ನಕಲಿ ವೋಟರ್ ಐಡಿ ಪತ್ತೆ: ಆರ್.ಆರ್. ನಗರ ಚುನಾವಣೆ ಮುಂದೂಡಿಕೆಗೆ ಬಿಜೆಪಿ ಆಗ್ರಹ
Recommended Video

ಬೆಂಗಳೂರು, ಮೇ 9: ಕಾಂಗ್ರೆಸ್ ಶಾಸಕ ಮುನಿರತ್ನ ನಾಯ್ಡು ಪ್ರತಿನಿಧಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಮಂಗಳವಾರ ರಾತ್ರಿ 9,746 ನಕಲಿ ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮತ್ತು ಕರ್ನಾಟಕ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್, "ಕಾಂಗ್ರೆಸ್ ಜನ ಬೆಂಬಲವನ್ನು ಕಳೆದುಕೊಂಡಿದೆ. ಕರ್ನಾಟಕದಲ್ಲಿ ಮುಂದಿನ ಚುನಾವಣೆ ಗೆಲ್ಲಲು ಕಾಂಗ್ರೆಸ್ ಪ್ರಜಾತಂತ್ರ ವಿರೋಧಿ ತಂತ್ರಗಳಿಗೆ ಮೊರೆ ಹೋಗಿದೆ. ಹೀಗಾಗಿ ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ಮುಂದೂಡಿಕೆ ಮಾಡುವಂತೆ ನಾವು ಒತ್ತಾಯಿಸುತ್ತಿದ್ದೇವೆ," ಎಂದಿದ್ದಾರೆ.
BJP demands countermanding of elections in AC 154 Raj Rajeshwari Nagar in light of latest revelations of tens of thousands of fake voter ID and empty packets of hard currency. This is Congress conspiracy to rig election , in face of their imminent defeat.
— Prakash Javadekar (@PrakashJavdekar) May 8, 2018
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಬಾದಾಮಿ ಕ್ಷೇತ್ರದಲ್ಲಿ ಭಾರೀ ಹಣ ವಶಕ್ಕೆ ಪಡೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಹೀಗಾಗಿ ಚುನಾವಣಾ ಆಯೋಗ ಇಲ್ಲಿಗೆ ವಿಶೇಷ ಚುನಾವಣಾ ಅಧಿಕಾರಿಯನ್ನು ನೇಮಿಸಬೇಕು ಎಂದವರು ಆಗ್ರಹಿಸಿದ್ದಾರೆ. ಜೊತೆಗೆ ಹೆಚ್ಚಿನ ಪ್ಯಾರಾ ಮಿಲಿಟರಿ ಪಡೆಗಳನ್ನೂ ಬಾದಾಮಿಗೆ ಕರೆಸಿಕೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ರಾಜರಾಜೇಶ್ವರಿ ನಗರ ವ್ಯಾಪ್ತಿಯ ಜಾಲಹಳ್ಳಿಯ ಶಾರದಾಂಬ ನಗರದ ಎಸ್.ಎಲ್.ವಿ ಪಾರ್ಕ್ ವ್ಯೂ ಅಪಾರ್ಟ್ ಮೆಂಟ್ ನಲ್ಲಿ ರಾಕೇಶ್ ಎಂಬವರು ಬಾಡಿಗೆದಾರರಾಗಿರುವ ಫ್ಲ್ಯಾಟ್ ಮೇಲೆ ಮಂಗಳವಾರ ದಾಳಿ ನಡೆಸಲಾಗಿತ್ತು. ಈ ವೇಳೆ ಇಲ್ಲಿ 9,746 ಅಕ್ರಮ ಗುರುತಿನ ಚೀಟಿಗಳು ಸಿಕ್ಕಿದ್ದವು.
ಈ ಸಂಬಂಧ ಮಂಗಳವಾರ ರಾತ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿರುವ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್, ತನಿಖೆಗೆ ಆದೇಶ ನೀಡಿದ್ದಾರೆ. ಮತ್ತು, "ಪ್ರಕರಣ ಗಂಭೀರತೆಯಿಂದ ಕೂಡಿದ್ದು, ಚುನಾವಣಾ ಮುಂದೂಡಿಕೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿದೆ," ಎಂದಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications