'ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಕಾಂಗ್ರೆಸ್ಗೆ ಅನ್ವಯಿಸದು' ಬಿಜೆಪಿ ಟೀಕೆ
ಬೆಂಗಳೂರು ಮೇ 21: ಒಂದು ಕುಟುಂಬಕ್ಕೆ ಒಬ್ಬರಿಗೆ ಟಿಕೆಟ್ ಎಂಬುದು ಕಾಂಗ್ರೆಸ್ ಪಕ್ಷಕ್ಕೆ ಅನ್ವಯವಾಗುವುದಿಲ್ಲ. ಏಕೆಂದರೆ ಅಲ್ಲಿರುವುದು ಕುಟುಂಬ ರಾಜಕಾರಣ ಎಂದು ಬಿಜೆಪಿ #ನಕಲಿಗಾಂಧಿಕುಟುಂಬಪುನಶ್ಚೇತನಾಶಿಬಿರ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಸರಣಿ 'ಕೂ' ಮಾಡಿದೆ.
ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ನಾಯಕರು ಯಾರು? ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50ರ ನಂತರವೇ? ಎಂದು ಕೆಣಕಿದೆ.
ಒಂದು ಮನೆಯಿಂದ ಒಬ್ಬರಿಗೆ ಟಿಕೆಟ್ ಎಂಬುದು ಕಾಂಗ್ರೆಸ್ ಪಕ್ಷದ ಹೊಸ ನಾಟಕ. ನಕಲಿ ಗಾಂಧಿ ಕುಟುಂಬಿಕರಿಗೆ ಮತ್ತು ಅವರ ಪಾದ ಪೂಜಕರಿಗೆ ಅನ್ವಯವಾಗುವುದಿಲ್ಲ ಎಂಬ ಷರತ್ತು ಅಳವಡಿಸಿರುವುದು ಅವರ ಬೂಟಾಟಿಕೆಗೆ ಸಾಕ್ಷಿ. 70 ಮೇಲ್ಪಟ್ಟವರಿಗೆ ಟಿಕೆಟ್ ನೀಡದ ಹೊಸ ನಿಯಮವೂ ಇವರಾರಿಗೂ ಅನ್ವಯವಾಗದು! ಎಂದು ಬಿಜೆಪಿ ಟೀಕಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+ ಚಿಂತನಾ ಶಿಬಿರದಲ್ಲಿ 50% ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ. ಈ ನಿಯಮವನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದಲ್ಲಿ ಕಾಂಗ್ರೆಸ್ 60+ ನಿಂದ 30+ ಗೆ ಕ್ಕೆ ಇಳಿಯುವುದು ನಿಶ್ಚಿತ! ಎಂದಿದೆ.
Koo Appರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+ ಚಿಂತನಾ ಶಿಬಿರದಲ್ಲಿ 50% ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ. ಈ ನಿಯಮವನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದಲ್ಲಿ ಕಾಂಗ್ರೆಸ್ 60+ ನಿಂದ 30+ ಗೆ ಕ್ಕೆ ಇಳಿಯುವುದು ನಿಶ್ಚಿತ! #ನಕಲಿಗಾಂಧಿಕುಟುಂಬಪುನಶ್ಚೇತನಾಶಿಬಿರ - BJP KARNATAKA (@BJP4Karnataka) 21 May 2022
ಕಾಂಗ್ರೆಸ್ ಚಿಂತನಾ ಶಿಬಿರದಲ್ಲೇನೋ ವಯೋನಿವೃತ್ತಿಯ ಪ್ರಸ್ತಾಪವಾಗಿದೆ. ಆದರೆ ಯಾವಾಗ? 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ "ಯಯಾತಿ"ಗಳ ಮೋಹ ಕಳಚುವುದೇ? ಎಂದು #ನಕಲಿಗಾಂಧಿಕುಟುಂಬಪುನಶ್ಚೇತನಾಶಿಬಿರ ಎಂಬ ಹ್ಯಾಶ್ ಟ್ಯಾಗ್ ಮೂಲಕ ಬಿಜೆಪಿ ವಾಗ್ದಾಳಿ ಮಾಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications