ಬೆಂಗಳೂರಿನ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ರಾಮಲಿಂಗಾ ರೆಡ್ಡಿ
ಬೆಂಗಳೂರು, ಮಾ.12: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ ಕ್ಷೇತ್ರದ ಅಭಿವೃದ್ಧಿ ಎಂದು ಹೇಳಬೇಕು' ಎಂದು ಆಗ್ರಹಿಸಿದರು.
'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಶಾಸಕರ 15 ಕ್ಷೇತ್ರಗಳಿಗೆ ಒಟ್ಟು 9,888 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಕಾಂಗ್ರೆಸ್ ಶಾಸಕರ 12 ಕ್ಷೇತ್ರಗಳಿಗೆ 2,186.48 ಕೋಟಿ ರೂಪಾಯಿ ನೀಡಿದೆ. ಇನ್ನು ಜೆಡಿಎಸ್ ಶಾಸಕರಿರುವ ದಾಸರಹಳ್ಳಿಗೆ 288.5 ಕೋಟಿ ಕೊಟ್ಟಿದ್ದಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗಿಂತ 5 ಪಟ್ಟು ಹೆಚ್ಚಿನ ಅನುದಾನವನ್ನು ಬಿಜೆಪಿಯವರಿಗೆ ನೀಡಲಾಗಿದೆ' ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೆಂಗಳೂರಿಗೆ 7,200 ಕೋಟಿ, ಸಮ್ಮಿಶ್ರ ಸರ್ಕಾರದಲ್ಲಿ 1 ಸಾವಿರ ಕೋಟಿ ಹಣವನ್ನು ವಿವಿಧ ಕ್ಷೇತ್ರಗಳಿಗೆ ಅನುದಾನವಾಗಿ ನೀಡಿತ್ತು. ಈ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂಪಡೆದು ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಮರುಹಂಚಿಕೆ ಮಾಡಲಾಗಿದೆ. ಇತ್ತೀಚೆಗೆ ಅಮೃತ್ ನಗರ ಯೋಜನೆ ಅಡಿಯಲ್ಲಿ 3600 ಕೋಟಿ ಕೊಟ್ಟಿದ್ದಾರೆ. 1500 ಕೋಟಿಯನ್ನು ಮಳೆ ನೀರುಗಾಲುವೆಗಾಗಿ ನೀಡಲಾಗಿದೆ ಎಂದು ವಿವರಿಸಿದರು.
'ಮುಖ್ಯಮಂತ್ರಿಗಳ ನಗರೋತ್ಥಾನ, ಅಮೃತ್ ನಗರ ಯೋಜನೆ ಹಾಗೂ ಬೃಹತ್ ಮಳೆ ನೀರುಗಾಲುವೆಗೆ ನೀಡಲಾಗಿರುವ ಅನುದಾನ ಎಲ್ಲದರಲ್ಲೂ ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಮಳೆ ನೀರುಗಾಲುವೆಗೆ ನೀಡಲಾಗಿರುವ ಅನುದಾನದಲ್ಲಿ ಬಿಟಿಎಂ ಹಾಗೂ ಜಯನಗರ ಕ್ಷೇತ್ರಗಳಿಗೆ ಶೂನ್ಯ ಅನುದಾನ ಕೊಟ್ಟಿದ್ದಾರೆ' ಎಂದು ಕಿಡಿಕಾರಿದರು.
ಬೆಂಗಳೂರು: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ
ಈ ಮೂರು ಯೋಜನೆಗಳು ಸೇರಿದಂತೆ ಬಿಜೆಪಿ ಶಾಸಕರ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ 821.75 ಕೋಟಿ, ಬಸವನಗುಡಿ 377.5, ಬೊಮ್ಮನಹಳ್ಳಿ 915.83, ಸಿವಿ ರಾಮನ್ ನಗರ 485.93, ಚಿಕ್ಕಪೇಟೆ 380.4, ಗೋವಿಂದರಾಜನಗರ 630.5, ಮಹದೇವಪುರ 752.85, ಮಲ್ಲೇಶ್ವರಂ 403.6, ಪದ್ಮನಾಭನಗರ 415.24, ರಾಜಾಜಿನಗರ 335.2, ಯಲಹಂಕ, 665.56, ಕೆ.ಆರ್ ಪುರಂ 926.7, ಮಹಾಲಕ್ಷ್ಮಿ ಬಡಾವಣೆ 527.25, ರಾಜರಾಜೇಶ್ವರಿ ನಗರ 1253.35, ಯಶವಂತಪುರ 1046.48 ಕೋಟಿ ಅನುದಾನ ನೀಡಲಾಗಿದೆ.
ಉಳಿದಂತೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಾದ ಬಿಟಿಎಂ ಬಡಾವಣೆ 232.84, ಬ್ಯಾಟರಾಯನಪುರ 253.39, ಚಾಮರಾಜಪೇಟೆ 136, ಗಾಂಧಿನಗರ 202.41, ಹೆಬ್ಬಾಶ 196.84, ಜಯನಗರ 182, ಪುಲಕೇಶಿನಗರ 140.95, ಸರ್ವಜ್ಞನಗರ 225.52, ಶಾಂತಿನಗರ 159.75, ವಿಜಯನಗರ 198.26, ಆನೇಕಲ್ 10, ಶಿವಾಜಿ ನಗರಕ್ಕೆ 248.52 ಕೋಟಿ ನೀಡಲಾಗಿದೆ. ಇನ್ನು ಜೆಡಿಎಶ್ ಶಾಸಕರಿರುವ ದಾಸರಹಳ್ಳಿ ಕ್ಷೇತ್ರಕ್ಕೆ 288.5 ಕೋಟಿ ಅನುದಾನ ನೀಡಲಾಗಿದೆ. ಹೀಗೆ ಬಿಜೆಪಿಯ ಇಂದಿನ ಹಾಗೂ ಈ ಹಿಂದೆ ಇದ್ದ ಮುಖ್ಯಮಂತ್ರಿಗಳು ಈ ರೀತಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರು ಕೂಡ ತೆರಿಗೆ ಪಾವತಿಸುತ್ತಿದ್ದು, ಬಿಜೆಪಿ ಸರ್ಕಾರದಲ್ಲಿ ಇಂತಹ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ' ಎಂದು ಆರೋಪಿಸಿದರು.
'ಬಿಜೆಪಿ ಸರ್ಕಾರ ಸಮಗ್ರ ಬೆಂಗಳೂರು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿ ಈ ರೀತಿ ಅನುದಾನದಲ್ಲಿ ತಾರತಮ್ಯ ಮಾಡಿದರೆ ಬೆಂಗಳೂರು ಸಮಗ್ರ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತದೆ? ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ಸಂದರ್ಭದಲ್ಲಿ ಯಾರೂ ಕೂಡ ಅದಾನ ಕಡಿಮೆಯಾಗಿದೆ ಎಂದು ಹೇಳಿರಲಿಲ್ಲ. ಕಾಂಗ್ರೆಸ್ ಶಆಸಕರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದರೂ ಇಷ್ಟು ದೊಡ್ಡ ಪ್ರಮಾಣದಲ್ಲಿ ತಾರತಮ್ಯ ಮಾಡಿರಲಿಲ್ಲ. ಈ ವಿಚಾರವಾಗಿ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಹಾಗೂ ಈ ವಿಚಾರವನ್ನು ವಿಧಾನಸಭೆ ಕಲಾಪದಲ್ಲಿ ಚರ್ಚಿಸುತ್ತೇನೆ' ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications