ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು
ಬೆಂಗಳೂರು, ಏಪ್ರಿಲ್ 9: ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗೋಪ್ಯತಾ ಪ್ರಮಾಣ ಹಾಗೂ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹಾಗೂ ಬಿಜೆಪಿಯ ಇತರ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಗತ್ಯ ಕ್ರಮ ಜರುಗಿಸುವಂತೆ ಮನವಿ ಕೂಡ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಿಜೆಪಿ ಪರವಾಗಿ ನಿಯೋಗವೊಂದು ರಾಜ್ಯಪಾಲರನ್ನು ಭೇಟಿ ಮಾಡಿ, ಈ ಎರಡು ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡವಳಿಕೆಯು ಪ್ರಶ್ನಾರ್ಹವಾದುದ್ದು. ಆದ್ದರಿಂದ ಸ್ವತಃ ರಾಜ್ಯಪಾಲರು ಮಧ್ಯಪ್ರವೇಶಿಸಿ, ಕಾನೂನು ಪರಿಧಿಯಲ್ಲಿ ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ಪರಿಶೀಲಿಸಬೇಕು ಎಂದು ಮನವಿ ಮಾಡಲಾಗಿದೆ.
ಮೊದಲನೆಯದಾಗಿ ಕರ್ನಾಟಕದಲ್ಲಿ ಆದಾಯ ತೆರಿಗೆ ದಾಳಿ ಆಗುವ ಒಂದು ದಿನ ಮೊದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಆ ವಿಚಾರವನ್ನು ಬಹಿರಂಗ ಪಡಿಸಿದರು. ಗುತ್ತಿಗೆದಾರರ ಬಳಿ ದೊಡ್ಡ ಮೊತ್ತದ ನಗದು ಹಾಗೂ ದಾಖಲೆಗಳು ಇದ್ದವು ಎಂದು ಸಾರ್ವಜನಿಕವಾಗಿಯೇ ಬಹಿರಂಗವಾಗಿದೆ ಎಂದು ತಿಳಿಸಿದ್ದಾರೆ.

* ಸಿಎಂ ಕುಮಾರಸ್ವಾಮಿ ಅವರಿಗೆ ಆದಾಯ ತೆರಿಗೆ ದಾಳಿ ಬಗ್ಗೆ ಮಾಹಿತಿ ಸಿಕ್ಕಿದ್ದು ಹೇಗೆ? ಮತ್ತು ಅವರ ಸಾಂವಿಧಾನಿಕ ಜವಾಬ್ದಾರಿಯಾದ ರಹಸ್ಯವನ್ನು ಕಾಪಾಡಬೇಕಾದ ನಿಯಮ ಮುರಿದು, ಹಣ ಸಂಗ್ರಹಿಸಿ, ತಮ್ಮ ಬಳಿ ಇರಿಸಿಕೊಂಡಿದ್ದವರಿಗೆ ಮಾಹಿತಿ ನೀಡಿದ್ದು ಏಕೆ?
* ಸಂಪುಟ ಸಹೋದ್ಯೋಗಿಗಳ ಜತೆ ಕೂಡಿ, ಆದಾಯ ತೆರಿಗೆ ಇಲಾಖೆ ಕಚೇರಿ ಹೊರಗೆ ಹೋಗಿ, ಐಟಿ ಅಧಿಕಾರಿಗಳಿಗೆ ಭಯ ಹುಟ್ಟಿಸಲು ಯತ್ನಿಸಿದ್ದಾರೆ. ಸಾಂವಿಧಾನಿಕವಾಗಿ ಪ್ರಮಾಣ ಸ್ವೀಕರಿಸಿದ ಮುಖ್ಯಮಂತ್ರಿ ನ್ಯಾಯ ಮೀರಿದ ಉದಾಹರಣೆ ಇದು ಆಗುವುದಿಲ್ಲವೆ?
* ಚುನಾವಣೆಗೆ ಮುನ್ನ ಸರ್ಜಿಕಲ್ ಸ್ಟ್ರೈಕ್, ದಾಳಿಗಳು ಆಗುತ್ತವೆ ಎಂದು ಸೇನಾಧಿಕಾರಿಯೊಬ್ಬರು ಕುಮಾರಸ್ವಾಮಿಗೆ ಎರಡು ವರ್ಷದ ಹಿಂದೆ ಹೇಳಿದ್ದರಂತೆ. ಇದು ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ ಆಗುತ್ತದೆ.

* ಒಂದು ವೇಳೆ ಕುಮಾರಸ್ವಾಮಿ ಅವರಿಗೆ ಹೇಳಿದ್ದೇ ನಿಜವಾದ ಆ ಸೇನಾಧಿಕಾರಿಯಿಂದ ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ ಆಗುತ್ತದೆ. ಆದ್ದರಿಂದ ಅದು ನಿಜವಾಗಿದ್ದಲ್ಲಿ ಕುಮಾರಸ್ವಾಮಿ ಅವರು ಆ ಸೇನಾಧಿಕಾರಿ ಹೆಸರನ್ನು ಬಹಿರಂಗ ಪಡಿಸಬೇಕು. ಅಥವಾ ಅದು ಸುಳ್ಳು ಅನ್ನೋದನ್ನು ಖಾತ್ರಿ ಪಡಿಸಬೇಕು.
* ಇದನ್ನು ಸೇನಾಧಿಕಾರಿ ಹೇಳಿದ್ದರೆ ಆತ ವಿಚಾರಣೆ ಎದುರಿಸಬೇಕಾಗುತ್ತದೆ. ಇನ್ನು ಜವಾಬ್ದಾರಿ ಇರುವ ಮುಖ್ಯಮಂತ್ರಿ ಆಗಿ, ಈ ವಿಚಾರವನ್ನು ಭಾರತದ ರಾಷ್ಟ್ರಪತಿ ಜತೆಗೆ ಹಂಚಿಕೊಳ್ಳಬೇಕಾಗುತ್ತದೆ. ಈ ಎರಡೂ ಸನ್ನಿವೇಶದಲ್ಲೂ ಮುಖ್ಯಮಂತ್ರಿಗಳು ತಮ್ಮನ್ನು ಕಾನೂನಿಗೂ ಮೇಲ್ಪಟ್ಟವರಾಗಿ ಭಾವಿಸಿದಂತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಾಜ್ಯಪಾಲರಿಗೆ ಮನವಿ ಸಲ್ಲಿಸುವ ವೇಳೆ ಶಾಸಕ ಸಿ.ಎನ್.ಅಶ್ವಥ್ ನಾರಾಯಣ್, ಎ.ಎಚ್.ಆನಂದ್, ವಿನೋದ್ ಮತ್ತಿತರರು ಹಾಜರಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications