ನ.29 ಬಿಜೆಪಿ ಶಾಸಕಾಂಗ ಸಭೆ, ಅಧಿವೇಶನದೊಳಗೆ ಹೋರಾಟದ ಬಗ್ಗೆ ಚರ್ಚೆ
ಬೆಂಗಳೂರು, ನವೆಂಬರ್ 24: ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿಯು ಸರ್ಕಾರದ ವಿರುದ್ಧ ಹೋರಾಟದ ನೀಲನಕ್ಷೆ ತಯಾರಿಸಲು ಪಕ್ಷದ ಶಾಸಕಾಂಗ ಸಭೆ ಕರೆದಿದೆ.
ಬಿಜೆಪಿಯ ಎಲ್ಲ ಶಾಸಕರು ನವೆಂಬರ್ 29 ರಂದು ನಗರದಲ್ಲಿ ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಭಾಗವಹಿಸಬೇಕೆಂದು ಆದೇಶ ನೀಡಲಾಗಿದೆ. ಸಭೆಯು ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ.
ಬೆಳಗಾವಿ ಅಧಿವೇಶನವು ಡಿಸೆಂಬರ್ 10 ರಿಂದ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ವಿರೋಧ ಪಕ್ಷವಾದ ಬಿಜೆಪಿಯ ಹೋರಾಟ ಹೇಗೆ ಇರಬೇಕು ಎಂಬುದರ ಬಗ್ಗೆ ಅಂದು ನಿರ್ಧಾರ ಮಾಡಲಾಗುತ್ತದೆ.

ಪಕ್ಷದ ಹಿರಿಯ ಶಾಸಕರಿಗೆ ಅಧಿವೇಶನದ ಸಂದರ್ಭ ನಿಭಾಯಿಸಬೇಕಾದ, ಎತ್ತಬೇಕಾದ ಚರ್ಚೆಗಳ ಜವಾಬ್ದಾರಿಯನ್ನು ಸಭೆಯಲ್ಲಿಯೇ ವಹಿಸಲಾಗುವುದು ಎನ್ನಲಾಗಿದೆ. ಅಲ್ಲದೆ, ಅಧಿವೇಶನದಲ್ಲಿ ಯಾವ ಯಾವ ವಿಷಯಗಳ ಬಗ್ಗೆ ವಿರೋಧ ಪಕ್ಷವು ದನಿ ಎತ್ತಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ.
ಎಲ್ಲ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಪಟ್ಟಿಯನ್ನೂ ಶಾಸಕಾಂಗ ಸಭೆಗೆ ತರಬೇಕು ಎಂದು ಸೂಚಿಸಲಾಗಿದ್ದು, ಅದರ ಕುರಿತೂ ಅಧಿವೇಶನದಲ್ಲಿ ಚರ್ಚಿಸುವ ಬಗ್ಗೆ ಪೂರ್ವ ತಯಾರಿ ನಡೆಸಲಾಗುತ್ತಿದೆ.
ಬಿಜೆಪಿಯ ಮುಂದಿನ ನಡೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ ಲೋಕಸಭೆ ಚುನಾವಣೆ ತಯಾರಿ ಬಗ್ಗೆಯೂ ಸಂಕ್ಷಿಪ್ತ ಚರ್ಚೆ ನಡೆಯಲಿದೆ. ಸಭೆಯು ನವೆಂಬರ್ 29 ರಂದು ಮಧ್ಯಾಹ್ನ 2 ಕ್ಕೆ ಆರಂಭವಾಗುತ್ತಿದ್ದು, ದೀರ್ಘವಾಗಿ ಸಭೆ ನಡೆಯಲಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications