ಕದಿರೇಶ್ ಹತ್ಯೆ: ಜಮೀರ್ ಅಹಮದ್ ಪಾತ್ರದ ಬಗ್ಗೆ ತನಿಖೆಗೆ ಒತ್ತಾಯ
ಬೆಂಗಳೂರು, ಫೆಬ್ರವರಿ 13: ಬಿಬಿಎಂಪಿ ಸದಸ್ಯೆ ರೇಖಾ ಅವರ ಪತಿ ಕದಿರೇಶ್ ಹತ್ಯೆಯ ಹಿಂದೆ ಶಾಸಕ ಜಮೀರ್ ಅಹ್ಮದ್ ಕೈವಾಡದ ಶಂಕೆ ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಜೆಸಿ ನಗರದ ಗೂಡ್ಸ್ ಶೆಡ್ ರೋಡ್ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್ ಅವರು, ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆಯ ಹಿಂದೆ ಸಚಿವ ರೋಷನ್ ಬೇಗ್ ಹೆಸರು ಕೇಳಿಬಂದಿದೆ. ಅದೇ ರೀತಿ ಡಿವೈಎಸ್ ಪಿ ಗಣಪತಿ ಹತ್ಯೆಯ ಹಿಂದೆ ಸಚಿವ ಕೆ.ಜೆ. ಜಾರ್ಜ್ ಪಾತ್ರದ ಬಗ್ಗೆ ಮಾಹಿತಿ ಈಗಾಗಲೇ ಸಿಬಿಐ ಅವರನ್ನು ಮೊದಲ ಆರೋಪಿಯನ್ನಾಗಿ ಪರಿಗಣಿಸಿದೆ. ಆದರೆ ರಾಜ್ಯದಲ್ಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಈ ಯಾವುದೇ ವಿಷಯಗಳನ್ನು ಪ್ರಸ್ತಾಮ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಸಂತೋಷ್ ಹತ್ಯೆಯಾದಾಗ ಇದು ಹತ್ಯೆಯಲ್ಲ ಸ್ಕ್ರೂ ಡ್ರೈವರ್ ನಿಂದ ಚುಚ್ಚಿದ್ದಾರೆ ಎಷ್ಟೇ ಎಂದು ಹಗುರವಾಗಿ ಮಾತನಾಡಿದ್ದರು. ಈಗ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎಂದರು.

ನಿರ್ಧಿಷ್ಟ ಸಂಘಟನೆಯ ಕಾರ್ಯಕರ್ತರನ್ನೇ ಗುರಿಯಾಗಿಟ್ಟುಕೊಂಡು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಕದಿರೇಶ್ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಅವರ ರಾಜಕೀಯ ಏಳಿಗೆ ಸಹಿಸದ ಕೆಲವರು ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಸಂಸದ ಪಿಸಿ ಮೋಹನ್, ನಗರ ಬಿಜೆಪಿ ಅಧ್ಯಕ್ಷರಾದ ಪಿ.ಎನ್. ಸದಾಶಿವ, ರಾಜ್ಯ ಬಿಜೆಪಿ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ, ಬಿಬಿಎಂಪಿ ಮಾಜಿ ಸದಸ್ಯರಾದ ಬಿ.ವಿ. ಗಣೇಶ್ ಭಾಗವಹಿಸಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications