ರಾಜ್ಯ ಮತ್ತು ಕೇಂದ್ರ ಎರಡಲ್ಲೂ ಬಿಜೆಪಿ ಸರ್ಕಾರವಿದ್ದರೂ ಬೀದಿ ಪಾಲಾದ ಕನ್ನಡ ಜನ
ಬೆಂಗಳೂರು, ಸೆ. 18: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಲಕ್ಷಾಂತರ ಜನರು ತತ್ತರಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಎರಡಲ್ಲೂ ಬಿಜೆಪಿ ಸರ್ಕಾರವಿದ್ದರೂ ಕನ್ನಡ ಜನ ಬೀದಿ ಪಾಲಾಗಿದ್ದಾರೆ. ಕೇಂದ್ರದಿಂದ ಪರಿಹಾರ ಧನ ತರುವಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರು ತಮ್ಮ ಜೀವನ ಕಳೆದುಕೊಂಡು ಬೀದಿಪಾಲಾಗಿ ಒಂದು ತಿಂಗಳೇ ಕಳೆದು ಹೋಗಿದೆ. ಕಳೆದ ವಾರ ಪ್ರವಾಹಕ್ಕೆ ಸಿಲುಕಿ ನೆಲೆ ಕಳೆದುಕೊಂಡಿದ್ದ ಕುಟುಂಬದ ಪುಟ್ಟಮಗುವೊಂದು ತಿನ್ನಲು ಆಹಾರವಿಲ್ಲದೆ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಅಲ್ಲದೆ ಕಳೆದ ಭಾನುವಾರ ಬೆಳಗಾವಿಯ ನೇಕಾರರೊಬ್ಬರು ಪ್ರವಾಹದಲ್ಲಿ ಮನೆಯನ್ನೂ ಕಳೆದುಕೊಂಡು, ಮಗ್ಗವೂ ಹಾಳಾಗಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನರು ಇಂದಿಗೂ ಬಯಲಿನಲ್ಲೇ ಸ್ನಾನ ಮಾಡಿ, ಬೀದಿಗಳಲ್ಲೇ ಬದುಕು ನಡೆಸುವಂತಹ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲೂ ಬಿಜೆಪಿಗೆ ಅಧಿಕಾರದ ನೀಡಿದ ಜನರಿಗೆ ಸಿಕ್ಕಿದ್ದೇನು?
ಕರ್ನಾಟಕದಲ್ಲಿ ಪದೇ ಪದೇ ಪ್ರವಾಹ ಸಂಭವಿಸುತ್ತಿದ್ದರೂ ಯಾವುದೇ ಮುನ್ನೆಚ್ಚರಿಕೆ ಕ್ರಮವಿರಲಿ ಪ್ರವಾಹದಿಂದ ಬದುಕು ಕೆಳೆದುಕೊಂಡ ಜನರ ಜೀವನವನ್ನು ಮರಳಿ ಕಟ್ಟಿಕೊಡುವುದರಲ್ಲಿ ಕೂಡ ಸರ್ಕಾರ ವಿಫಲವಾಗಿದೆ. ಈ ಬಾರಿಯ ಪ್ರವಾಹದಿಂದ 12 ಜಿಲ್ಲೆಗಳ 88 ತಾಲ್ಲೂಕುಗಳಲ್ಲಿ 40 ಸಾವಿರ ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಆದರೆ ಯಡಿಯೂರಪ್ಪನವರು ಕೇಂದ್ರ ಸರ್ಕಾರದಿಂದ ಕೇವಲ 3,800 ಕೋಟಿಯನ್ನಷ್ಟೇ ಪರಿಹಾರಕ್ಕೆ ಕೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications