ಹಸುವಿನ ಕೆಚ್ಚಲು ಕೊಯ್ದ ವ್ಯಕ್ತಿ ಬಂಧನ: ಆರೋಪಿ, ತನಿಖೆ ಬಗ್ಗೆ ಬಿಜೆಪಿ ಅನುಮಾನ: ರಾಜ್ಯದಾದ್ಯಂತ ಪ್ರತಿಭಟನೆ
ಬೆಂಗಳೂರು, ಜನವರಿ 14: ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರಿ ಮೂಲದ ಒಬ್ಬನನ್ನು ಬಂಧಿಸಿದ್ದಾರೆ. ಆದರೆ ಈ ಆರೋಪಿ ಮತ್ತು ಬಂಧನ ಕುರಿತು ಕೆಲವು ಅನುಮಾನ ವ್ಯಕ್ತಪಡಿಸಿರುವ ಬಿಜೆಪಿ ಒಂದಷ್ಟು ವಿವರಣೆ ನೀಡಿದೆ. ಸರ್ಕಾರದ ಮುಂದೆ ಕೆಲವು ಪ್ರಶ್ನೆ ಇಟ್ಟಿದೆ. ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆಗೆ ಸಜ್ಜಾಗಿದೆ.
ಮಂಗಳವಾರ ನಗರದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿ, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು.

ಸದ್ಯ ರಾಜ್ಯದಲ್ಲಿ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ಅವರು ದೂರಿದ್ದಾರೆ.
ರಾಜ್ಯ ಬಿಜೆಪಿ ತಿಯಿಂದ 1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂದು ಕಡೆ ಅವರ ಕಡೆಯವರೇ ನೀಡುವ ಹಸುವನ್ನು ಕತ್ತರಿಸುತ್ತಾರೆ. ನನಗೀಗ ಪೊಲೀಸರು ಹಾಗೂ ಸರ್ಕಾರದ ಮೇಲೆಯೇ ಅನುಮಾನ ಉಂಟಾಗಿದೆ ಎಂದು ಹೇಳಿದರು.
ಬಂಧಿತ ವ್ಯಕ್ತಿ ಬಗ್ಗೆ ಇರುವ ಅನುಮಾನ ಏನು?
ಆರೋಪಿ ಜೇಬಿನಲ್ಲಿ ಬ್ಲೇಡ್ ಇಟ್ಟುಕೊಂಡು ಓಡಾಡುತ್ತಿದ್ದ, ಆತನಿಗೆ ಮತಿಭ್ರಮಣೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂತಹ ವ್ಯಕ್ತಿ 10 ವರ್ಷ ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ? ಮುಂಜಾನೆ 3-4 ಗಂಟೆಗೆ ಆತ ಇಲ್ಲಿಗೆ ಬರಲು ಹೇಗೆ ಸಾಧ್ಯ? ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ಣ ಅವರ ಹಸುವಿನ ಕೆಚ್ಚಲನ್ನೇ ಕೊಯ್ದಿದ್ದೇಕೆ? ಎಂದು ಪ್ರಶ್ನೆ ಮಾಡಿದರು.

ಇಲ್ಲಿ ಪಶು ಆಸ್ಪತ್ರೆ ಬಹಳ ಕಡಿಮೆ ಸಂಖ್ಯೆಯಲ್ಲಿದೆ. ಅದರ ಜಾಗ ಲೂಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾತೆ ತಿದ್ದುಪಡಿ ಮಾಡಿ ವಕ್ಫ್ ಮಂಡಳಿಗೆ ನೀಡಿದ್ದಾರೆ. ಹಸು ಮಾಲೀಕ ಕರ್ಣನ ಮೇಲೆ ದಾಳಿ ಮಾಡಲು ಸಾಧ್ಯವಾಗಿಲ್ಲ. ಆದರೆ ಹಸುವಿನ ಮೇಲೆ ದಾಳಿ ಮಾಡಿ ಕರ್ಣನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯನವರ ಬಾಯಲ್ಲಿ ಯಾವುದೇ ವಿರೋಧದ ಮಾತು ಬಂದಿಲ್ಲ ಎಂದು ಗುಡುಗಿದರು.
ಗೋಮಾತೆ ಮೇಲಿನ ದಾಳಿ ಖಂಡನೀಯ, ಪ್ರತಿಭಟನೆ
ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಅವರೇ ಮುಂದೆ ಬಂದು ಮಾತಾಡುತ್ತಿದ್ದರು. ಆದರೆ ಈ ಮತಬ್ಯಾಂಕ್ ರಾಜಕಾರಣಕ್ಕೆ ನಾವ್ಯಾರೂ ಹೆದರುವುದಿಲ್ಲ. ಇದು ಧರ್ಮಯುದ್ಧವಾಗಿದ್ದು, ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಗೋವುಗಳ ಹತ್ಯೆ, ಹಿಂದೂಗಳ ಮೇಲಿನ ದಾಳಿ ಖಂಡಿಸಿ ಹೋರಾಡುತ್ತೇವೆ ಎಂದರು.
ಈ ಪ್ರಕರಣ ತನಿಖೆ ಯಾಕಾಗಿಲ್ಲ?
ಬೆಳಗಾವಿ ಅಧಿವೇಶನ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿ ಕಬ್ಬಿನ ಗದ್ದೆಯಲ್ಲಿ ಇರಿಸಲಾಗಿತ್ತು. ಆದರೆ ಈ ಪ್ರಕರಣದ ಆರೋಪಿಯನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ತನಿಖೆ ಮಾಡಲು ಆರೋಪಿಯನ್ನು ಕಸ್ಟಡಿಗೆ ಪಡೆಯಬೇಕಿತ್ತು. ಅದನ್ನು ಮಾಡದೆ ತನಿಖೆ ಸ್ಥಗಿತಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಔಟ್ ಗೋಯಿಂಗ್ ಸಿಎಂ. ಇಂತಹ ಸಮಯದಲ್ಲಿ ಹಾಲು ನೀಡುವ ಹಸುವಿಗೆ ನ್ಯಾಯ ನೀಡುವ ಕೆಲಸ ಮಾಡಲಿ. ಗೋಮಾತೆಗೆ ಮೋಸ ಮಾಡಬೇಡಿ ಎಂದರು. ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಇನ್ನು ಈ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ. ಸಿಎಂ ಕುರ್ಚಿಗಾಗಿ ಜಗಳ ನಡೆಯುತ್ತಿದೆ ಎಂದು ಸುದ್ದಿಗಾರರ ಕೆಲ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications