ಮುಂದೆ ನಮ್ಮನ್ನು ರಾಜಕೀಯವಾಗಿ ಮತ್ತು ವೈಯಕ್ತಿಕವಾಗಿ ಮುಗಿಸಿಬಿಡುತ್ತಾರೆ ಎಂಬ ಜಿದ್ದಿನಿಂದ ಸುರೇಶ ಅಲಿಯಾಸ್ ಆರ್.ಎಕ್ಸ್ ಸೂರಿ ಹಾಗೂ ಇತರೆ ಆರೋಪಿಗಳಿಗೆ 30 ಲಕ್ಷ ರೂಪಾಯಿ ಸುಪಾರಿ ನೀಡಿ, ಕೊಲೆಗೆ ಮೊದಲು 5 ಲಕ್ಷ ಅಡ್ವಾನ್ಸ್ ನೀಡಿ ಕೊಲೆಯಾದ ನಂತರ 10 ಲಕ್ಷ ರೂಪಾಯಿಗಳನ್ನು ಕೊಟ್ಟಿರುವುದಾಗಿ ತಿಳಿದುಬಂದಿರುತ್ತದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ












Click it and Unblock the Notifications