ಸಿದ್ದರಾಮಯ್ಯರಂತೆ ಮುಖ ಗಂಟಿಕ್ಕಿಕೊಳ್ಳಲು ನನಗೆ ಬರಲ್ಲ: ಸದಾನಂದಗೌಡ
Recommended Video

ಬೆಂಗಳೂರು, ಏಪ್ರಿಲ್ 13:: ನಾನೂ ನಗಬೇಕು. ನನ್ನ ಕ್ಷೇತ್ರದ ಜನರೂ ಸಂತಸದಿಂದ ನಗಬೇಕು ಎಂಬುದು ನನ್ನ ಅಭಿಲಾಷೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನನಗೆ ಗಂಟು ಮುಖ ಹಾಕಿಕೊಳ್ಳಲು ಬರುವುದಿಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಟಾಂಗ್ ನೀಡಿದರು.
ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ಕುರುಬರಹಳ್ಳಿ ಸರ್ಕಲ್ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ನಾನು ಯಾವಾಗಲೂ ನಗುತ್ತಿರುತ್ತೇನೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ನಗು ಆರೋಗ್ಯಕ್ಕೆ ಒಳ್ಳೆಯದು. ಸಿದ್ದರಾಮಯ್ಯ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಎಂದು ಕಾಂಗ್ರೆಸಿಗರು ಪ್ರಶ್ನಿಸುತ್ತಿದ್ದಾರೆ. ಎಲ್ಲೆಡೆ ಅಪಪ್ರಚಾರ ಮಾಡಿಕೊಂಡು ಬರುತ್ತಿದ್ದಾರೆ. ರಕ್ಷಣಾ ಇಲಾಖೆಗೆ ಸೇರಿದ ರಾಜ್ಯದ ಕೆಲ ಭೂಮಿಗಳ ವಿವಾದ ಹಲವು ವರ್ಷಗಳಿಂದ ಇತ್ಯರ್ಥವಾಗಿರಲಿಲ್ಲ. ನಾನು ಕೇಂದ್ರ ಸಚಿವನಾದ ನಂತರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನೇ ಬೆಂಗಳೂರಿಗೆ ಕರೆಸಿ 28 ಪ್ರಕರಣದಲ್ಲಿ 21 ಸಮಸ್ಯೆ ಪರಿಹರಿಸಿಕೊಟ್ಟಿದ್ದೇನೆ ಎಂದು ಹೇಳಿದರು.
ಇದರಿಂದಾಗಿ ಬಿಬಿಎಂಪಿ, ಬಿಡಿಎ ಸೇರಿದಂತೆ ಹಲವು ಯೋಜನೆಗಳಿಗೆ ವೇಗ ಸಿಕ್ಕಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಾಯಕವಾಗಿದೆ. ನಾನು ಪ್ರಚಾರಕ್ಕೆ ಹಾತೊರೆಯುವುದಿಲ್ಲ. ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ. ನಯಾಪೈಸೆ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
ಯಾವುದೋ ವ್ಯಕ್ತಿ ಅಥವಾ ಪಕ್ಷವನ್ನು ಅಧಿಕಾರಕ್ಕೆ ತರಲು ನಡೆಯುವ ಚುನಾವಣೆ ಇದಲ್ಲ. ಸಮರ್ಥ ನಾಯಕ, ಸ್ಥಿರ ಸರಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ನರೇಂದ್ರ ಮೋದಿಯವರನ್ನು ಪುನಃ ಪ್ರಧಾನಿ ಮಾಡಬೇಕು. ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭವೃದ್ಧಿ ಕಾರ್ಯಗಳನ್ನು ಗಮನಿಸಿ ಪುನರಾಯ್ಕೆ ಮಾಡಬೇಕು. ನಿಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುತ್ತೇನೆ ಎಂದು ಮನವಿ ಮಾಡಿದರು.
ಮುಖಂಡರಾದ ನರೇಂದ್ರ ಬಾಬು, ಹರೀಶ್, ನಾಗರಾಜ್, ರಾಜೇಂದ್ರಕುಮಾರ್, ಪ್ರಸನ್ನ, ಗಂಗಹನುಮಯ್ಯ, ಶಿವಾನಂದ್, ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications