ಬೆಡ್ ಮಾಫಿಯಾ: "ಪ್ಲೀಸ್ ನಾಟಕ ಆಡುವುದನ್ನು ಬಿಟ್ಟು ಕೆಲಸ ಮಾಡಿ"
ಬೆಂಗಳೂರು, ಮೇ 04: ಕೊವಿಡ್-19 ರೋಗಿಗಳಿಗೆ ಹಾಸಿಗೆ ನೀಡುವ ವಿಚಾರದಲ್ಲೂ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವು ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಬೊಟ್ಟು ಮಾಡುತ್ತಿರುವುದು ಏಕೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಪ್ರಶ್ನೆ ಮಾಡಿದ್ದಾರೆ.
"ಇಂದು ಬಿಜೆಪಿ ಸಂಸದರು ಹಾಗೂ ಶಾಸಕರು ತಮ್ಮ ವೈಫಲ್ಯಕ್ಕೆ ಬಿಬಿಎಂಪಿ ಅಧಿಕಾರಿಗಳನ್ನು ದೂರುತ್ತಿರುವುದಕ್ಕೆ ಎರಡು ಕಾರಣಗಳನ್ನು ನೀಡಿದ್ದಾರೆ. ಒಂದು ಬಿಜೆಪಿ ಸರ್ಕಾರಕ್ಕೆ ತನ್ನದೇ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಮೇಲೆ ನಿಯಂತ್ರಣ ಹೊಂದುವುದಕ್ಕೆ ಸಾಧ್ಯವಾಗಿಲ್ಲವೇ" ಎಂದು ಪ್ರಶ್ನಿಸಿದ್ದಾರೆ.
ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ
ಎರಡನೆಯದಾಗಿ, "ಬಿಜೆಪಿಯು ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಹಾಗೂ ಸರ್ಕಾರದ ವೈಫಲ್ಯದಿಂದ ಜನರ ಲಕ್ಷ್ಯವನ್ನು ಬೇರೆಡೆ ಸೆಳೆಯುವುದಕ್ಕೆ ಅಧಿಕಾರಿಗಳ ವಿರುದ್ಧ ದೂರುತ್ತಿದ್ದೀರಾ" ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.
ನಾಟಕವನ್ನು
ಬಿಟ್ಟು
ಕೆಲಸ
ಮಾಡಿ:
"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಜನರು ಹಾಸಿಗೆಗಳು ಸಿಗದೇ ನರಕಯಾತನೆ ಅನುಭವಿಸುತ್ತಿದ್ದಾರೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ದಯವಿಟ್ಟು ನಾಟಕ ಆಡುವುದನ್ನು ಬಿಟ್ಟು ಅಗತ್ಯವಿರುವ ರೋಗಿಗಳಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಕೆಲಸವನ್ನು ಮಾಡಿರಿ" ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.
BJP MP & MLAs are blaming BBMP for failures. This means
— Krishna Byre Gowda (@krishnabgowda) May 4, 2021
1.BJP Govt is not in control of its own officers and administration. Or
2.This is tactic to divert blame to officers to cover BJP failures.
Instead of this drama, pls just get beds to people who are struggling to breathe.
ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಹಾಸಿಗೆ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿ ಅವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.