ಹೈಗ್ರೌಂಡ್ಸ್ ನಲ್ಲಿ ಮಟ್ಟು ವಿರುದ್ಧ ಕೇಸ್ ದಾಖಲಿಸಿದ ಬಿಜೆಪಿ
"ಮೊದಲನೇ ದಿನದಿಂದಲೂ ಮಟ್ಟು ಅವರನ್ನು ಬಿಜೆಪಿ ಗುರಿಯಾಗಿಸಿದೆ. ಉಡುಪಿ ಚಲೋ ಚಳವಳಿಯಲ್ಲಿ ಮಟ್ಟು ಅವರು ಪ್ರಮುಖ ಪಾತ್ರ ವಹಿಸಿದಂದಿನಿಂದ ಅವರನ್ನು ಅನಗತ್ಯವಾಗಿ ಟೀಕಿಸುತ್ತಿದೆ. ಈ ಪ್ರಸ್ತುತ ವಿಷಯಕ್ಕೆ ಕಾಮೆಂಟ್ ಮಾಡುವ ಅಗತ್ಯವೇ ಇಲ್ಲ."
ಬೆಂಗಳೂರು, ನವೆಂಬರ್ 07 : "ಇಂದಿರಾ ಗಾಂಧಿಗೆ ಕೊನೆಗೆ ಏನಾಯ್ತು ಗೊತ್ತಲ್ಲ? ಅದೇ ನಿಮ್ಮ ಮೋದಿಯವರಿಗೂ ಆಗಬೇಕೆಂದು ನಿಮ್ಮ ಆಸೆಯೆ?" ಎಂದು ಫೇಸ್ ಬುಕ್ಕಿನಲ್ಲಿ ಬರೆದು ವಿವಾದದ ಕಿಡಿ ಹತ್ತಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರ ವಿರುದ್ಧ ಕರ್ನಾಟಕ ಬಿಜೆಪಿ ದೂರು ದಾಖಲಿಸಿದೆ.
ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಂತೆ ಈ ಬಗೆಯ ವಿವಾದಾತ್ಮಕ ಹೇಳಿಕೆ ನೀಡಿರುವ ದಿನೇಶ್ ಅಮಿನ್ ಮಟ್ಟು ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದೂ ಕರ್ನಾಟಕ ಬಿಜೆಪಿಯ ಐಟಿ ಘಟಕ ಸೋಮವಾರ ಆಗ್ರಹಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 504, 505 ಮತ್ತು 506ರ ಅಡಿಯಲ್ಲಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿರುವ ಕಾರಣ ಎಫ್ಐಆರ್ ದಾಖಲಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. [ಪಿಎಂ ಮೋದಿ ಬಗ್ಗೆ ದಿನೇಶ್ ಅಮಿನ್ ಮಟ್ಟು ಕಾಮೆಂಟ್ ಸರಿಯೆ?]

ಫೇಸ್ ಬುಕ್ಕಿನಲ್ಲಿ ತಾವು ನೀಡಿರುವ ಪ್ರತಿಕ್ರಿಯೆಯ ಆಯ್ದ ಭಾಗವನ್ನಷ್ಟೇ ಕತ್ತರಿಸಿ ಅದಕ್ಕೆ ಕಲ್ಪಿತ ವ್ಯಾಖ್ಯಾನಗಳನ್ನು ಸೇರಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು ಅವರು ಪ್ರತಿಸ್ಪಂದಿಸಿದ್ದಾರೆ.
ಮಟ್ಟು ಬೆನ್ನಿಗೆ ನಿಂತ ಕಾಂಗ್ರೆಸ್
ದಿನೇಶ್ ಅಮಿನ್ ಮಟ್ಟು ಅವರ ತಲೆದಂಡಕ್ಕೆ ಕರ್ನಾಟಕ ಬಿಜೆಪಿ ಅಣಿಯಾಗಿ ನಿಂತಿದ್ದರೆ, ಕರ್ನಾಟಕ ಕಾಂಗ್ರೆಸ್ ಮಟ್ಟು ಬೆನ್ನಿಗೆ ನಿಂತಿದೆ. "ಮೊದಲನೇ ದಿನದಿಂದಲೂ ಮಟ್ಟು ಅವರನ್ನು ಬಿಜೆಪಿ ಗುರಿಯಾಗಿಸಿದೆ. ಉಡುಪಿ ಚಲೋ ಚಳವಳಿಯಲ್ಲಿ ಮಟ್ಟು ಅವರು ಪ್ರಮುಖ ಪಾತ್ರ ವಹಿಸಿದಂದಿನಿಂದ ಅವರನ್ನು ಅನಗತ್ಯವಾಗಿ ಟೀಕಿಸುತ್ತಿದೆ. ಈ ಪ್ರಸ್ತುತ ವಿಷಯಕ್ಕೆ ಕಾಮೆಂಟ್ ಮಾಡುವ ಅಗತ್ಯವೇ ಇಲ್ಲ" ಎಂದು ಕರ್ನಾಟಕ ಕಾಂಗ್ರೆಸ್ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಹೇಳಿದ್ದಾರೆ.
"ಪಕ್ಷಕ್ಕೂ ಅವರ ಹೇಳಿಕೆಗೂ ಸಂಬಂಧವೇ ಇಲ್ಲ. ಅವರೊಬ್ಬ ಅಧಿಕಾರಿ ಅಷ್ಟೇ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಲ್ಲ. ಅವರು ಆಡಿದ ಮಾತುಗಳಲ್ಲಿ ತಪ್ಪಿರಬಹುದು, ಆದರೆ ಬೆದರಿಕೆ ಒಡ್ಡುವಂಥ ಇಚ್ಛೆ ಅವರಿಗಿರಲಿಕ್ಕಿಲ್ಲ" ಎಂದು ಬ್ರಿಜೇಶ್ ಕಾಳಪ್ಪ ಹೇಳಿಕೆ ನೀಡಿದ್ದಾರೆ.
"ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ಅವರನ್ನು ಹೋಲಿಕೆ ಮಾಡುವುದೇ ತಪ್ಪು. ಏಕೆಂದರೆ, ಅಂದಿನ ಪರಿಸ್ಥಿತಿ ಮತ್ತು ಇಂದಿನ ಪರಿಸ್ಥಿತಿ ವಿಭಿನ್ನವಾಗಿವೆ. ಯಾವುದೋ ಸಂದರ್ಭದಲ್ಲಿ ಆ ಮಾತುಗಳು ಮಟ್ಟು ಅವರಿಂದ ಬಂದಿರಬಹುದು" ಎಂದು ದಿನೇಶ್ ಗುಂಡೂ ರಾವ್ ಅವರು, ಮಟ್ಟು ಹೇಳಿಕೆಯಿಂದ ಕಾಂಗ್ರೆಸ್ಸಿಗೆ ಮುಜುಗರವಾಗಿದೆಯೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications