BJP Candidates 3rd List: ಬೆಂಗಳೂರಿನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ, ಇಲ್ಲಿದೆ ವಿವರ
ಬೆಂಗಳೂರು, ಏಪ್ರಿಲ್, 17: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ ಇದೀಗ ಸೋಮವಾರ (ಏಪ್ರಿಲ್ 17) ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬೆಂಗಳೂರಿನ ಹೆಬ್ಬಾಳ, ಗೋವಿಂದರಾಜನಗರ, ಮಹಾದೇವಪುರ ಈ ಮೂರು ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಆಗಿದೆ.
ಒಟ್ಟಾರೆಯಾಗಿ 3ನೇ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಇನ್ನು ಎರಡು ಕ್ಷೇತ್ರಗಳಿಗೆ ಮಾತ್ರ ಬಾಕಿ ಉಳಿಸಿಕೊಂಡಿದೆ. ಬೆಂಗಳೂರಿನ ಹೆಬ್ಬಾಳದಿಂದ ಕಟ್ಟಸುಬ್ರಹ್ಮಣ್ಯ ಬದಲು ಕಟ್ಟ ಜಗದೀಶ್, ಗೋವಿಂದರಾಜನಗರ ಉಮೇಶ್ ಶೆಟ್ಟಿ, ಮಹಾದೇವಪುರ ಕ್ಷೇತ್ರದಿಂದ ಮಂಜುಳಾ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್ ಘೋಷಿಸಿದೆ.

ಈ ಪಟ್ಟಿಯಲ್ಲಿಯೂ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರಿನ ಮಹದೇವಪುರ ಟಿಕೆಟ್ ಘೋಷಣೆ ಆಗಿದೆ. ಈ ಕ್ಷೇತ್ರದಲ್ಲಿ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಗೆ ಟಿಕೆಟ್ ಕೈತಪ್ಪಿದೆ. ಆದರೆ, ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್ ನೀಡಿ ಬಿಜೆಪಿ ಅಚ್ಚರಿ ಮೂಡಿಸಿದೆ.
ಅವರವಿಂದ ಲಿಂಬಾವಳಿ ರಾಜಕೀಯದ ಹಾದಿ
ಅರವಿಂದ ಲಿಂಬಾವಳಿ ಅವರು ಬಿಜೆಪಿ ಸರ್ಕಾರದಲ್ಲಿ 4 ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2008 ರಿಂದ ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನವನ್ನು ನಿಭಾಯಿಸಿಕೊಂಡು ಬಂದಿದ್ದಾರೆ. 2013ರ ಚುನಾವಣೆಯಲ್ಲಿ ಮಹದೇವಪುರ (174) ಕ್ಷೇತ್ರದಿಂದ 11,0244 ಮತಗಳಳನ್ನು ಪಡೆಯುವ ಮೂಲಕ ಗೆಲುವು ಸಾಧಸಿದರು. ಆಗ ಎ.ಸಿ. ಕಾಂಗ್ರೆಸ್ನ ಶ್ರೀನಿವಾಸ್ ಅವರನ್ನು 6149 ಮತಗಳಿಂದ ಸೋಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಆದರು.
ಇನ್ನು 2018ರ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಿಂದ ಮರು ಆಯ್ಕೆಯಾದರು. ಇದೀಗ ಈ ಬಾರಿ ಲಿಂಬಾವಳಿ ಬದಲಿಗೆ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿ ಅವರನ್ನು ಕಣಕ್ಕಿಳಿಸಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications